AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಸಿಗರೇಟ್​ನಿಂದ ಸುಟ್ಟು, ಮಾಂಸ ತಿನ್ನಲು ಒತ್ತಾಯ; ಮತಾಂತರಕ್ಕೆ ಒಪ್ಪದ ಹೆಂಡತಿಗೆ ಗಂಡನಿಂದ ಚಿತ್ರಹಿಂಸೆ

ತನ್ನ ಪತಿ ಚಾಂದ್ ಮೊಹಮ್ಮದ್ ತನ್ನ ಧರ್ಮವನ್ನು ಮರೆಮಾಚಿ, ಹಿಂದೂ ಎಂದು ಹೇಳಿಕೊಂಡು ವಂಚನೆಯಿಂದ ಮದುವೆಯಾಗಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.

Shocking News: ಸಿಗರೇಟ್​ನಿಂದ ಸುಟ್ಟು, ಮಾಂಸ ತಿನ್ನಲು ಒತ್ತಾಯ; ಮತಾಂತರಕ್ಕೆ ಒಪ್ಪದ ಹೆಂಡತಿಗೆ ಗಂಡನಿಂದ ಚಿತ್ರಹಿಂಸೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jan 13, 2023 | 1:07 PM

Share

ಲಕ್ನೋ: ಮುಸ್ಲಿಂ ಧರ್ಮದವನನ್ನು ಮದುವೆಯಾಗಿದ್ದ ಹಿಂದೂ ಯುವತಿಗೆ ಆಕೆಯ ಗಂಡ ಮತಾಂತರವಾಗಲು ಒತ್ತಾಯಿಸುತ್ತಿದ್ದ. ಅದಕ್ಕೆ ಆಕೆ ಒಪ್ಪದಿದ್ದಾಗ ಪ್ರತಿದಿನ ಹೊಡೆದು, ಸಿಗರೇಟ್​ನಿಂದ ಸುಟ್ಟು ಚಿತ್ರಹಿಂಸೆ ನೀಡುತ್ತಿದ್ದ. ಅಲ್ಲದೆ, ಬಲವಂತವಾಗಿ ಆಕೆಗೆ ಮಾಂಸ ತಿನ್ನಿಸಲು ಪ್ರಯತ್ನಿಸುತ್ತಿದ್ದ. ಈ ಘಟನೆಯ ಬಗ್ಗೆ ಆ ಮಹಿಳೆಯೇ ತನ್ನ ಗಂಡನ ವಿರುದ್ಧ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಉತ್ತರ ಪ್ರದೇಶದ (Uttar Pradesh) ಲಕ್ನೋದಲ್ಲಿ ಈ ಘಟನೆ ನಡೆದಿದೆ.

ತನ್ನ ಪತಿ ಚಾಂದ್ ಮೊಹಮ್ಮದ್ ತನ್ನ ಧರ್ಮವನ್ನು ಮರೆಮಾಚಿ, ಹಿಂದೂ ಎಂದು ಹೇಳಿಕೊಂಡು ವಂಚನೆಯಿಂದ ಮದುವೆಯಾಗಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಮಹಿಳೆ ತನ್ನ ಗಂಡ ಮೊಹಮ್ಮದ್​ನನ್ನು ಮದುವೆಯಾದ ಬಳಿಕ ಲಕ್ನೋದ ಬಾಡಿಗೆ ಮನೆಯಲ್ಲಿ ವಾಸಿಸಲು ಪ್ರಾರಂಭಿಸಿದರು. ಅಲ್ಲಿ ಆಕೆಗೆ ಆತ ಹಿಂದೂ ಅಲ್ಲ ಮುಸ್ಲಿಂ ಎಂಬುದು ಗೊತ್ತಾಯಿತು.

ಇದನ್ನೂ ಓದಿ: Shocking News: 8 ವರ್ಷದ ಬಾಲಕನ ಗುಪ್ತಾಂಗಕ್ಕೆ ದಾರ ಕಟ್ಟಿ ಚಿತ್ರಹಿಂಸೆ ನೀಡಿದ ವಿದ್ಯಾರ್ಥಿಗಳು!

ಆಕೆ ಇಸ್ಲಾಂ ಧರ್ಮವನ್ನು ಸ್ವೀಕರಿಸಲು ನಿರಾಕರಿಸಿದಾಗ ಮೊಹಮ್ಮದ್ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಸಿಗರೇಟ್ ತುಂಡುಗಳಿಂದ ಸುಟ್ಟು ಹಾಕಿ, ಬಿಸಿ ಎಣ್ಣೆ ಸುರಿದಿದ್ದ ಎಂದು ಆ ಮಹಿಳೆ ಆರೋಪಿಸಿದ್ದಾರೆ. ತನ್ನ ವಿರುದ್ಧ ಪೊಲೀಸರಿಗೆ ದೂರು ನೀಡಿದರೆ ಕೊಲೆ ಮಾಡುವುದಾಗಿ ಮತ್ತು ಸಂಬಂಧಿಕರಿಂದ ಅತ್ಯಾಚಾರ ಮಾಡುವುದಾಗಿ ಬೆದರಿಕೆ ಹಾಕಿದ್ದ ಎಂದು ಆಕೆ ಹೇಳಿದ್ದಾಳೆ.

ಇದನ್ನೂ ಓದಿ: ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಯತ್ನ ಆರೋಪ; ಬೆಂಗಳೂರಿನಲ್ಲಿ ಆಂಧ್ರದ ಮೂವರ ವಿರುದ್ಧ ಎಫ್​ಐಆರ್ ದಾಖಲು

ಗಂಡನ ಚಿತ್ರಹಿಂಸೆ ತಾಳಲಾರದೆ ಆ ಮಹಿಳೆ ಮನೆಯಿಂದ ಓಡಿಹೋಗಿ ದೂರು ದಾಖಲಿಸಲು ಪ್ರಯತ್ನಿಸಿದಾಗ, ಆತ ಆಕೆಯನ್ನು ತಮ್ಮ ಕೋಣೆಯಲ್ಲಿ ಕೂಡಿಹಾಕಿ, ಬೀಗ ಹಾಕಿ ಥಳಿಸಿದ್ದ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಆಕೆ 5 ತಿಂಗಳ ಗರ್ಭಿಣಿಯಾಗಿದ್ದಾಗ ಮೊಹಮ್ಮದ್ ಆಕೆಯ ಹೊಟ್ಟೆಯಲ್ಲಿ ಹೊಡೆದಿದ್ದರಿಂದ ಆಕೆಗೆ ಗರ್ಭಪಾತವಾಗಿತ್ತು ಎಂದು ಆಕೆ ಪೊಲೀಸರೆದುರು ಹೇಳಿಕೊಂಡಿದ್ದಾಳೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್