AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತರಕಾರಿ ಜೊತೆ ಹೃದಯ ಬೇಯಿಸಿ, ಅಡುಗೆ ಮಾಡಿ ಬಡಿಸಿದ ಕೊಲೆಗಾರ!

ಕೆಲವೊಮ್ಮೆ ಮನುಷ್ಯರು ಮಾನವೀಯತೆಯನ್ನೇ ಮರೆತುಬಿಡುತ್ತಾರೆ. ಇತ್ತೀಚೆಗೆ ಒಬ್ಬರ ಜೀವನ ತೆಗೆಯುವುದು ತೀರಾ ಸಾಮಾನ್ಯ ಎನಿಸಿಬಿಟ್ಟಿದೆ. ಅಮೆರಿಕಾದಲ್ಲಿ ಕೊಲೆಯೊಂದನ್ನು ಮಾಡಿದ ವ್ಯಕ್ತಿಯೊಬ್ಬ ಆ ಮೃತದೇಹವನ್ನು ಕತ್ತರಿಸಿ, ಆ ದೇಹದ ಹೃದಯವನ್ನು ಬೇಯಿಸಿ ಅಡುಗೆ ತಯಾರಿಸಿ ಬಡಿಸಿರುವ ಭಯಾನಕ ಘಟನೆ ನಡೆದಿದೆ.

ತರಕಾರಿ ಜೊತೆ ಹೃದಯ ಬೇಯಿಸಿ, ಅಡುಗೆ ಮಾಡಿ ಬಡಿಸಿದ ಕೊಲೆಗಾರ!
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on: Nov 29, 2023 | 1:36 PM

Share

ವಾಷಿಂಗ್ಟನ್: ಕೊಲೆ ಮಾಡಿದ ನಂತರ ಆ ದೇಹವನ್ನು ಬಿಸಾಡುವ ಮೊದಲು ಆ ಶವವನ್ನು ಕತ್ತರಿಸಿ, ಅದರಲ್ಲಿರುವ ಹೃದಯವನ್ನು ಹೊರಗೆ ತೆಗೆದು, ಅದನ್ನು ಆಲೂಗಡ್ಡೆಯ ಜೊತೆ ಬೇಯಿಸಿ, ಮನೆಯವರಿಗೆ ಸಾಂಬಾರ್ ಮಾಡಿ ಬಡಿಸಿರುವ ವಿಚಿತ್ರ ಮತ್ತು ಭಯಾನಕ ಘಟನೆಯೊಂದು ಅಮೆರಿಕದಲ್ಲಿ ನಡೆದಿದೆ. ಅಮೆರಿಕದ ಒಕ್ಲಹೋಮ ರಾಜ್ಯದಲ್ಲಿ ತ್ರಿವಳಿ ಕೊಲೆಯ ಆರೋಪ ಹೊತ್ತಿರುವ ವ್ಯಕ್ತಿಯೊಬ್ಬ ಈ ಕೃತ್ಯ ಎಸಗಿದ್ದಾನೆ. ಈ ಘಟನೆ ಪೊಲೀಸರನ್ನೇ ಬೆಚ್ಚಿ ಬೀಳಿಸಿದೆ.

ಕೊಲೆ ಮಾಡಿದ ನಂತರ ಮೃತದೇಹದ ಹೃದಯವನ್ನು ಆಕೆಯ ದೇಹದಿಂದ ಕತ್ತರಿಸಿ, ಆಲೂಗಡ್ಡೆಯೊಂದಿಗೆ ಬೇಯಿಸಿ ಅಡುಗೆ ಮಾಡಿ ಬಡಿಸಿದ್ದಾನೆ ಎಂದು ಅಮೆರಿಕ ಮಾಧ್ಯಮಗಳು ವರದಿ ಮಾಡಿವೆ. ಆರೋಪಿಯನ್ನು ಲಾರೆನ್ಸ್ ಪಾಲ್ ಆಂಡರ್ಸನ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಪ್ರಿಯಕರನೊಂದಿಗೆ ಸೇರಿ ಗಂಡನ ಕೊಲೆ; ಅಪಘಾತವೆಂದು ಬಿಂಬಿಸಲು ಮಾಡಿದ್ದರೂ ಖತರ್ನಾಕ್​ ಪ್ಲ್ಯಾನ್​

ಒಕ್ಲಹೋಮದ ಸ್ಥಳೀಯ ಮಾಧ್ಯಮಗಳು ಮಾಡಿರುವ ವರದಿ ಪ್ರಕಾರ, ಕೊಲೆ ಮಾಡಿದ ಬಳಿಕ ಆತ ಶವದಿಂದ ಕೆಲವು ಅಂಗಗಳನ್ನು ಹೊರಗೆ ತೆಗೆದಿದ್ದಾನೆ. ಅದರಲ್ಲಿ ಹೃದಯವನ್ನು ಕತ್ತರಿಸಿ, ಆಲೂಗಡ್ಡೆಯೊಂದಿಗೆ ಬೇಯಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಆತ ಮೃತ ಮಹಿಳೆಯ ಹೃದಯವನ್ನು ತನ್ನ ಚಿಕ್ಕಪ್ಪನ ಮನೆಗೆ ತಂದು ಅಲ್ಲಿ ಅದನ್ನು ಆಲೂಗಡ್ಡೆಯೊಂದಿಗೆ ಬೇಯಿಸಿ ಚಿಕ್ಕಪ್ಪ ಮತ್ತು ಅವರ ಹೆಂಡತಿಗೆ ಬಡಿಸಿದ್ದಾನೆ ಎಂದು ತನಿಖಾಧಿಕಾರಿಗಳು ಚಿಕಾಶಾದ ಗ್ರೇಡಿ ಕೌಂಟಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಇದಾದ ಬಳಿಕ ಆಂಡರ್ಸನ್ ಆ ಮನೆಯಲ್ಲಿದ್ದ ಚಿಕ್ಕಪ್ಪ ಮತ್ತು ಅವರ ನಾಲ್ಕು ವರ್ಷದ ಮೊಮ್ಮಗಳನ್ನು ಕೂಡ ಕೊಂದಿದ್ದಾನೆ. ತನ್ನ ಚಿಕ್ಕಪ್ಪನಿಗೆ ಚಾಕುವಿನಿಂದ ತಿವಿದು ತೀವ್ರವಾಗಿ ಗಾಯಗೊಳಿಸಿದ್ದಾನೆ.

ಇದನ್ನೂ ಓದಿ: ರಾಜಸ್ಥಾನ: ಮಗಳ ಕತ್ತು ಸೀಳಿ ಕೊಲೆ ಮಾಡಿ ದೇಹಕ್ಕೆ ಬೆಂಕಿ ಇಟ್ಟ ತಂದೆ

ಈ ಮೊದಲು ಕೂಡ ಕೊಲೆ ಮಾಡಿರುವ ಆರೋಪ ಹೊತ್ತಿರುವ ಆಂಡರ್ಸನ್ ಹಲವು ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದ. ಇತ್ತೀಚೆಗೆ ಆತ ಉತ್ತಮ ನಡವಳಿಕೆಯ ಆಧಾರದ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದ. ಜೈಲಿನಿಂದ ಬಿಡುಗಡೆಯಾದ ಕೆಲವೇ ವಾರಗಳ ನಂತರ ಈ ಅಪರಾಧ ಸಂಭವಿಸಿದೆ. 2017ರಲ್ಲಿ ಮಾದಕವಸ್ತು ಆರೋಪದ ಮೇಲೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?