AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಗೆಳೆಯನನ್ನು ಕೊಂದು ಘಾಟ್​ನಲ್ಲಿ ಶವ ಬಿಸಾಡುವಾಗ ತಾನೇ ಕಾಲು ಜಾರಿ ಬಿದ್ದು ಸತ್ತ ಹಂತಕ!

Murder News: 30 ವರ್ಷದ ವ್ಯಕ್ತಿಯೊಬ್ಬ ತನ್ನ ಸ್ನೇಹಿತನನ್ನು ಕೊಲೆ ಮಾಡಿದ್ದು, ಆತನ ಶವವನ್ನು ವಿಲೇವಾರಿ ಮಾಡುವಾಗ ಮಹಾರಾಷ್ಟ್ರದ ಅಂಬೋಲಿ ಘಾಟ್‌ನಲ್ಲಿ ಕಣಿವೆಯಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ.

Shocking News: ಗೆಳೆಯನನ್ನು ಕೊಂದು ಘಾಟ್​ನಲ್ಲಿ ಶವ ಬಿಸಾಡುವಾಗ ತಾನೇ ಕಾಲು ಜಾರಿ ಬಿದ್ದು ಸತ್ತ ಹಂತಕ!
ಅಂಬೋಲಿ ಘಾಟ್​​ನಲ್ಲಿ ಶವ ಬಿದ್ದ ಜಾಗದಲ್ಲಿ ಸೇರಿರುವ ಜನ
ಸುಷ್ಮಾ ಚಕ್ರೆ
|

Updated on: Feb 03, 2023 | 6:03 PM

Share

ಮುಂಬೈ: ಕರ್ಮ ಎಂಬುದು ಯಾರನ್ನೂ ಸುಮ್ಮನೆ ಬಿಡುವುದಿಲ್ಲ. ದುಡ್ಡಿನ ವಿಚಾರಕ್ಕೆ ತನ್ನ ಗೆಳೆಯನನ್ನೇ ಕೊಲೆ (Murder) ಮಾಡಿದ್ದ ವ್ಯಕ್ತಿಯೊಬ್ಬ ಆ ಶವವನ್ನು ಯಾರಿಗೂ ಗೊತ್ತಾಗದಂತೆ ಬಿಸಾಡಲು ಹೋದಾಗ ತಾನೇ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ! ಈ ವಿಚಿತ್ರವಾದ ಘಟನೆ ಮಹಾರಾಷ್ಟ್ರದ (Maharashtra) ಅಂಬೋಲಿ ಘಾಟ್​ನಲ್ಲಿ (Amboli Ghat) ನಡೆದಿದೆ.

30 ವರ್ಷದ ವ್ಯಕ್ತಿಯೊಬ್ಬ ಆರ್ಥಿಕ ವಿವಾದದ ಹಿನ್ನೆಲೆಯಲ್ಲಿ ತನ್ನ ಸ್ನೇಹಿತನನ್ನು ಕೊಲೆ ಮಾಡಿದ್ದು, ಆತನ ಶವವನ್ನು ವಿಲೇವಾರಿ ಮಾಡಲು ಪ್ರಯತ್ನಿಸುತ್ತಿದ್ದಾಗ ಸಾವಂತವಾಡಿಯ ಅಂಬೋಲಿ ಘಾಟ್‌ನಲ್ಲಿ ಕಡಿದಾದ ಬೆಟ್ಟದ ಇಳಿಜಾರಿನಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ. ಆ ಶವವನ್ನು ಎಸೆಯಲು ವ್ಯಕ್ತಿಗೆ ಸಹಾಯ ಮಾಡಿದ ಇನ್ನೊಬ್ಬ ವ್ಯಕ್ತಿ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ವ್ಯಕ್ತಿಯನ್ನು ಭೌಸೋ ಮಾನೆ ಎಂದು ಗುರುತಿಸಲಾಗಿದೆ. ಆತನ ಗೆಳೆಯ ಸುಶಾಂತ್ ಖಿಲ್ಲರೆ (30) ಎಂಬಾತನ ಜೊತೆಗಿನ ಆಸ್ತಿ ವಿವಾದದ ಬಳಿಕ ಭೌಸೋ ಮಾನೆ ಸುಶಾಂತ್​​ನನ್ನು ಭಾನುವಾರ ಕೊಲೆ ಮಾಡಿದ್ದ. ಅವರಿಬ್ಬರೂ ಒಂದೇ ಊರಿನವರಾಗಿದ್ದರು. ಬಳಿಕ, ತನ್ನ ಗೆಳೆಯನ ಸಹಾಯದಿಂದ ಅಂಬೋಲಿ ಘಾಟ್​​ನ ಬೆಟ್ಟದಿಂದ ಶವವನ್ನು ಬಿಸಾಡಲು ನಿರ್ಧರಿಸಿದ್ದ.

ಇದನ್ನೂ ಓದಿ: Bengaluru Crime: ಬೆಂಗಳೂರಿನಲ್ಲೊಂದು ಭೀಕರ ಘಟನೆ; ಗರ್ಲ್​ಫ್ರೆಂಡ್​ನ 3 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿ, ಕೊಲೆ

ಆ ಮೃತದೇಹವನ್ನು ಬೆಟ್ಟದ ಇಳಿಜಾರಿನಲ್ಲಿ ಎಸೆಯುವಾಗ ಭೌಸೋ ಮಾನೆ ಸಮತೋಲನ ಕಳೆದುಕೊಂಡು ಅದರೊಂದಿಗೆ ಕೆಳಗೆ ಬಿದ್ದಿದ್ದಾನೆ. ಎತ್ತರದಿಂದ ಬಿದ್ದಿದ್ದರಿಂದ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಆತನ ಜೊತೆಗಿದ್ದ ಇನ್ನೋರ್ವ ಗೆಳೆಯ ಸಮೀಪದ ದೇವಸ್ಥಾನಕ್ಕೆ ತೆರಳಿ, ನಡೆದ ಘಟನೆಗಳ ಬಗ್ಗೆ ತಮ್ಮ ಕುಟುಂಬಕ್ಕೆ ಫೋನ್ ಮಾಡಿ ತಿಳಿಸಿದ್ದಾನೆ.

ಭೌಸೋ ಮಾನೆ ತನ್ನ ಗೆಳೆಯ ಪವಾರ್ ಜೊತೆಗೆ ಸುಶಾಂತ್​ನ ಶವವನ್ನು ಎಸೆಯಲು ಕಾರಿನಲ್ಲಿ ಅಂಬೋಲಿ ಘಾಟ್‌ಗೆ 400 ಕಿ.ಮೀ ಪ್ರಯಾಣಿಸಿದ್ದ. ಆದರೆ, ಘಾಟ್‌ನಲ್ಲಿ ಗಡಿಬಿಡಿಯಿಂದ ಶವ ತುಂಬಿದ್ದ ಚೀಲವನ್ನು ಬಿಸಾಡುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದ. ವಿಷಯ ತಿಳಿದ ಪೊಲೀಸರು ಸುಶಾಂತ್​ನ ಶವ ಮತ್ತು ಬೌಸೋ ಮಾನೆಯ ಮೃತದೇಹವನ್ನು ವಶಕ್ಕೆ ಪಡೆದು, ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಭೌಸೋ ಮಾನೆಯ ಮೃತದೇಹ ಘಾಟ್​ನಿಂದ 150 ಅಡಿ ಇಳಿಜಾರಿನಲ್ಲಿ ಪತ್ತೆಯಾಗಿದೆ.

ಇದನ್ನೂ ಓದಿ: Crime News: ಆನ್​ಲೈನ್​ ಕ್ಲಾಸ್​ ವೇಳೆಯೇ ಶಿಕ್ಷಕನ ಹತ್ಯೆ; ಮೊಬೈಲ್​ನಲ್ಲಿ ಸೆರೆಯಾಯ್ತು ಸಂಪೂರ್ಣ ಘಟನೆ!

ಕೊಲ್ಹಾಪುರದಿಂದ ಸಾವಂತವಾಡಿಗೆ ಹೋಗುವ ಮಾರ್ಗದಲ್ಲಿರುವ ಅಂಬೋಲಿ ಘಾಟ್ ಮಹಾರಾಷ್ಟ್ರದ ಅತ್ಯಂತ ಬೇಡಿಕೆಯ ಪ್ರವಾಸಿ ಆಕರ್ಷಣೆಯಾಗಿದೆ. ಇಲ್ಲಿ ಇದುವರೆಗೂ ಅನೇಕ ಶವಗಳು ಪತ್ತೆಯಾಗಿವೆ. ಕೊಲೆ ಮಾಡಿದ ಬಳಿಕ ಶವವನ್ನು ಇಲ್ಲಿ ಬಿಸಾಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಆಳವಾದ ಕಣಿವೆಗಳು ಇರುವುದರಿಂದ ಶವ ಯಾರಿಗೂ ಸಿಗುವುದಿಲ್ಲ ಎಂಬುದು ಇದಕ್ಕೆ ಕಾರಣ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ