AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಗುಪ್ತಾಂಗಕ್ಕೆ ಮೆಣಸಿನ ಪುಡಿ ತುಂಬಿ ಚಿತ್ರಹಿಂಸೆ; ಶಾಕಿಂಗ್ ವಿಡಿಯೋ ವೈರಲ್

Viral Video: ಆಘಾತಕಾರಿ ಘಟನೆಯೊಂದರಲ್ಲಿ, ಬಿಹಾರದ ಅರಾರಿಯಾದಲ್ಲಿ ಕಳ್ಳತನ ಮಾಡುತ್ತಿದ್ದಾನೆ ಎಂದು ಆರೋಪಿಸಿ ಜನರ ಗುಂಪೊಂದು ವ್ಯಕ್ತಿಯೊಬ್ಬನನ್ನು ಮರಕ್ಕೆ ಕಟ್ಟಿ ಹಾಕಿ, ಆತನ ಖಾಸಗಿ ಅಂಗಕ್ಕೆ ಮೆಣಸಿನ ಪುಡಿಯನ್ನು ತುಂಬಿದೆ. ಈ ವಿಡಿಯೋಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.

Shocking Video: ಗುಪ್ತಾಂಗಕ್ಕೆ ಮೆಣಸಿನ ಪುಡಿ ತುಂಬಿ ಚಿತ್ರಹಿಂಸೆ; ಶಾಕಿಂಗ್ ವಿಡಿಯೋ ವೈರಲ್
ಗುಪ್ತಾಂಗಕ್ಕೆ ಮೆಣಸಿನ ಪುಡಿ ತುಂಬಿ ಚಿತ್ರಹಿಂಸೆ
ಸುಷ್ಮಾ ಚಕ್ರೆ
|

Updated on: Aug 27, 2024 | 10:45 PM

Share

ಬಿಹಾರದ ಅರಾರಿಯಾದಲ್ಲಿ ವ್ಯಕ್ತಿಯೊಬ್ಬನನ್ನು ಹಗ್ಗದಿಂದ ಕಟ್ಟಿ ಆತನ ಖಾಸಗಿ ಅಂಗಕ್ಕೆ ಮೆಣಸಿನ ಪುಡಿಯನ್ನು ತುಂಬಿಸಲಾಗಿತ್ತು. ಈ ಘಟನೆಯ ವೀಡಿಯೋ ಇದೀಗ ವೈರಲ್ ಆಗಿದ್ದು, ವ್ಯಕ್ತಿಯ ಕೈಗಳನ್ನು ಬೆನ್ನಿನ ಹಿಂದೆ ಕಟ್ಟಿರುವುದನ್ನು ತೋರಿಸುತ್ತದೆ. ಆತನ ಪ್ಯಾಂಟ್ ಬಿಚ್ಚಿ, ಆತನನ್ನು ಬಗ್ಗಿ ನಿಲ್ಲುವಂತೆ ಹೇಳಿ ಗುಪ್ತಾಂಗದೊಳಗೆ ಪೆನ್ಸಿಲ್ ಮೂಲಕ ಮೆಣಸಿನ ಪುಡಿ ತುಂಬಿಸಲಾಗಿದೆ.

ಈ ವಿಡಿಯೊದಲ್ಲಿರುವ ವ್ಯಕ್ತಿಯನ್ನು ಪುರುಷರ ಗುಂಪು ಸೆರೆಹಿಡಿದಿದೆ. ಅವರು ಆತ ಕಳ್ಳತನ ಮಾಡಿದ್ದಾನೆ ಎಂದು ಆರೋಪಿಸಿದ್ದಾರೆ. ಈ ಇಡೀ ಘಟನೆಯನ್ನು ತೋರಿಸುವ ವಿಡಿಯೋ ವೈರಲ್ ಆದ ನಂತರ ಮೊಹಮ್ಮದ್ ಸಿಫತ್ ಎಂದು ಗುರುತಿಸಲಾದ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ.

ಇದನ್ನೂ ಓದಿ: Shocking Video: ದೇವಸ್ಥಾನದೊಳಗೆ ಅಶ್ಲೀಲ ಚಿತ್ರ ನೋಡುತ್ತಾ ಹಸ್ತಮೈಥುನ ಮಾಡಿಕೊಂಡ ಯುವಕ; ಶಾಕಿಂಗ್ ವಿಡಿಯೋ ವೈರಲ್

ಈ ಘಟನೆ ವಿಡಿಯೋದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ಗಮನ ಸೆಳೆದ ನಂತರ ಕ್ಲಿಪ್‌ನಲ್ಲಿ ಗುರುತಿಸಲಾದ ಮೊಹಮ್ಮದ್ ಸಿಫತ್ ಎಂದು ಗುರುತಿಸಲಾದ ಒಬ್ಬ ವ್ಯಕ್ತಿಯನ್ನು ಬಂಧಿಸಲಾಯಿತು. ಆರೋಪಿಗಳಲ್ಲಿ ಒಬ್ಬ ಆ ವ್ಯಕ್ತಿಯ ಬೆನ್ನಿಗೆ ಮೆಣಸಿನ ಪುಡಿ ಸುರಿದು ಪೆನ್ಸಿಲ್ ಬಳಸಿ ಗುದನಾಳದೊಳಗೆ ತುಂಬುತ್ತಿದ್ದ ದೃಶ್ಯವೂ ಕಂಡು ಬಂದಿದೆ. ಬಳಿಕ ಆತನ ಮರ್ಮಾಂಗಕ್ಕೂ ಮೆಣಸಿನ ಪುಡಿಯನ್ನು ಎರಚಲಾಗಿದೆ. ಪುರುಷರ ಗುಂಪು ಆ ವ್ಯಕ್ತಿಯ ಬಟ್ಟೆಯನ್ನು ಸಂಪೂರ್ಣವಾಗಿ ಪರೀಕ್ಷಿಸುವುದನ್ನು ಸಹ ಕಾಣಬಹುದು.

ಈ ಘಟನೆಯ ವೇಳೆ ಅಲ್ಲಿದ್ದ ಅನೇಕರು ಘಟನೆಯ ವಿಡಿಯೋವನ್ನು ರೆಕಾರ್ಡ್ ಮಾಡಿದ್ದಾರೆ. ವಿಡಿಯೋ ವೈರಲ್ ಆದ ನಂತರ ಪೊಲೀಸರು ಕ್ರಮ ಕೈಗೊಳ್ಳುವಂತೆ ನೆಟ್ಟಿಗರು ಒತ್ತಾಯಿಸಿದ್ದಾರೆ. ಇದಾದ ಬಳಿಕ ಪೊಲೀಸರು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ.

ಇದನ್ನೂ ಓದಿ: Viral Video: ರಸ್ತೆಯಲ್ಲಿ ಓಡಾಡುವ ಕುಡುಕರಿಗೆ ಪೊರಕೆಯಲ್ಲಿ ಥಳಿಸಿದ ಮಹಿಳೆಯರು; ವಿಡಿಯೋ ವೈರಲ್

ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್, ನಿತೀಶ್ ಕುಮಾರ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಘಟನೆಯು ಬಿಹಾರದಲ್ಲಿ “ತಾಲಿಬಾನ್ ರಾಜ್” ಅನ್ನು ತೋರಿಸಿದೆ ಎಂದು ಅವರು ಹೇಳಿದರು. ಈ ಘಟನೆಗೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಲಾಗಿದ್ದು, ಇತರರನ್ನು ಗುರುತಿಸಿ ಬಂಧಿಸುವ ಪ್ರಯತ್ನಗಳು ಪ್ರಸ್ತುತ ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ