AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಅಪ್ರಾಪ್ತ ಬಾಲಕನಿಗೆ ಬಿಯರ್ ಬಾಟಲಿಯಲ್ಲಿ ಮೂತ್ರ ಕುಡಿಸಿದ ಯುವಕರು

ಬಿಯರ್ ಬಾಟಲಿಯಲ್ಲಿ ಮೂತ್ರವನ್ನು ತುಂಬಿ ಅದನ್ನು ಅಪ್ರಾಪ್ತ ಬಾಲಕನಿಗೆ ಕುಡಿಸಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ಘಟನೆಯ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

Crime News: ಅಪ್ರಾಪ್ತ ಬಾಲಕನಿಗೆ ಬಿಯರ್ ಬಾಟಲಿಯಲ್ಲಿ ಮೂತ್ರ ಕುಡಿಸಿದ ಯುವಕರು
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Jul 12, 2024 | 10:44 PM

Share

ಲಕ್ನೋ: ಉತ್ತರ ಪ್ರದೇಶದ ಶ್ರಾವಸ್ತಿ ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಕನೊಬ್ಬನಿಗೆ ಒತ್ತಾಯದಿಂದ ಮೂತ್ರ ಕುಡಿಸಿದ ಆರೋಪದ ಮೇಲೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮೂತ್ರ ಕುಡಿದ ಬಾಲಕನ ಸಹೋದರ ಪೊಲೀಸರಿಗೆ ನೀಡಿದ ದೂರಿನಲ್ಲಿ, ಮೂವರು ಆರೋಪಿಗಳು ಆಲ್ಕೋಹಾಲ್ ಬಾಟಲಿಯಲ್ಲಿ ತಮ್ಮ ಮೂತ್ರ ತುಂಬಿಸಿ ಅದನ್ನು ತನ್ನ ತಮ್ಮನಿಗೆ ಬಲವಂತವಾಗಿ ಕುಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಪೊಲೀಸರ ಪ್ರಕಾರ, ಬಂಧಿತರಾಗಿರುವ ಮೂವರು ಆರೋಪಿಗಳನ್ನು ಭೂರೆ ತಿವಾರಿ, ದಿಲೀಪ್ ಮಿಶ್ರಾ ಮತ್ತು ಸತ್ಯಂ ತಿವಾರಿ ಎಂದು ಗುರುತಿಸಲಾಗಿದೆ. ಮೂವರೂ ಉತ್ತರ ಪ್ರದೇಶದ ರಾಂಪುರ ತ್ರಿಭೌನಾ ಗ್ರಾಮದ ನಿವಾಸಿಗಳು. ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ.

ಇದನ್ನೂ ಓದಿ: Crime News: ಅಶ್ಲೀಲ ವಿಡಿಯೋ ನೋಡಿ ಬಾಲಕನ ಮೇಲೆ ಅತ್ಯಾಚಾರವೆಸಗಿ ಕೊಂದ ಮದರಸಾ ಶಿಕ್ಷಕ

ದೌರ್ಜನ್ಯಕ್ಕೊಳಗಾದ ಬಾಲಕನ ಸಹೋದರ ಜುಲೈ 1ರಂದು ದೂರು ದಾಖಲಿಸಿದ್ದಾರೆ. ಈ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಭೂರೆ ತಿವಾರಿ ಆ ಬಾಲಕನನ್ನು ವಾಹನದಲ್ಲಿ ಡಿಜೆ ಹಾಕಲು ಕೇಳಿದ್ದರು. ಅದರೊಂದಿಗೆ ಜನರೇಟರ್ ಅನ್ನು ಲೋಡ್ ಮಾಡಲು ಸಹ ಅವರು ಹೇಳಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆದರೆ, ಅದಕ್ಕೆ ಆ ಬಾಲಕ ನಿರಾಕರಿಸಿದಾಗ, ಇತರ ಇಬ್ಬರು ಆರೋಪಿಗಳಾದ ಮಿಶ್ರಾ ಮತ್ತು ಸತ್ಯಂ ತಿವಾರಿ, ಜೊತೆ ಸೇರಿ ಆ ಬಾಲಕನಿಂದ ಈ ಕೆಲಸ ಮಾಡಿಸಲು ಒತ್ತಾಯಿಸಿದ್ದಾರೆ.

ಇದೇ ವೇಳೆ ಮತ್ತೋರ್ವ ಆರೋಪಿ ದಿಲೀಪ್ ಮದ್ಯದ ಬಾಟಲಿಯಲ್ಲಿ ತನ್ನ ಮೂತ್ರ ತುಂಬಿ ಬಾಲಕನಿಗೆ ಬಲವಂತವಾಗಿ ಕುಡಿಸಿದ್ದಾನೆ. ಇದಕ್ಕೆ ಆ ಬಾಲಕ ಪ್ರತಿಭಟಿಸಿದಾಗ ಆರೋಪಿಗಳು ಆತನನ್ನು ಥಳಿಸಿದ್ದಾರೆ. ಅವನತ್ತ ಕಂಟ್ರಿ ನಿರ್ಮಿತ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: 3ನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಕೊಲೆ ಮಾಡಿ ಕಾಲುವೆಗೆ ಎಸೆದ ಅಪ್ರಾಪ್ತ ಬಾಲಕರು

ಈ ವರ್ಷದ ಆರಂಭದಲ್ಲಿ, ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ ರೀಲ್ ಮಾಡಲು ಪ್ರಯತ್ನಿಸಿದ ದಲಿತ ಹುಡುಗನಿಗೆ ಬಲವಂತವಾಗಿ ಮದ್ಯ ಕುಡಿಸಲಾಗಿತ್ತು. ರೀಲ್ ಮಾಡುವುದನ್ನು ನಿಲ್ಲಿಸುವಂತೆ ಯುವಕರ ಗುಂಪೊಂದು ಆತನ ಮೇಲೆ ಹಲ್ಲೆ ನಡೆಸಿತ್ತು. ಆ ವಿಡಿಯೋಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​