Shocking News: ಅಣ್ಣನಿಗೆ ರಾಖಿ ಕಟ್ಟಲು ಹೋಗುತ್ತೇನೆ ಎಂದ ಪತ್ನಿಯ ಮೂಗು ಕತ್ತರಿಸಿದ ಗಂಡ

Crime News Today: ಉತ್ತರಪ್ರದೇಶದ ಹರ್ದೋಯ್‌ನಲ್ಲಿರುವ ತನ್ನ ಸಹೋದರನಿಗೆ ರಾಖಿ ಕಟ್ಟಲು ತನ್ನ ತಾಯಿಯ ಮನೆಗೆ ಹೋಗಬೇಕೆಂದು ಹಠ ಹಿಡಿದ ಹೆಂಡತಿಯ ಮೇಲೆ ಕೋಪಗೊಂಡ ಗಂಡ ಆಕೆಯ ಮೂಗನ್ನು ಕತ್ತರಿಸಿದ್ದಾನೆ. ಇದೀಗ ಆಕೆಯ ಗಂಡ ಜೈಲು ಸೇರಿದ್ದಾನೆ.

Shocking News: ಅಣ್ಣನಿಗೆ ರಾಖಿ ಕಟ್ಟಲು ಹೋಗುತ್ತೇನೆ ಎಂದ ಪತ್ನಿಯ ಮೂಗು ಕತ್ತರಿಸಿದ ಗಂಡ
ಸಾಂದರ್ಭಿಕ ಚಿತ್ರ
Follow us
|

Updated on: Aug 19, 2024 | 10:04 PM

ನೊಯ್ಡಾ: ಉತ್ತರ ಪ್ರದೇಶದ ಹರ್ದೋಯ್​ಯಲ್ಲಿ ತನ್ನ ಸಹೋದರನಿಗೆ ರಾಖಿ ಕಟ್ಟಲು ತನ್ನ ತಾಯಿಯ ಮನೆಗೆ ಹೋಗಬೇಕೆಂದು ಒತ್ತಾಯಿಸಿದ ನಂತರ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಮೂಗನ್ನು ಕತ್ತರಿಸಿದ್ದಾನೆ. ಈ ಘಟನೆಯ ನಂತರ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಅಲ್ಲಿಂದ ಲಕ್ನೋದ ಟ್ರಾಮಾ ಸೆಂಟರ್‌ಗೆ ವರ್ಗಾಯಿಸಲಾಯಿತು.

ಈ ಕುರಿತು ವಿಡಿಯೋ ಮಾಡಿರುವ ಆ ಮಹಿಳೆ ತನ್ನ ಮೇಲೆ ಗಂಡ ಮಾಡಿದ ದೌರ್ಜನ್ಯದ ಬಗ್ಗೆ ಹೇಳಿಕೊಂಡಿದ್ದಾಳೆ. ತನ್ನ ಪತಿ ತನ್ನ ಮೂಗು ಕತ್ತರಿಸಿದ್ದಾನೆ ಎಂದು ಆರೋಪಿಸಿದ್ದಾಳೆ. ತನಗೆ ಇನ್ನು ಬದುಕಲು ಇಷ್ಟವಿಲ್ಲ ಎಂದು ಹೇಳುವುದನ್ನು ವಿಡಿಯೋದಲ್ಲಿ ಕೇಳಬಹುದು. ತನ್ನ ಪತಿಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಬಯಸುವುದಾಗಿಯೂ ಆಕೆ ಹೇಳಿದ್ದಾಳೆ.

ಇದನ್ನೂ ಓದಿ: ಆತ್ಮಹತ್ಯೆಗೆ ಯತ್ನ, ತಾನು ಸಾಯುವ ಮೊದಲು ತಮ್ಮನಿಗೆ ರಾಖಿ ಕಟ್ಟಿದ ಅಕ್ಕ

ವರದಿಗಳ ಪ್ರಕಾರ, ಬನಿಯಾನಿ ಪೂರ್ವದ ನಿವಾಸಿ ರಾಹುಲ್ ಎಂದು ಗುರುತಿಸಲಾದ ವ್ಯಕ್ತಿ ತನ್ನ ಪತ್ನಿ ಅನಿತಾ ರಕ್ಷಾ ಬಂಧನದ ಸಂದರ್ಭದಲ್ಲಿ ಬೆಹಟಗೋಕುದಲ್ಲಿರುವ ತನ್ನ ತಾಯಿಯ ಮನೆಗೆ ಹೋಗುವಂತೆ ಕೇಳಿಕೊಂಡ ನಂತರ ಜಗಳವಾಡಿದ್ದಾನೆ. ಈ ವಿಷಯ ವಿಕೋಪಕ್ಕೆ ಹೋಗಿದ್ದು, ಕೋಪಗೊಂಡ ಆತ ತನ್ನ ಪತ್ನಿಯ ಮೂಗನ್ನೇ ಕತ್ತರಿಸಿದ್ದಾನೆ.

ಇದನ್ನೂ ಓದಿ: Shocking News: 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಸ್ತನ, ಗುಪ್ತಾಂಗ ಕತ್ತರಿಸಿ ಬರ್ಬರ ಹತ್ಯೆ

ಆ ಮಹಿಳೆಯ ಕಿರುಚಾಟವನ್ನು ಕೇಳಿ, ಅವಳು ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡು ಆಕೆಯ ಅತ್ತೆಯು ಗಂಭೀರ ಸ್ಥಿತಿಯಲ್ಲಿದ್ದ 25 ವರ್ಷದ ಅನಿತಾ ಅವರನ್ನು ಹಾರ್ಡೋಯ್ ವೈದ್ಯಕೀಯ ಕಾಲೇಜಿಗೆ ದಾಖಲಿಸಿದರು. ಅಲ್ಲಿಂದ ಅವರನ್ನು ಲಕ್ನೋ ಟ್ರಾಮಾ ಸೆಂಟರ್‌ಗೆ ಸ್ಥಳಾಂತರಿಸಲಾಯಿತು. ಗಾಯಗೊಂಡ ಮಹಿಳೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದ್ದಂತೆ, ಹರ್ದೋಯ್ ಪೊಲೀಸರು ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ಈ ವಿಷಯವು ತನಿಖೆಯಲ್ಲಿದೆ ಮತ್ತು ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಟ್ರಾವಿಸ್ ಹೆಡ್: ವಿಡಿಯೋ ವೀಕ್ಷಿಸಿ
ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಟ್ರಾವಿಸ್ ಹೆಡ್: ವಿಡಿಯೋ ವೀಕ್ಷಿಸಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ
ಚಿತ್ರರಂಗದಲ್ಲಿ ನಟಿಯರ ನಡುವೆ ತಾರತಮ್ಯ: ಅಸಲಿ ವಿಚಾರ ತಿಳಿಸಿದ ಸಾಕ್ಷಿ ಮೇಘನ
ಚಿತ್ರರಂಗದಲ್ಲಿ ನಟಿಯರ ನಡುವೆ ತಾರತಮ್ಯ: ಅಸಲಿ ವಿಚಾರ ತಿಳಿಸಿದ ಸಾಕ್ಷಿ ಮೇಘನ
ಸಿನಿಮಾ ಬಿಡುಗಡೆ ಸಮಯದಲ್ಲಿ ನಟ ಕಿರಣ್ ರಾಜ್​ ಕಾರು ಅಪಘಾತ ಆಗಿದ್ದು ನಿಜವೇ?
ಸಿನಿಮಾ ಬಿಡುಗಡೆ ಸಮಯದಲ್ಲಿ ನಟ ಕಿರಣ್ ರಾಜ್​ ಕಾರು ಅಪಘಾತ ಆಗಿದ್ದು ನಿಜವೇ?
ಸಿಎಂ ಕುರ್ಚಿ ಖಾಲಿ ಇಲ್ಲ: ನಾನೇ ಮುಂದುವರಿಯುತ್ತೇನೆ ಎಂದ ಸಿದ್ದರಾಮಯ್ಯ
ಸಿಎಂ ಕುರ್ಚಿ ಖಾಲಿ ಇಲ್ಲ: ನಾನೇ ಮುಂದುವರಿಯುತ್ತೇನೆ ಎಂದ ಸಿದ್ದರಾಮಯ್ಯ
ವಿಡಿಯೋ: ಊರಿನ ಗಣೇಶೋತ್ಸವದಲ್ಲಿ ಭಾಗಿಯಾದ ರಕ್ಷಿತ್ ಶೆಟ್ಟಿ
ವಿಡಿಯೋ: ಊರಿನ ಗಣೇಶೋತ್ಸವದಲ್ಲಿ ಭಾಗಿಯಾದ ರಕ್ಷಿತ್ ಶೆಟ್ಟಿ