AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಮಗುವಿನ ಎದುರೇ ಹೆಂಡತಿಯನ್ನು ಕೊಂದು, ಸೂಟ್​ಕೇಸ್​ನಲ್ಲಿ ಪ್ಯಾಕ್ ಮಾಡಿದ ಗಂಡ!

Shocking News: ಲಂಡನ್​ನಲ್ಲಿ ದಂಪತಿ ನಡುವೆ ಜಗಳ ನಡೆದಿದ್ದು, ಈ ವೇಳೆ ತನ್ನ ಚಿಕ್ಕ ಮಗು ನೋಡುತ್ತಿರುವಂತೆಯೇ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಂದು, ಸೂಟ್‌ಕೇಸ್‌ನಲ್ಲಿ ಆ ಶವವನ್ನು ಪ್ಯಾಕ್ ಮಾಡಿರುವ ಘಟನೆ ನಡೆದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ಆಘಾತ ಸೃಷ್ಟಿಸಿದೆ.

Crime News: ಮಗುವಿನ ಎದುರೇ ಹೆಂಡತಿಯನ್ನು ಕೊಂದು, ಸೂಟ್​ಕೇಸ್​ನಲ್ಲಿ ಪ್ಯಾಕ್ ಮಾಡಿದ ಗಂಡ!
ಸಾಂದರ್ಭಿಕ ಚಿತ್ರ
ಸುಷ್ಮಾ ಚಕ್ರೆ
|

Updated on:Aug 22, 2024 | 9:05 PM

Share

ನವದೆಹಲಿ: ಪತ್ನಿಯನ್ನು ಗಂಡನೇ ಬರ್ಬರವಾಗಿ ಹತ್ಯೆಗೈದ ಬಳಿಕ ಆಕೆಯ ಮೃತದೇಹವನ್ನು ಸೂಟ್​ಕೇಸ್​ನಲ್ಲಿ ಪ್ಯಾಕ್ ಮಾಡಿ ಎಸೆದಿರುವ ಘಟನೆ ಲಂಡನ್​ನಲ್ಲಿ ನಡೆದಿದೆ. ಈ ಎಲ್ಲ ಘಟನೆಯನ್ನೂ ಆತನ ಸಣ್ಣ ಮಗು ನೋಡುತ್ತಾ ನಿಂತಿತ್ತು. ಇದೆಲ್ಲವೂ ಆ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆ ದೃಶ್ಯಾವಳಿಯನ್ನು ಆಧರಿಸಿ ಪೊಲೀಸರು ಕೊಲೆಗಾರ ಗಂಡನನ್ನು ಬಂಧಿಸಿದ್ದಾರೆ. ಗಂಡ-ಹೆಂಡತಿಯ ನಡುವಿನ ಜಗಳದಲ್ಲಿ ಮಗು ಅನಾಥವಾಗಿದೆ.

ಅಂದಹಾಗೆ, ಈ ಘಟನೆ ನಡೆದಿದ್ದು ಇತ್ತೀಚೆಗಲ್ಲ. 2023ರಲ್ಲಿ ನಡೆದ ಈ ಪ್ರಕರಣದ ಭಯಾನಕ ವಿಡಿಯೋ ಇದೀಗ ಎಲ್ಲೆಡೆ ಹರಿದಾಡುತ್ತಿದೆ. ಆ ವ್ಯಕ್ತಿ ಈಗ ಜೈಲು ಸೇರಿದ್ದಾನೆ. ಆ ವ್ಯಕ್ತಿ ತನ್ನ ಹೆಂಡತಿಯನ್ನು ಕತ್ತು ಹಿಸುಕಿ ಕೊಂದು, ಅವಳ ದೇಹವನ್ನು ಸೂಟ್‌ಕೇಸ್‌ನಲ್ಲಿ ಇರಿಸಿದನು. ನಂತರ ಅದನ್ನು ಥೇಮ್ಸ್ ನದಿಯಲ್ಲಿ ಎಸೆದನು. ಅವರ ಎರಡು ವರ್ಷದ ಮಗನ ಮುಂದೆಯೇ ಈ ಕೊಲೆ ನಡೆದಿದೆ. ಆ ಮಗು ತನ್ನ ತಂದೆ ತನ್ನ ತಾಯಿಯನ್ನು ಸೂಟ್​ಕೇಸ್​ನಲ್ಲಿ ತುಂಬುವುದನ್ನು ಕೂಡ ನೋಡುತ್ತಿತ್ತು.

ಇದನ್ನೂ ಓದಿ: Shocking Video: ದೇವಸ್ಥಾನದೊಳಗೆ ಅಶ್ಲೀಲ ಚಿತ್ರ ನೋಡುತ್ತಾ ಹಸ್ತಮೈಥುನ ಮಾಡಿಕೊಂಡ ಯುವಕ; ಶಾಕಿಂಗ್ ವಿಡಿಯೋ ವೈರಲ್

ಪೊಲೀಸರ ಪ್ರಕಾರ, ಮೃತ ಮಹಿಳೆಯನ್ನು ಬಾಂಗ್ಲಾದೇಶದ 24 ವರ್ಷದ ಸುಮಾ ಬೇಗಂ ಎಂದು ಗುರುತಿಸಲಾಗಿದೆ. ಆಕೆಯ ಪತಿ ಅಮೀನನ್ ರೆಹಮಾನ್ ತನ್ನ ಗೆಳೆಯನೊಂದಿಗೆ ವೀಡಿಯೊ ಕರೆಯಲ್ಲಿದ್ದಾಗ ಈ ಕೊಲೆ ಮಾಡಿದ್ದಾನೆ. ಆಕೆಯ ಗಂಡ ಮುಂಚಿತವಾಗಿಯೇ ಪ್ಲಾನ್ ಮಾಡಿ ಈ ಕೊಲೆ ಮಾಡಿದ್ದಾನೆ. ಗೆಳೆಯನ ಸಲಹೆ ಪಡೆದು ಮೊದಲು ತನ್ನ ಹೆಂಡತಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದನು. ಆಕೆಯ ಮರಣದ ನಂತರ, ಅವನು ಅವಳ ದೇಹವನ್ನು ಸೂಟ್​ಕೇಸ್​ಗೆ ತುಂಬಿದನು.

ಇದನ್ನೂ ಓದಿ: Shocking News: 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಸ್ತನ, ಗುಪ್ತಾಂಗ ಕತ್ತರಿಸಿ ಬರ್ಬರ ಹತ್ಯೆ

ಆಕೆಯ ಶವವಿದ್ದ ಸೂಟ್‌ಕೇಸ್ ಅನ್ನು ನಂತರ ಥೇಮ್ಸ್ ನದಿಗೆ ಎಸೆಯಲಾಯಿತು. ಇದು ಸಾಕ್ಷ್ಯವನ್ನು ವಿಲೇವಾರಿ ಮಾಡಲು ಆಯ್ಕೆ ಮಾಡಿದ ಸ್ಥಳವಾಗಿದೆ. ದೇಹವು ಅಂತಿಮವಾಗಿ ಪತ್ತೆಯಾಯಿತು. ಕೌಟುಂಬಿಕ ಹಿಂಸಾಚಾರ ಮತ್ತು ಮಕ್ಕಳ ರಕ್ಷಣೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿರುವ ಈ ಘಟನೆಯ ಕುರಿತು ಅಧಿಕಾರಿಗಳು ಸಂಪೂರ್ಣ ತನಿಖೆಯನ್ನು ನಡೆಸಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:04 pm, Thu, 22 August 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!