ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್​ರನ್ನು ಹೊಗಳಿದ್ದಕ್ಕೆ ಪತ್ನಿಯ ಮೈ ಸುಟ್ಟು, ತ್ರಿವಳಿ ತಲಾಖ್ ನೀಡಿದ ಗಂಡ

ಉತ್ತರ ಪ್ರದೇಶದ ಅಯೋಧ್ಯೆಯ ಕೋಟ್ವಾಲಿ ನಗರ ಪ್ರದೇಶದ ದೆಹಲಿ ದರ್ವಾಜಾ ಪ್ರದೇಶದಲ್ಲಿ ಈ ಶಾಕಿಂಗ್ ಘಟನೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಸಿಎಂ ಯೋಗಿ ಆದಿತ್ಯನಾಥ್ ಅವರನ್ನು ಹೊಗಳಿದ್ದಕ್ಕೆ ಕೋಪದ ಭರದಲ್ಲಿ ಗಂಡ ತನ್ನ ಹೆಂಡತಿಯ ಮೈಯನ್ನು ಸುಟ್ಟು, ಆಕೆಗೆ ತ್ರಿವಳಿ ತಲಾಖ್ ನೀಡುವ ನಿರ್ಧಾರ ಕೈಗೊಂಡಿದ್ದಾನೆ.

ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್​ರನ್ನು ಹೊಗಳಿದ್ದಕ್ಕೆ ಪತ್ನಿಯ ಮೈ ಸುಟ್ಟು, ತ್ರಿವಳಿ ತಲಾಖ್ ನೀಡಿದ ಗಂಡ
ಪ್ರಧಾನಿ ಮೋದಿ, ಯೋಗಿ ಆದಿತ್ಯನಾಥ್​ರನ್ನು ಹೊಗಳಿದ್ದಕ್ಕೆ ಪತ್ನಿಯ ಮೈ ಸುಟ್ಟು, ತ್ರಿವಳಿ ತಲಾಖ್ ನೀಡಿದ ಗಂಡ

Updated on: Aug 21, 2024 | 10:45 PM

ಅಯೋಧ್ಯೆ: ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹೊಗಳಿದ್ದಕ್ಕೆ ಮುಸ್ಲಿಂ ಮಹಿಳೆಯೊಬ್ಬರು ಪತಿಯಿಂದ ಭೀಕರ ಶಿಕ್ಷೆಗೆ ಗುರಿಯಾಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬೆಳಕಿಗೆ ಬಂದಿದೆ. ಸದ್ಯದ ಮಾಹಿತಿ ಪ್ರಕಾರ, ಪತಿ ಮೊದಲು ತನ್ನ ಪತ್ನಿಗೆ ಬೆಂಕಿ ಹಚ್ಚಿ ಕೊಲ್ಲಲು ನೋಡಿದ್ದಾನೆ. ನಂತರ ಆಕೆಗೆ ತ್ರಿವಳಿ ತಲಾಖ್ ನೀಡಿ ವಿಚ್ಛೇದನ ನೀಡಿದ್ದಾನೆ.

ಬಹ್ರೈಚ್ ಮೂಲದ ಮಹಿಳೆ ಅಯೋಧ್ಯೆಯ ಅರ್ಷದ್ ಎಂಬಾತನನ್ನು ಮದುವೆಯಾಗಿದ್ದಳು. ಅವರ ಮದುವೆಯ ನಂತರ, ಆ ಮಹಿಳೆ ಅಯೋಧ್ಯೆಗೆ ಆಗಮಿಸಿದಾಗ ಆಕೆ ಉತ್ತರ ಪ್ರದೇಶದ ಪರಿಸರದಿಂದ ಪ್ರಭಾವಿತರಾದರು. ಆಕೆ ಆಗಾಗ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಪ್ರಧಾನಿ ನರೇಂದ್ರ ಮೋದಿಯನ್ನು ಹೊಗಳುತ್ತಿದ್ದರು. ಇದರಿಂದ ಕುಪಿತಗೊಂಡ ಪತಿ ಆಕೆಯನ್ನು ಸುಟ್ಟು ಹಾಕಿದ್ದಲ್ಲದೆ ವಿಚ್ಛೇದನವನ್ನೂ ನೀಡಿದ್ದಾನೆ.

ಇದನ್ನೂ ಓದಿ: Modi in Poland: ಪೋಲೆಂಡ್​ನಲ್ಲೂ ಮೊಳಗಿದ ಭಾರತ್ ಮಾತಾ ಕಿ ಜೈ, ಜೈ ಶ್ರೀರಾಮ್ ಘೋಷಣೆ; ಮೋದಿಗೆ ರಾಖಿ ಕಟ್ಟಿದ ಅನಿವಾಸಿಗಳು

ದೆಹಲಿ ದರ್ವಾಜಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತೆ ಈಗ ಅಯೋಧ್ಯೆ ಮತ್ತು ಬಹ್ರೈಚ್ ಜಿಲ್ಲೆಗಳ ಪೊಲೀಸರಿಗೆ ಕ್ರಮ ಕೈಗೊಳ್ಳುವಂತೆ ಮನವಿ ಮಾಡುತ್ತಿದ್ದರೂ ಇಲ್ಲಿಯವರೆಗೆ ಯಾವುದೇ ಪ್ರಕರಣ ದಾಖಲಾಗಿಲ್ಲ. ಪ್ರಧಾನಿ ಮೋದಿ ಮತ್ತು ಸಿಎಂ ಯೋಗಿ ಆದಿತ್ಯನಾಥ್ ಬಗ್ಗೆ ಅರ್ಷದ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಆರೋಪವೂ ಇದೆ.

ಇದನ್ನೂ ಓದಿ: ತ್ರಿವಳಿ ತಲಾಖ್‌ಗೆ ಸಂಬಂಧಿಸಿದ ಕಾನೂನನ್ನು ಸುಪ್ರೀಂಕೋರ್ಟ್​​ನಲ್ಲಿ ಸಮರ್ಥಿಸಿಕೊಂಡ ಕೇಂದ್ರ

ಅಂದಹಾಗೆ, ಭಾರತೀಯ ಸಂಸತ್ತು 2019ರ ಜುಲೈ 30ರಂದು ಮುಸ್ಲಿಂ ಮಹಿಳೆಯರ (ವಿವಾಹದ ಹಕ್ಕುಗಳ ರಕ್ಷಣೆ) ಮಸೂದೆ ಎಂದು ಔಪಚಾರಿಕವಾಗಿ ಕರೆಯಲ್ಪಡುವ ತ್ರಿವಳಿ ತಲಾಖ್ ಮಸೂದೆಯನ್ನು ಅಂಗೀಕರಿಸಿತು. ಈ ಮಸೂದೆಯು ತ್ವರಿತ ತ್ರಿವಳಿ ತಲಾಖ್ ಅಥವಾ “ತಲಾಕ್-ಇ-ಬಿದ್ದತ್” ಆಚರಣೆಯನ್ನು ಅಪರಾಧ ಎಂದು ಹೇಳುತ್ತದೆ. ಇದರ ಅಡಿಯಲ್ಲಿ ಮುಸ್ಲಿಂ ಪುರುಷನು “ತಲಾಖ್” ಎಂಬ ಪದವನ್ನು ಮೂರು ಬಾರಿ ಉಚ್ಚರಿಸುವ ಮೂಲಕ ತನ್ನ ಹೆಂಡತಿಯನ್ನು ವಿಚ್ಛೇದನ ಮಾಡುವ ಸಂಪ್ರದಾಯವನ್ನು ಮಾಡಿದರೆ ಶಿಕ್ಷೆಗೆ ಒಳಗಾಗಬೇಕಾಗುತ್ತದೆ.

ಈ ಮಸೂದೆಯ ಅಂಗೀಕಾರವು ಭಾರತದಲ್ಲಿ ಮಹಿಳಾ ಹಕ್ಕುಗಳಿಗೆ ಮಹತ್ವದ ಜಯವನ್ನು ತಂದುಕೊಟ್ಟಿತು. ಇದು ಅನೇಕ ಮುಸ್ಲಿಂ ಮಹಿಳೆಯರನ್ನು ಹಠಾತ್ ಮತ್ತು ಏಕಪಕ್ಷೀಯ ವಿಚ್ಛೇದನಕ್ಕೆ ಗುರಿಯಾಗುವಂತೆ ಮಾಡಿದ ದೀರ್ಘಕಾಲದ ಸಮಸ್ಯೆಯನ್ನು ಪರಿಹರಿಸುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
Follow Us