AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್​ರನ್ನು ಹೊಗಳಿದ್ದಕ್ಕೆ ಪತ್ನಿಯ ಮೈ ಸುಟ್ಟು, ತ್ರಿವಳಿ ತಲಾಖ್ ನೀಡಿದ ಗಂಡ

ಉತ್ತರ ಪ್ರದೇಶದ ಅಯೋಧ್ಯೆಯ ಕೋಟ್ವಾಲಿ ನಗರ ಪ್ರದೇಶದ ದೆಹಲಿ ದರ್ವಾಜಾ ಪ್ರದೇಶದಲ್ಲಿ ಈ ಶಾಕಿಂಗ್ ಘಟನೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಹೊಗಳಿದ್ದಕ್ಕೆ ಕೋಪದ ಭರದಲ್ಲಿ ಗಂಡ ತನ್ನ ಹೆಂಡತಿಯ ಮೈಯನ್ನು ಸುಟ್ಟು, ಆಕೆಗೆ ತ್ರಿವಳಿ ತಲಾಖ್ ನೀಡುವ ನಿರ್ಧಾರ ಕೈಗೊಂಡಿದ್ದಾನೆ.

ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್​ರನ್ನು ಹೊಗಳಿದ್ದಕ್ಕೆ ಪತ್ನಿಯ ಮೈ ಸುಟ್ಟು, ತ್ರಿವಳಿ ತಲಾಖ್ ನೀಡಿದ ಗಂಡ
ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್​ರನ್ನು ಹೊಗಳಿದ್ದಕ್ಕೆ ಪತ್ನಿಯ ಮೈ ಸುಟ್ಟು, ತ್ರಿವಳಿ ತಲಾಖ್ ನೀಡಿದ ಗಂಡ
ಸುಷ್ಮಾ ಚಕ್ರೆ
|

Updated on: Aug 21, 2024 | 10:45 PM

Share

ಅಯೋಧ್ಯೆ: ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹೊಗಳಿದ್ದಕ್ಕೆ ಮುಸ್ಲಿಂ ಮಹಿಳೆಯೊಬ್ಬರು ಪತಿಯಿಂದ ಭೀಕರ ಶಿಕ್ಷೆಗೆ ಗುರಿಯಾಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬೆಳಕಿಗೆ ಬಂದಿದೆ. ಸದ್ಯದ ಮಾಹಿತಿ ಪ್ರಕಾರ, ಪತಿ ಮೊದಲು ತನ್ನ ಪತ್ನಿಗೆ ಬೆಂಕಿ ಹಚ್ಚಿ ಕೊಲ್ಲಲು ನೋಡಿದ್ದಾನೆ. ನಂತರ ಆಕೆಗೆ ತ್ರಿವಳಿ ತಲಾಖ್ ನೀಡಿ ವಿಚ್ಛೇದನ ನೀಡಿದ್ದಾನೆ.

ಬಹ್ರೈಚ್ ಮೂಲದ ಮಹಿಳೆ ಅಯೋಧ್ಯೆಯ ಅರ್ಷದ್ ಎಂಬಾತನನ್ನು ಮದುವೆಯಾಗಿದ್ದಳು. ಅವರ ಮದುವೆಯ ನಂತರ, ಆ ಮಹಿಳೆ ಅಯೋಧ್ಯೆಗೆ ಆಗಮಿಸಿದಾಗ ಆಕೆ ಉತ್ತರ ಪ್ರದೇಶದ ಪರಿಸರದಿಂದ ಪ್ರಭಾವಿತರಾದರು. ಆಕೆ ಆಗಾಗ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಪ್ರಧಾನಿ ನರೇಂದ್ರ ಮೋದಿಯನ್ನು ಹೊಗಳುತ್ತಿದ್ದರು. ಇದರಿಂದ ಕುಪಿತಗೊಂಡ ಪತಿ ಆಕೆಯನ್ನು ಸುಟ್ಟು ಹಾಕಿದ್ದಲ್ಲದೆ ವಿಚ್ಛೇದನವನ್ನೂ ನೀಡಿದ್ದಾನೆ.

ಇದನ್ನೂ ಓದಿ: Modi in Poland: ಪೋಲೆಂಡ್​ನಲ್ಲೂ ಮೊಳಗಿದ ಭಾರತ್ ಮಾತಾ ಕಿ ಜೈ, ಜೈ ಶ್ರೀರಾಮ್ ಘೋಷಣೆ; ಮೋದಿಗೆ ರಾಖಿ ಕಟ್ಟಿದ ಅನಿವಾಸಿಗಳು

ದೆಹಲಿ ದರ್ವಾಜಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತೆ ಈಗ ಅಯೋಧ್ಯೆ ಮತ್ತು ಬಹ್ರೈಚ್ ಜಿಲ್ಲೆಗಳ ಪೊಲೀಸರಿಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡುತ್ತಿದ್ದರೂ ಇಲ್ಲಿಯವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಪ್ರಧಾನಿ ಮೋದಿ ಮತ್ತು ಸಿಎಂ ಯೋಗಿ ಆದಿತ್ಯನಾಥ್ ಬಗ್ಗೆ ಅರ್ಷದ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪವೂ ಇದೆ.

ಇದನ್ನೂ ಓದಿ: ತ್ರಿವಳಿ ತಲಾಖ್‌ಗೆ ಸಂಬಂಧಿಸಿದ ಕಾನೂನನ್ನು ಸುಪ್ರೀಂಕೋರ್ಟ್​​ನಲ್ಲಿ ಸಮರ್ಥಿಸಿಕೊಂಡ ಕೇಂದ್ರ

ಅಂದಹಾಗೆ, ಭಾರತೀಯ ಸಂಸತ್ತು 2019ರ ಜುಲೈ 30ರಂದು ಮುಸ್ಲಿಂ ಮಹಿಳೆಯರ (ವಿವಾಹದ ಹಕ್ಕುಗಳ ರಕ್ಷಣೆ) ಮಸೂದೆ ಎಂದು ಔಪಚಾರಿಕವಾಗಿ ಕರೆಯಲ್ಪಡುವ ತ್ರಿವಳಿ ತಲಾಖ್ ಮಸೂದೆಯನ್ನು ಅಂಗೀಕರಿಸಿತು. ಈ ಮಸೂದೆಯು ತ್ವರಿತ ತ್ರಿವಳಿ ತಲಾಖ್ ಅಥವಾ “ತಲಾಕ್-ಇ-ಬಿದ್ದತ್” ಆಚರಣೆಯನ್ನು ಅಪರಾಧ ಎಂದು ಹೇಳುತ್ತದೆ. ಇದರ ಅಡಿಯಲ್ಲಿ ಮುಸ್ಲಿಂ ಪುರುಷನು “ತಲಾಖ್” ಎಂಬ ಪದವನ್ನು ಮೂರು ಬಾರಿ ಉಚ್ಚರಿಸುವ ಮೂಲಕ ತನ್ನ ಹೆಂಡತಿಯನ್ನು ವಿಚ್ಛೇದನ ಮಾಡುವ ಸಂಪ್ರದಾಯವನ್ನು ಮಾಡಿದರೆ ಶಿಕ್ಷೆಗೆ ಒಳಗಾಗಬೇಕಾಗುತ್ತದೆ.

ಈ ಮಸೂದೆಯ ಅಂಗೀಕಾರವು ಭಾರತದಲ್ಲಿ ಮಹಿಳಾ ಹಕ್ಕುಗಳಿಗೆ ಮಹತ್ವದ ಜಯವನ್ನು ತಂದುಕೊಟ್ಟಿತು. ಇದು ಅನೇಕ ಮುಸ್ಲಿಂ ಮಹಿಳೆಯರನ್ನು ಹಠಾತ್ ಮತ್ತು ಏಕಪಕ್ಷೀಯ ವಿಚ್ಛೇದನಕ್ಕೆ ಗುರಿಯಾಗುವಂತೆ ಮಾಡಿದ ದೀರ್ಘಕಾಲದ ಸಮಸ್ಯೆಯನ್ನು ಪರಿಹರಿಸುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ