AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ನಟಿಯ ದೇಹವನ್ನು ತುಂಡು-ತುಂಡಾಗಿ ಕತ್ತರಿಸಿ ಸುಟ್ಟು ರಸ್ತೆಬದಿ ಬಿಸಾಡಿದ ಬ್ಯಾಂಕರ್

ಇಟಲಿಯ ನಟಿಯನ್ನು ಕೊಂದು, ಆಕೆಯ ಶವವನ್ನು ಕತ್ತರಿಸಿ, ಯಾರಿಗೂ ಗುರುತು ಗೊತ್ತಾಗಬಾರದು ಎಂದು ಆಕೆಯ ದೇಹದ ಭಾಗಗಳನ್ನು ಸುಟ್ಟು, ನಾಲ್ಕು ಗೋಣಿಚೀಲಗಳಲ್ಲಿ ಪ್ಯಾಕ್ ಮಾಡಲಾಗಿತ್ತು.

Shocking News: ನಟಿಯ ದೇಹವನ್ನು ತುಂಡು-ತುಂಡಾಗಿ ಕತ್ತರಿಸಿ ಸುಟ್ಟು ರಸ್ತೆಬದಿ ಬಿಸಾಡಿದ ಬ್ಯಾಂಕರ್
ಸಾಂಕೇತಿಕ ಚಿತ್ರ
TV9 Web
| Edited By: |

Updated on: Mar 31, 2022 | 8:10 PM

Share

ನವದೆಹಲಿ: 26 ವರ್ಷದ ನಟಿಯನ್ನು ಕೊಂದು ಆಕೆಯ ದೇಹವನ್ನು ತುಂಡು- ತುಂಡುಗಳಾಗಿ ಕತ್ತರಿಸಿದ ಆಘಾತಕಾರಿ ಘಟನೆ ಇಟಲಿಯಲ್ಲಿ ನಡೆದಿದೆ. ಈ ಕೃತ್ಯ ಎಸಗಿದ ಆರೋಪದ ಮೇಲೆ ಬ್ಯಾಂಕರ್ ಒಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನಟಿಯನ್ನು ಕೊಲೆ ಮಾಡಿ, ಆಕೆಯ ಶವವನ್ನು ತುಂಡು-ತುಂಡಾಗಿ ಕತ್ತರಿಸಿದ ಬಳಿಕ ಆಕೆಯ ಹೆಣವನ್ನು (Deadbody) ರಸ್ತೆಯೊಂದರ ಪಕ್ಕ ಎಸೆದಿದ್ದರು.

ಮೃತ ನಟಿಯನ್ನು ಕರೋಲ್ ಮಾಲ್ಟೆಸಿ ಎಂದು ಗುರುತಿಸಲಾಗಿದೆ. ಮಾರ್ಚ್ 20ರಂದು ಲೊಂಬಾರ್ಡಿ ಪ್ರದೇಶದ ಪಲ್ಲೈನ್ ​​ಗ್ರಾಮದ ಬಳಿಯ ಬೆಟ್ಟದ ಮೇಲೆ ಮಹಿಳೆಯ ಛಿದ್ರಗೊಂಡ ಶವ ಪತ್ತೆಯಾಗಿತ್ತು. ಆ ನಟಿಯನ್ನು ಸುತ್ತಿಗೆಯಿಂದ ಹೊಡೆದು ಸಾಯಿಸಲಾಗಿದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಇಂಗ್ಲೆಂಡ್​ನ ದೈನಿಕ ಮಿರರ್‌ನ ವರದಿ ಪ್ರಕಾರ, ಮಹಿಳೆಯ ಗುರುತು ಗೊತ್ತಾಗಬಾರದು ಎಂದು ಆಕೆಯ ದೇಹದ ಭಾಗಗಳನ್ನು ಸುಟ್ಟು, ನಾಲ್ಕು ಗೋಣಿಚೀಲಗಳಲ್ಲಿ ಪ್ಯಾಕ್ ಮಾಡಲಾಗಿತ್ತು.

ಈ ಪ್ರಕರಣದಲ್ಲಿ ಡೇವಿಡ್ ಫೊಂಟಾನಾ ಎಂಬ 43 ವರ್ಷದ ವ್ಯಕ್ತಿಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಆತನ ವಿರುದ್ಧ ಕೊಲೆ, ಸಾಕ್ಷ್ಯ ನಾಶ ಮತ್ತು ಮೃತದೇಹವನ್ನು ಬಚ್ಚಿಟ್ಟ ಆರೋಪ ಹೊರಿಸಲಾಗಿದೆ. ಆ ನಟಿಯ ಅಭಿಮಾನಿಯೊಬ್ಬರು ಮುಂದೆ ಬಂದು ಶವವನ್ನು ಗುರುತಿಸಿದ ನಂತರ ಆಕೆಯ ಶವವನ್ನು ಗುರುತಿಸಲಾಯಿತು. ಮೃತ ಮಹಿಳೆ ಮಿಲನ್‌ನ ರೆಸ್ಕಾಲ್ಡಿನಾ ಪುರಸಭೆಯಲ್ಲಿ ವಾಸಿಸುತ್ತಿದ್ದರು.

ಅಡಲ್ಟ್​ ಸಿನಿಮಾದಲ್ಲಿ (ನೀಲಿಚಿತ್ರ) ನಟಿಸುತ್ತಿದ್ದ ಕರೋಲ್ ಮಾಲ್ಟೆಸಿ ಇದಕ್ಕೂ ಮೊದಲು ಸುಗಂಧ ದ್ರವ್ಯವನ್ನು ಮಾರಾಟ ಮಾಡುತ್ತಿದ್ದಳು. ನಂತರ ಕೊವಿಡ್ ಸಮಯದ ಬಳಿಕ ಆಕೆ ವಯಸ್ಕ ಸಿನಿಮಾಗಳಲ್ಲಿ ನಟಿಸಲಾರಂಭಿಸಿದ್ದರು. ವಿಚಾರಣೆ ವೇಳೆ ಆರೋಪಿ ಬ್ಯಾಂಕರ್ ಜನವರಿಯಲ್ಲಿ ನಟಿಯನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಶವವನ್ನು ಫ್ರೀಜರ್‌ನಲ್ಲಿಟ್ಟು ಒಂದು ತಿಂಗಳ ನಂತರ ಅದನ್ನು ರಸ್ತೆ ಪಕ್ಕದಲ್ಲಿ ಎಸೆದು ಬೆಂಕಿ ಹಚ್ಚಿದ್ದಾಗಿ ಒಪ್ಪಿಕೊಂಡಿದ್ದಾನೆ.

ಇದನ್ನೂ ಓದಿ: Murder: ನಾಪತ್ತೆಯಾಗಿದ್ದ ಯುವಕನ ಕತ್ತು ಸೀಳಿ ಕೊಂದು, ಸೂಟ್​ಕೇಸ್​ನಲ್ಲಿ ತುಂಬಿ ಬಿಸಾಡಿದ ಹಂತಕರು

Murder: ಮನೆಯೊಳಗೆ ಮಗ, ಸೊಸೆ, ಮೊಮ್ಮಕ್ಕಳನ್ನು ಕೂಡಿ ಹಾಕಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ವೃದ್ಧ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್