AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ನಾಯಿ ಬೊಗಳುತ್ತದೆ ಎಂದು ಚಾಕುವಿನಿಂದ ಇರಿದು ಕೊಲೆ!

ದೆಹಲಿಯ ಕಲ್ಯಾಣಪುರಿ ಪ್ರದೇಶದಲ್ಲಿ ವ್ಯಕ್ತಿಯೋರ್ವ ಬೀದಿನಾಯಿಯನ್ನು ಇರಿದು ಕೊಂದಿದ್ದಾನೆ. ನಾಯಿ ಸದಾ ಬೊಗಳುತ್ತಿತ್ತು ಎಂಬ ಕಾರಣಕ್ಕೆ ಕೋಪಗೊಂಡು ಆ ನಾಯಿಯನ್ನು ಕೊಂದಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ.

Shocking News: ನಾಯಿ ಬೊಗಳುತ್ತದೆ ಎಂದು ಚಾಕುವಿನಿಂದ ಇರಿದು ಕೊಲೆ!
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Mar 15, 2022 | 8:36 PM

Share

ನವದೆಹಲಿ: ಬೀದಿ ನಾಯಿಗಳ ಮೇಲೆ ದೌರ್ಜನ್ಯ ನಡೆದ ಘಟನೆಗಳು ಆಗಾಗ ಬೆಳಕಿಗೆ ಬರುತ್ತಲೇ ಇರುತ್ತವೆ. ಇತ್ತೀಚೆಗಷ್ಟೆ ಕಾಮುಕನೊಬ್ಬ ಬೀದಿ ನಾಯಿಯ (Stray Dog) ಮೇಲೆ ಅತ್ಯಾಚಾರ (Rape) ನಡೆಸಿದ್ದ ಘಟನೆಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು. ವಿನಾಕಾರಣ ಬೀದಿ ನಾಯಿಗಳಿಗೆ ಥಳಿಸುವುದು, ಅವುಗಳ ಮೇಲೆ ವಾಹನ ಹತ್ತಿಸಿಕೊಂಡು ಹೋಗುವುದು ಹೀಗೆ ನಾಯಿಗಳ ಮೇಲಿನ ದೌರ್ಜನ್ಯಗಳು ನಡೆಯುತ್ತಲೇ ಇರುತ್ತವೆ. ಇದೀಗ ದೆಹಲಿಯ ಕಲ್ಯಾಣಪುರಿ ಪ್ರದೇಶದಲ್ಲಿ ವ್ಯಕ್ತಿಯೋರ್ವ ಬೀದಿನಾಯಿಯನ್ನು ಇರಿದು ಕೊಂದಿದ್ದಾನೆ. ನಾಯಿ ಸದಾ ಬೊಗಳುತ್ತಿತ್ತು ಎಂಬ ಕಾರಣಕ್ಕೆ ಕೋಪಗೊಂಡು ಆ ನಾಯಿಯನ್ನು ಕೊಂದಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ.

ರಾತ್ರಿ ವೇಳೆ ಜೋರಾಗಿ ಬೊಗಳುತ್ತಿದ್ದ ಬೀದಿ ನಾಯಿಯಿಂದ ಮನೆಯೊಳಗೆ ನೆಮ್ಮದಿಯಾಗಿರಲು ಸಾಧ್ಯವಾಗುತ್ತಿರಲಿಲ್ಲ. ಹಗಲು ಹೊತ್ತಿನಲ್ಲೂ ರಸ್ತೆಯಲ್ಲಿ ಯಾರಾದರೂ ಓಡಾಡಿದರೆ ನಾಯಿ ಬೊಗಳಲು ಶುರು ಮಾಡುತ್ತಿತ್ತು. ಇದರಿಂದ ಆ ನಾಯಿಯನ್ನು ಕೊಂದಿದ್ದೇನೆ ಎಂದು ಆರೋಪಿ ಪೊಲೀಸರಿಗೆ ತಿಳಿಸಿದ್ದಾನೆ.

ಈ ಘಟನೆಯ ಕುರಿತು ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಆರೋಪಿಯ ವಿರುದ್ಧ ಪ್ರಾಣಿಗಳ ಮೇಲಿನ ಕ್ರೌರ್ಯದ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಇದನ್ನೂ ಓದಿ: Shocking News: ಬೆಕ್ಕು ಕಚ್ಚಿ ಇಬ್ಬರು ಮಹಿಳೆಯರು ಸಾವು; ಆಂಧ್ರ ಪ್ರದೇಶದಲ್ಲೊಂದು ದಾರುಣ ಘಟನೆ

Shocking News: ರಾತ್ರಿ ವೇಳೆ ಬೀದಿ ನಾಯಿ ಮೇಲೆ ಕಾಮುಕನಿಂದ ಅತ್ಯಾಚಾರ!

Published On - 8:32 pm, Tue, 15 March 22

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ