Crime News: ಅಪ್ರಾಪ್ತ ಬಾಲಕನಿಗೆ ಬಿಯರ್ ಬಾಟಲಿಯಲ್ಲಿ ಮೂತ್ರ ಕುಡಿಸಿದ ಯುವಕರು

|

Updated on: Jul 12, 2024 | 10:44 PM

ಬಿಯರ್ ಬಾಟಲಿಯಲ್ಲಿ ಮೂತ್ರವನ್ನು ತುಂಬಿ ಅದನ್ನು ಅಪ್ರಾಪ್ತ ಬಾಲಕನಿಗೆ ಕುಡಿಸಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ಘಟನೆಯ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

Crime News: ಅಪ್ರಾಪ್ತ ಬಾಲಕನಿಗೆ ಬಿಯರ್ ಬಾಟಲಿಯಲ್ಲಿ ಮೂತ್ರ ಕುಡಿಸಿದ ಯುವಕರು
ಸಾಂದರ್ಭಿಕ ಚಿತ್ರ
Follow us on

ಲಕ್ನೋ: ಉತ್ತರ ಪ್ರದೇಶದ ಶ್ರಾವಸ್ತಿ ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಕನೊಬ್ಬನಿಗೆ ಒತ್ತಾಯದಿಂದ ಮೂತ್ರ ಕುಡಿಸಿದ ಆರೋಪದ ಮೇಲೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಮೂತ್ರ ಕುಡಿದ ಬಾಲಕನ ಸಹೋದರ ಪೊಲೀಸರಿಗೆ ನೀಡಿದ ದೂರಿನಲ್ಲಿ, ಮೂವರು ಆರೋಪಿಗಳು ಆಲ್ಕೋಹಾಲ್ ಬಾಟಲಿಯಲ್ಲಿ ತಮ್ಮ ಮೂತ್ರ ತುಂಬಿಸಿ ಅದನ್ನು ತನ್ನ ತಮ್ಮನಿಗೆ ಬಲವಂತವಾಗಿ ಕುಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಪೊಲೀಸರ ಪ್ರಕಾರ, ಬಂಧಿತರಾಗಿರುವ ಮೂವರು ಆರೋಪಿಗಳನ್ನು ಭೂರೆ ತಿವಾರಿ, ದಿಲೀಪ್ ಮಿಶ್ರಾ ಮತ್ತು ಸತ್ಯಂ ತಿವಾರಿ ಎಂದು ಗುರುತಿಸಲಾಗಿದೆ. ಮೂವರೂ ಉತ್ತರ ಪ್ರದೇಶದ ರಾಂಪುರ ತ್ರಿಭೌನಾ ಗ್ರಾಮದ ನಿವಾಸಿಗಳು. ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ.

ಇದನ್ನೂ ಓದಿ: Crime News: ಅಶ್ಲೀಲ ವಿಡಿಯೋ ನೋಡಿ ಬಾಲಕನ ಮೇಲೆ ಅತ್ಯಾಚಾರವೆಸಗಿ ಕೊಂದ ಮದರಸಾ ಶಿಕ್ಷಕ

ದೌರ್ಜನ್ಯಕ್ಕೊಳಗಾದ ಬಾಲಕನ ಸಹೋದರ ಜುಲೈ 1ರಂದು ದೂರು ದಾಖಲಿಸಿದ್ದಾರೆ. ಈ ವಿಷಯ ತಡವಾಗಿ ಬೆಳಕಿಗೆ ಬಂದಿದೆ. ಭೂರೆ ತಿವಾರಿ ಆ ಬಾಲಕನನ್ನು ವಾಹನದಲ್ಲಿ ಡಿಜೆ ಹಾಕಲು ಕೇಳಿದ್ದರು. ಅದರೊಂದಿಗೆ ಜನರೇಟರ್ ಅನ್ನು ಲೋಡ್ ಮಾಡಲು ಸಹ ಅವರು ಹೇಳಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆದರೆ, ಅದಕ್ಕೆ ಆ ಬಾಲಕ ನಿರಾಕರಿಸಿದಾಗ, ಇತರ ಇಬ್ಬರು ಆರೋಪಿಗಳಾದ ಮಿಶ್ರಾ ಮತ್ತು ಸತ್ಯಂ ತಿವಾರಿ, ಜೊತೆ ಸೇರಿ ಆ ಬಾಲಕನಿಂದ ಈ ಕೆಲಸ ಮಾಡಿಸಲು ಒತ್ತಾಯಿಸಿದ್ದಾರೆ.

ಇದೇ ವೇಳೆ ಮತ್ತೋರ್ವ ಆರೋಪಿ ದಿಲೀಪ್ ಮದ್ಯದ ಬಾಟಲಿಯಲ್ಲಿ ತನ್ನ ಮೂತ್ರ ತುಂಬಿ ಬಾಲಕನಿಗೆ ಬಲವಂತವಾಗಿ ಕುಡಿಸಿದ್ದಾನೆ. ಇದಕ್ಕೆ ಆ ಬಾಲಕ ಪ್ರತಿಭಟಿಸಿದಾಗ ಆರೋಪಿಗಳು ಆತನನ್ನು ಥಳಿಸಿದ್ದಾರೆ. ಅವನತ್ತ ಕಂಟ್ರಿ ನಿರ್ಮಿತ ಪಿಸ್ತೂಲ್ ತೋರಿಸಿ ಬೆದರಿಕೆ ಹಾಕಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: 3ನೇ ತರಗತಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಕೊಲೆ ಮಾಡಿ ಕಾಲುವೆಗೆ ಎಸೆದ ಅಪ್ರಾಪ್ತ ಬಾಲಕರು

ಈ ವರ್ಷದ ಆರಂಭದಲ್ಲಿ, ರಾಜಸ್ಥಾನದ ಅಜ್ಮೀರ್ ಜಿಲ್ಲೆಯಲ್ಲಿ ರೀಲ್ ಮಾಡಲು ಪ್ರಯತ್ನಿಸಿದ ದಲಿತ ಹುಡುಗನಿಗೆ ಬಲವಂತವಾಗಿ ಮದ್ಯ ಕುಡಿಸಲಾಗಿತ್ತು. ರೀಲ್ ಮಾಡುವುದನ್ನು ನಿಲ್ಲಿಸುವಂತೆ ಯುವಕರ ಗುಂಪೊಂದು ಆತನ ಮೇಲೆ ಹಲ್ಲೆ ನಡೆಸಿತ್ತು. ಆ ವಿಡಿಯೋಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ