Shocking News: ಪ್ರಾಣಿ ಬಲಿ ವೇಳೆ ಕುರಿಯ ಬದಲು ಮನುಷ್ಯನ ತಲೆ ಕತ್ತರಿಸಿದ ಕುಡುಕ!

Crime News: ಎಲ್ಲಮ್ಮ ದೇವಸ್ಥಾನದಲ್ಲಿ ಪ್ರಾಣಿ ಬಲಿಯನ್ನು ಆಯೋಜಿಸಲಾಗಿತ್ತು. ಈ ವೇಳೆ ಕುಡಿತದ ಅಮಲಿನಲ್ಲಿದ್ದ ಪ್ರಾಣಿ ಬಲಿ ನೀಡುವ ಚಲಪತಿ ಕುರಿಯ ಕತ್ತು ಕೊಯ್ಯುವ ಬದಲು ಆ ಕುರಿಯನ್ನು ಹಿಡಿದುಕೊಂಡಿದ್ದವನ ಕತ್ತನ್ನು ಕತ್ತರಿಸಿರುವ ಆಘಾತಕಾರಿ ಘಟನೆ ನಡೆದಿದೆ.

Shocking News: ಪ್ರಾಣಿ ಬಲಿ ವೇಳೆ ಕುರಿಯ ಬದಲು ಮನುಷ್ಯನ ತಲೆ ಕತ್ತರಿಸಿದ ಕುಡುಕ!
ಪ್ರಾತಿನಿಧಿಕ ಚಿತ್ರ
Follow us
| Updated By: ಸುಷ್ಮಾ ಚಕ್ರೆ

Updated on: Jan 18, 2022 | 1:04 PM

ಹೈದರಾಬಾದ್: ಕುಡಿತದ ಅಮಲಿನಲ್ಲಿ ಕೆಲವೊಮ್ಮೆ ಏನೇನೋ ಅಪರಾಧಗಳು ನಡೆದುಬಿಡುತ್ತವೆ. ಆಂಧ್ರಪ್ರದೇಶದ (Andhra Pradesh) ಚಿತ್ತೂರು ಜಿಲ್ಲೆಯ ವಲಸಪಲ್ಲಿಯಲ್ಲಿ ನಡೆದ ಪ್ರಾಣಿ ಬಲಿ (animal sacrifice) ಸಂದರ್ಭದಲ್ಲಿ ಕುಡುಕನೊಬ್ಬ ಕುಡಿದ ಅಮಲಿನಲ್ಲಿ ಕುರಿಯ ಬದಲಾಗಿ ಮನುಷ್ಯನನ್ನು ಬಲಿ ಕೊಟ್ಟ ಆಘಾತಕಾರಿ ಘಟನೆ ನಡೆದಿದೆ. ಭಾನುವಾರ ಕುರಿಯ ಬದಲು ಸುರೇಶ್ ಎಂಬ ವ್ಯಕ್ತಿಯನ್ನು ಹತ್ಯೆ ಮಾಡಲಾಗಿದೆ. ಸಂಕ್ರಾತಿ ಆಚರಣೆ ವೇಳೆ ಈ ಘಟನೆ ನಡೆದಿದೆ. ಕತ್ತು ಕೊಯ್ದಿದ್ದರಿಂದ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಸುರೇಶ್ ಅವರನ್ನು ಕೂಡಲೇ ಮದನಪೆಲ್ಲೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ, ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಚಲಪತಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಚಲಪತಿ ಪ್ರಾಣಿ ಬಲಿ ನೀಡಿ ಕುರಿಯ ತಲೆಯನ್ನು ಕಡಿಯಬೇಕಿತ್ತು. ಬಲಿ ಕೊಡುವ ವೇಳೆ ಚಲಪತಿ ಕುಡಿದ ಅಮಲಿನಲ್ಲಿದ್ದು, ಆ ವೇಳೆ ಕುರಿಯನ್ನು ಹಿಡಿದಿದ್ದ ಸುರೇಶ್ ಎಂಬಾತನ ಕತ್ತು ಕೊಯ್ದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳೀಯ ಎಲ್ಲಮ್ಮ (ಆಂಧ್ರಪ್ರದೇಶದ ದೇವತೆ) ದೇವಸ್ಥಾನದಲ್ಲಿ ಪ್ರಾಣಿ ಬಲಿಯನ್ನು ಆಯೋಜಿಸಲಾಗಿತ್ತು. ಈ ವೇಳೆ ಪ್ರಾಣಿ ಬಲಿ ನೀಡುವ ಚಲಪತಿ ಕುಡಿತದ ಅಮಲಿನಲ್ಲಿದ್ದ. ಹೀಗಾಗಿ, ಕುರಿಯ ಕತ್ತು ಕೊಯ್ಯುವ ಬದಲು ಆ ಕುರಿಯನ್ನು ಹಿಡಿದುಕೊಂಡಿದ್ದವನ ಕತ್ತನ್ನು ಕತ್ತರಿಸಿದ್ದಾನೆ.

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ಭಾನುವಾರ ಸಂಕ್ರಾಂತಿ ಆಚರಣೆ ವೇಳೆ ಈ ಘಟನೆ ನಡೆದಿದೆ. ಮದನಪಲ್ಲಿ ಗ್ರಾಮಾಂತರ ಮಂಡಲದ ವಲಸಪಲ್ಲಿಯಲ್ಲಿ ಸಂಪ್ರದಾಯದ ಅಂಗವಾಗಿ ಜನರ ಗುಂಪೊಂದು ಪ್ರಾಣಿ ಬಲಿ ಕೊಡುತ್ತಿದ್ದಾಗ ಈ ಘಟನೆ ನಡೆದಿದೆ. ಗ್ರಾಮದ ಜನರು ಪ್ರತಿ ವರ್ಷ ಸಂಕ್ರಾಂತಿ ಆಚರಣೆಯ ಸಂದರ್ಭದಲ್ಲಿ ಪ್ರಾಣಿಗಳನ್ನು ಬಲಿ ನೀಡಿ ಸ್ಥಳೀಯ ಎಲ್ಲಮ್ಮ ದೇವಸ್ಥಾನದಲ್ಲಿ ಅರ್ಪಿಸುತ್ತಾರೆ. ಕುಡಿದ ಮತ್ತಿನಲ್ಲಿದ್ದ ಚಲಪತಿ ಎಂಬ ಯುವಕ ದೇವಸ್ಥಾನದ ಆವರಣದಲ್ಲಿ ಒಂದರ ಹಿಂದೆ ಒಂದರಂತೆ ಕುರಿಗಳನ್ನು ಬಲಿ ಕೊಡುತ್ತಿದ್ದ ಎನ್ನಲಾಗಿದೆ. ಸುರೇಶ್ ಎಂಬ 35 ವರ್ಷದ ಯುವಕ ತನ್ನ ಸರದಿ ಬಂದಾಗ ಕುರಿಯನ್ನು ಹಿಡಿದುಕೊಂಡು ಮೊಣಕಾಲೂರಿ ನಿಂತಿದ್ದ. ಆದರೆ, ಚಲಪತಿ ಆಕಸ್ಮಿಕವಾಗಿ ಸುರೇಶನ ತಲೆಯನ್ನು ಕತ್ತರಿಸಿದ್ದಾನೆ.

ಇದನ್ನೂ ಓದಿ: Shocking News: ಕಾಳಿ ದೇವಿ ವಿಗ್ರಹದ ಪಾದದ ಮೇಲೆ ಕತ್ತರಿಸಿದ ತಲೆ ಪತ್ತೆ; ಉಳಿದ ದೇಹಕ್ಕಾಗಿ ಪೊಲೀಸರಿಂದ ಹುಡುಕಾಟ

Shocking News: ಅಜ್ಜಿ ಪಕ್ಕ ಮಲಗಿದ್ದ ಮಗುವನ್ನು ಎತ್ತಿಕೊಂಡು ನೀರಿನ ಟ್ಯಾಂಕ್​ನಲ್ಲಿ ಹಾಕಿದ ಕೋತಿಗಳು!

ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು