AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಪ್ರಾಣಿ ಬಲಿ ವೇಳೆ ಕುರಿಯ ಬದಲು ಮನುಷ್ಯನ ತಲೆ ಕತ್ತರಿಸಿದ ಕುಡುಕ!

Crime News: ಎಲ್ಲಮ್ಮ ದೇವಸ್ಥಾನದಲ್ಲಿ ಪ್ರಾಣಿ ಬಲಿಯನ್ನು ಆಯೋಜಿಸಲಾಗಿತ್ತು. ಈ ವೇಳೆ ಕುಡಿತದ ಅಮಲಿನಲ್ಲಿದ್ದ ಪ್ರಾಣಿ ಬಲಿ ನೀಡುವ ಚಲಪತಿ ಕುರಿಯ ಕತ್ತು ಕೊಯ್ಯುವ ಬದಲು ಆ ಕುರಿಯನ್ನು ಹಿಡಿದುಕೊಂಡಿದ್ದವನ ಕತ್ತನ್ನು ಕತ್ತರಿಸಿರುವ ಆಘಾತಕಾರಿ ಘಟನೆ ನಡೆದಿದೆ.

Shocking News: ಪ್ರಾಣಿ ಬಲಿ ವೇಳೆ ಕುರಿಯ ಬದಲು ಮನುಷ್ಯನ ತಲೆ ಕತ್ತರಿಸಿದ ಕುಡುಕ!
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 18, 2022 | 1:04 PM

Share

ಹೈದರಾಬಾದ್: ಕುಡಿತದ ಅಮಲಿನಲ್ಲಿ ಕೆಲವೊಮ್ಮೆ ಏನೇನೋ ಅಪರಾಧಗಳು ನಡೆದುಬಿಡುತ್ತವೆ. ಆಂಧ್ರಪ್ರದೇಶದ (Andhra Pradesh) ಚಿತ್ತೂರು ಜಿಲ್ಲೆಯ ವಲಸಪಲ್ಲಿಯಲ್ಲಿ ನಡೆದ ಪ್ರಾಣಿ ಬಲಿ (animal sacrifice) ಸಂದರ್ಭದಲ್ಲಿ ಕುಡುಕನೊಬ್ಬ ಕುಡಿದ ಅಮಲಿನಲ್ಲಿ ಕುರಿಯ ಬದಲಾಗಿ ಮನುಷ್ಯನನ್ನು ಬಲಿ ಕೊಟ್ಟ ಆಘಾತಕಾರಿ ಘಟನೆ ನಡೆದಿದೆ. ಭಾನುವಾರ ಕುರಿಯ ಬದಲು ಸುರೇಶ್ ಎಂಬ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ. ಸಂಕ್ರಾತಿ ಆಚರಣೆ ವೇಳೆ ಈ ಘಟನೆ ನಡೆದಿದೆ. ಕತ್ತು ಕೊಯ್ದಿದ್ದರಿಂದ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಸುರೇಶ್ ಅವರನ್ನು ಕೂಡಲೇ ಮದನಪೆಲ್ಲೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ, ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಚಲಪತಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಚಲಪತಿ ಪ್ರಾಣಿ ಬಲಿ ನೀಡಿ ಕುರಿಯ ತಲೆಯನ್ನು ಕಡಿಯಬೇಕಿತ್ತು. ಬಲಿ ಕೊಡುವ ವೇಳೆ ಚಲಪತಿ ಕುಡಿದ ಅಮಲಿನಲ್ಲಿದ್ದು, ಆ ವೇಳೆ ಕುರಿಯನ್ನು ಹಿಡಿದಿದ್ದ ಸುರೇಶ್ ಎಂಬಾತನ ಕತ್ತು ಕೊಯ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯ ಎಲ್ಲಮ್ಮ (ಆಂಧ್ರಪ್ರದೇಶದ ದೇವತೆ) ದೇವಸ್ಥಾನದಲ್ಲಿ ಪ್ರಾಣಿ ಬಲಿಯನ್ನು ಆಯೋಜಿಸಲಾಗಿತ್ತು. ಈ ವೇಳೆ ಪ್ರಾಣಿ ಬಲಿ ನೀಡುವ ಚಲಪತಿ ಕುಡಿತದ ಅಮಲಿನಲ್ಲಿದ್ದ. ಹೀಗಾಗಿ, ಕುರಿಯ ಕತ್ತು ಕೊಯ್ಯುವ ಬದಲು ಆ ಕುರಿಯನ್ನು ಹಿಡಿದುಕೊಂಡಿದ್ದವನ ಕತ್ತನ್ನು ಕತ್ತರಿಸಿದ್ದಾನೆ.

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಭಾನುವಾರ ಸಂಕ್ರಾಂತಿ ಆಚರಣೆ ವೇಳೆ ಈ ಘಟನೆ ನಡೆದಿದೆ. ಮದನಪಲ್ಲಿ ಗ್ರಾಮಾಂತರ ಮಂಡಲದ ವಲಸಪಲ್ಲಿಯಲ್ಲಿ ಸಂಪ್ರದಾಯದ ಅಂಗವಾಗಿ ಜನರ ಗುಂಪೊಂದು ಪ್ರಾಣಿ ಬಲಿ ಕೊಡುತ್ತಿದ್ದಾಗ ಈ ಘಟನೆ ನಡೆದಿದೆ. ಗ್ರಾಮದ ಜನರು ಪ್ರತಿ ವರ್ಷ ಸಂಕ್ರಾಂತಿ ಆಚರಣೆಯ ಸಂದರ್ಭದಲ್ಲಿ ಪ್ರಾಣಿಗಳನ್ನು ಬಲಿ ನೀಡಿ ಸ್ಥಳೀಯ ಎಲ್ಲಮ್ಮ ದೇವಸ್ಥಾನದಲ್ಲಿ ಅರ್ಪಿಸುತ್ತಾರೆ. ಕುಡಿದ ಮತ್ತಿನಲ್ಲಿದ್ದ ಚಲಪತಿ ಎಂಬ ಯುವಕ ದೇವಸ್ಥಾನದ ಆವರಣದಲ್ಲಿ ಒಂದರ ಹಿಂದೆ ಒಂದರಂತೆ ಕುರಿಗಳನ್ನು ಬಲಿ ಕೊಡುತ್ತಿದ್ದ ಎನ್ನಲಾಗಿದೆ. ಸುರೇಶ್ ಎಂಬ 35 ವರ್ಷದ ಯುವಕ ತನ್ನ ಸರದಿ ಬಂದಾಗ ಕುರಿಯನ್ನು ಹಿಡಿದುಕೊಂಡು ಮೊಣಕಾಲೂರಿ ನಿಂತಿದ್ದ. ಆದರೆ, ಚಲಪತಿ ಆಕಸ್ಮಿಕವಾಗಿ ಸುರೇಶನ ತಲೆಯನ್ನು ಕತ್ತರಿಸಿದ್ದಾನೆ.

ಇದನ್ನೂ ಓದಿ: Shocking News: ಕಾಳಿ ದೇವಿ ವಿಗ್ರಹದ ಪಾದದ ಮೇಲೆ ಕತ್ತರಿಸಿದ ತಲೆ ಪತ್ತೆ; ಉಳಿದ ದೇಹಕ್ಕಾಗಿ ಪೊಲೀಸರಿಂದ ಹುಡುಕಾಟ

Shocking News: ಅಜ್ಜಿ ಪಕ್ಕ ಮಲಗಿದ್ದ ಮಗುವನ್ನು ಎತ್ತಿಕೊಂಡು ನೀರಿನ ಟ್ಯಾಂಕ್​ನಲ್ಲಿ ಹಾಕಿದ ಕೋತಿಗಳು!

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್