AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: 500 ರೂ.ಗಾಗಿ ಗೆಳೆಯನ ತಲೆ ಕತ್ತರಿಸಿ, ಪೊಲೀಸ್ ಠಾಣೆಗೆ ರುಂಡ ಹಿಡಿದು ಬಂದ ಹಂತಕ!

Assam News: ತುನಿರಾಮ್ ಮದ್ರಿ 25 ಕಿ.ಮೀ ನಡೆದುಕೊಂಡು ಪೊಲೀಸ್ ಠಾಣೆಗೆ ಬಂದು ತುಂಡರಿಸಿದ ತನ್ನ ಗೆಳೆಯನ ತಲೆಯನ್ನು ಟೇಬಲ್ ಮೇಲಿಟ್ಟು ಶರಣಾಗಿದ್ದಾನೆ.

Shocking News: 500 ರೂ.ಗಾಗಿ ಗೆಳೆಯನ ತಲೆ ಕತ್ತರಿಸಿ, ಪೊಲೀಸ್ ಠಾಣೆಗೆ ರುಂಡ ಹಿಡಿದು ಬಂದ ಹಂತಕ!
ಕೊಲೆ ಮಾಡಿ ತಲೆ ಹೊತ್ತು ತಂದ ಆರೋಪಿ
TV9 Web
| Edited By: |

Updated on: Aug 17, 2022 | 1:27 PM

Share

ಗುವಾಹಟಿ: ಕೇವಲ 500 ರೂ.ಗಾಗಿ ವ್ಯಕ್ತಿಯೊಬ್ಬ ಶಿರಚ್ಛೇದ ಮಾಡಿ, ಆ ರುಂಡವನ್ನು ಪೊಲೀಸ್ ಠಾಣೆಗೆ ತಂದಿರುವ ಭಯಾನಕ ಘಟನೆ ಅಸ್ಸಾಂನಲ್ಲಿ (Assam) ನಡೆದಿದೆ. ಅಸ್ಸಾಂನಲ್ಲಿ ಸೋಮವಾರ ಫುಟ್‌ಬಾಲ್ ಪಂದ್ಯವೊಂದರಲ್ಲಿ (Football Match) 500 ರೂ.ಗಳ ಬೆಟ್ಟಿಂಗ್ ಸೋತ ಬಳಿಕ ವ್ಯಕ್ತಿಯೊಬ್ಬ ತನ್ನ ಸ್ನೇಹಿತನ ಶಿರಚ್ಛೇದ ಮಾಡಿದ ಘಟನೆ ನಡೆದಿದೆ. ತುಂಡರಿಸಿದ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ ಆ ವ್ಯಕ್ತಿ 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ನಡೆದುಕೊಂಡು ಹೋಗಿ ಶರಣಾಗಿದ್ದಾನೆ.

ಉತ್ತರ ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಫುಟ್‌ಬಾಲ್ ಪಂದ್ಯ ಮುಗಿದ ಬೆನ್ನಲ್ಲೇ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಕೊಲೆಗಾರ ತುನಿರಾಮ್ ಮದ್ರಿ ಎಂಬಾತ ಬೆಟ್ಟಿಂಗ್ ಕಟ್ಟಿ ಸೋತಿದ್ದ. ಆದರೆ ಆತನಿಗೆ ಬೆಟ್ಟಿಂಗ್​​ನಲ್ಲಿ ಸೋತ 500 ರೂ. ಪಾವತಿಸಲು ತುನಿರಾಮ್ ನಿರಾಕರಿಸಿದ್ದ. ಇದೇ ವಿಚಾರಕ್ಕೆ ಕೊಲೆ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಊಟದ ವಿಚಾರವಾಗಿ ಗಂಡ-ಹೆಂಡತಿ ಜಗಳ: ಚಾಕುವಿನಿಂದ ಇರಿದು ಯೋಧನ ಬರ್ಬರ ಹತ್ಯೆ

ಪಂದ್ಯದ ನಂತರ, ತುನಿರಾಮ್ ಮದ್ರಿ ತನ್ನ ಗೆಳೆಯನಾದ ಬೋಯಿಲಾ ಹೆಮ್ರಮ್​ನನ್ನು ಊಟಕ್ಕೆ ಮನೆಗೆ ಕರೆದೊಯ್ದು, ಅಡುಗೆಗೆಂದು ಮೇಕೆಯನ್ನು ಕಡಿಯುತ್ತಿದ್ದಾಗ ಇಬ್ಬರ ನಡುವೆ ಬೆಟ್ಟಿಂಗ್ ಹಣದ ವಿಚಾರದಲ್ಲಿ ಜಗಳವಾಗಿತ್ತು. ಆಗ ಹೆಮ್ರಾಮ್ ತನ್ನ ಬೆಟ್ಟಿಂಗ್ ಹಣ ನೀಡಲು ಒತ್ತಾಯಿಸಿದಾಗ, ಕೋಪಗೊಂಡ ಮದ್ರಿ ಆತನನ್ನು ಮಚ್ಚಿನಿಂದ ಕತ್ತರಿಸಿ ಕೊಂದಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Shocking News: ಹೆಂಡತಿಯನ್ನು ಕೊಂದು, ಆಕೆಯ ರುಂಡ ಹಿಡಿದು ರಸ್ತೆ ತುಂಬ ಓಡಾಡಿದ ಗಂಡ!

ಕತ್ತರಿಸಿದ ತಲೆಯನ್ನು ತುನಿರಾಮ್ ಮದ್ರಿ ತಾನೇ ಇಟ್ಟುಕೊಂಡಿದ್ದ. ತನ್ನ ತಮ್ಮ ಕೊಲೆ ಮಾಡಿದ್ದನ್ನು ನೋಡಿ ಗಾಬರಿಯಾದ ಆತನ ಅಣ್ಣ ಆತನನ್ನು ಹಿಡಿಯಲು ಯತ್ನಿಸಿದನಾದರೂ ತುನಿರಾಮ್ ಆತನಿಂದ ತಪ್ಪಿಸಿಕೊಂಡು ಓಡಿಹೋಗಿದ್ದ. ನಂತರ ತುನಿರಾಮ್ ಮದ್ರಿ 25 ಕಿ.ಮೀ ನಡೆದುಕೊಂಡು ಪೊಲೀಸ್ ಠಾಣೆಗೆ ಬಂದು ತುಂಡರಿಸಿದ ತನ್ನ ಗೆಳೆಯನ ತಲೆಯನ್ನು ಟೇಬಲ್ ಮೇಲಿಟ್ಟು ಶರಣಾಗಿದ್ದಾನೆ. ಆತನನ್ನು ಕತ್ತರಿಸಿದ ಮಚ್ಚನ್ನೂ ಪೊಲೀಸರಿಗೆ ನೀಡಿದ್ದಾನೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ