AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮರ್ಮಾಂಗ ಕತ್ತರಿಸಿ ಬಾಯಲ್ಲಿ ತುರುಕಿದ ಹಂತಕರು; ಕೊಲ್ಕತ್ತಾ ಶಿಕ್ಷಕನ ಬರ್ಬರ ಹತ್ಯೆ

ಅಲಿಪುರ್‌ದೌರ್‌ನ ಜೈಗಾಂವ್‌ನಲ್ಲಿ ಶನಿವಾರ ಶಿಕ್ಷಕರೊಬ್ಬರ ಶವ ಅವರ ಜನನಾಂಗವನ್ನು ತುಂಡರಿಸಿ, ಬಾಯಿಯಲ್ಲಿ ತುರುಕಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆದರೆ, ಈ ಕೊಲೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಸಂತಾಬೀರ್ ಲಾಮಾ ಎಂಬ ಶಿಕ್ಷಕ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಖಾಸಗಿ ಶಾಲೆ ನಡೆಸುತ್ತಿದ್ದರು. ಅವರೇ ಇದೀಗ ಕೊಲೆಯಾಗಿದ್ದಾರೆ.

ಮರ್ಮಾಂಗ ಕತ್ತರಿಸಿ ಬಾಯಲ್ಲಿ ತುರುಕಿದ ಹಂತಕರು; ಕೊಲ್ಕತ್ತಾ ಶಿಕ್ಷಕನ ಬರ್ಬರ ಹತ್ಯೆ
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Nov 18, 2024 | 10:20 PM

Share

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ಭೀಕರ ಹತ್ಯೆ ಬೆಳಕಿಗೆ ಬಂದಿದೆ. ಕೊಲೆ ಮಾಡಿದ ಬಳಿಕ ಅವರ ಮರ್ಮಾಂಗವನ್ನು ಕತ್ತರಿಸಿ, ಅವರ ಬಾಯೊಳಗೆ ತುರುಕಲಾಗಿದೆ. ಕೊಲ್ಕತ್ತಾದ ಅಲಿಪುರ್ದಾರ್‌ನ ಜಯಗಾಂವ್‌ನಲ್ಲಿ ಜನನಾಂಗಗಳನ್ನು ಕತ್ತರಿಸಿದ ಸ್ಥಿತಿಯಲ್ಲಿ ಶಿಕ್ಷಕನ ಮೃತ ದೇಹ ಪತ್ತೆಯಾಗಿದೆ. ವರದಿಗಳ ಪ್ರಕಾರ, ಶಿಕ್ಷಕನ ಗುಪ್ತಾಂಗವನ್ನು ಕತ್ತರಿಸಿ ಬಾಯಿಗೆ ತುರುಕಲಾಗಿದೆ. ಮೃತ ಶಿಕ್ಷಕನ ಹೆಸರು ಶಾಂತಬೀರ್ ಲಾಮಾ.

ಮೃತ ಸಂತಾಬೀರ್ ಲಾಮಾ ಮೂಲತಃ ದಲ್ಸಿಂಗ್‌ಪಾರಾದಿಂದ ಬಂದವರು. ಆದರೆ ಕೆಲವು ವರ್ಷಗಳ ಹಿಂದೆ ಅವರು ಜೈಗಾಂವ್‌ಗೆ ಸ್ಥಳಾಂತರಗೊಂಡಿದ್ದರು. ಅವರು ಸ್ಥಳೀಯ ಚರ್ಚ್‌ನೊಂದಿಗೆ ಸಂಪರ್ಕ ಹೊಂದಿದ್ದರು. ಅವರು ಖಾಸಗಿ ಶಾಲೆಯನ್ನು ನಡೆಸುತ್ತಿದ್ದರು. ಕೆಲವು ವರ್ಷಗಳ ಹಿಂದೆ ಅವರು ಜೈಗಾಂವ್‌ಗೆ ಬಂದು ವಾಸಿಸಲು ಪ್ರಾರಂಭಿಸಿದರು. ಇಲ್ಲಿ ಖಾಸಗಿ ಶಾಲೆ ನಡೆಸಲು ಆರಂಭಿಸಿದರು. ಆ ಪ್ರದೇಶದಲ್ಲಿ ಖಾಸಗಿ ಶಾಲೆ ನಡೆಸುತ್ತಿದ್ದರು. ಶಾಂತಬೀರ್ ಮೂಲತಃ ಕಲ್ಚಿನಿ ಬ್ಲಾಕ್‌ನ ದಲ್ಸಿಂಗ್‌ಪಾರಾ ನಿವಾಸಿ ಎಂದು ತಿಳಿದುಬಂದಿದೆ. ಕೆಲವು ವರ್ಷಗಳ ಹಿಂದೆ ಅವರು ಜೈಗಾಂವ್‌ಗೆ ಬಂದು ವಾಸಿಸಲು ಪ್ರಾರಂಭಿಸಿದರು.

ಇದನ್ನೂ ಓದಿ: ಕೊಚ್ಚಿ ಹಾಕಿ, ಹೂತು ಹಾಕಿ; ಕೊಲ್ಕತ್ತಾ ರ್ಯಾಲಿಯಲ್ಲಿ ಮಿಥುನ್ ಚಕ್ರವರ್ತಿ ಅಬ್ಬರ

ಶಾಂತಬೀರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರ ವಿರುದ್ಧ ಅವರ ಕುಟುಂಬವು ಕೊಲೆ ಪ್ರಕರಣವನ್ನು ದಾಖಲಿಸಿದೆ. ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಅಲಿಪುರ್ದೂರ್ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ. ಶನಿವಾರ ಬೆಳಗ್ಗೆ ಶಾಲೆಯ ಮುಂಭಾಗದಲ್ಲಿ ಶಾಲಾ ಶಿಕ್ಷಕನ ರಕ್ತಸಿಕ್ತ ಶವ ಪತ್ತೆಯಾಗಿದೆ. ಅವರ ಸಾವಿಗೆ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ಅಲಿಪುರ್ದೂರ್ ಜಿಲ್ಲೆಯ ಜೈಗಾಂವ್ ಪೊಲೀಸ್ ಠಾಣೆಯು ಘಟನೆಯ ತನಿಖೆಯನ್ನು ಪ್ರಾರಂಭಿಸಿದೆ.

ಶಾಂತಬೀರ್ ವಿವಾಹಿತನಾಗಿದ್ದರೂ, ವೈವಾಹಿಕ ಕಲಹಗಳಿಂದಾಗಿ ಅವನು ತನ್ನ ಹೆಂಡತಿಯೊಂದಿಗೆ ವಾಸಿಸುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ವೈಯಕ್ತಿಕ ಸಿಟ್ಟಿನಿಂದ ಕೊಲೆ ನಡೆದಿದೆಯೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ಹಲವರನ್ನು ವಿಚಾರಣೆ ನಡೆಸಲಾಗುತ್ತಿದೆ. ಈ ನಡುವೆ ಶಿಕ್ಷಕನಿಗೆ ಮದ್ಯ ಮತ್ತು ಜೂಜಾಟದ ಚಟವಿತ್ತು ಎಂಬುದು ಪೊಲೀಸರಿಗೆ ತಿಳಿದು ಬಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ