AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: 500 ರೂ.ಗಾಗಿ ಗೆಳೆಯನ ತಲೆ ಕತ್ತರಿಸಿ, ಪೊಲೀಸ್ ಠಾಣೆಗೆ ರುಂಡ ಹಿಡಿದು ಬಂದ ಹಂತಕ!

Assam News: ತುನಿರಾಮ್ ಮದ್ರಿ 25 ಕಿ.ಮೀ ನಡೆದುಕೊಂಡು ಪೊಲೀಸ್ ಠಾಣೆಗೆ ಬಂದು ತುಂಡರಿಸಿದ ತನ್ನ ಗೆಳೆಯನ ತಲೆಯನ್ನು ಟೇಬಲ್ ಮೇಲಿಟ್ಟು ಶರಣಾಗಿದ್ದಾನೆ.

Shocking News: 500 ರೂ.ಗಾಗಿ ಗೆಳೆಯನ ತಲೆ ಕತ್ತರಿಸಿ, ಪೊಲೀಸ್ ಠಾಣೆಗೆ ರುಂಡ ಹಿಡಿದು ಬಂದ ಹಂತಕ!
ಕೊಲೆ ಮಾಡಿ ತಲೆ ಹೊತ್ತು ತಂದ ಆರೋಪಿ
TV9 Web
| Edited By: |

Updated on: Aug 17, 2022 | 1:27 PM

Share

ಗುವಾಹಟಿ: ಕೇವಲ 500 ರೂ.ಗಾಗಿ ವ್ಯಕ್ತಿಯೊಬ್ಬ ಶಿರಚ್ಛೇದ ಮಾಡಿ, ಆ ರುಂಡವನ್ನು ಪೊಲೀಸ್ ಠಾಣೆಗೆ ತಂದಿರುವ ಭಯಾನಕ ಘಟನೆ ಅಸ್ಸಾಂನಲ್ಲಿ (Assam) ನಡೆದಿದೆ. ಅಸ್ಸಾಂನಲ್ಲಿ ಸೋಮವಾರ ಫುಟ್‌ಬಾಲ್ ಪಂದ್ಯವೊಂದರಲ್ಲಿ (Football Match) 500 ರೂ.ಗಳ ಬೆಟ್ಟಿಂಗ್ ಸೋತ ಬಳಿಕ ವ್ಯಕ್ತಿಯೊಬ್ಬ ತನ್ನ ಸ್ನೇಹಿತನ ಶಿರಚ್ಛೇದ ಮಾಡಿದ ಘಟನೆ ನಡೆದಿದೆ. ತುಂಡರಿಸಿದ ತಲೆಯನ್ನು ಹಿಡಿದುಕೊಂಡು ರಾತ್ರಿಯ ವೇಳೆ ಆ ವ್ಯಕ್ತಿ 25 ಕಿ.ಮೀ ದೂರದ ಪೊಲೀಸ್ ಠಾಣೆಗೆ ನಡೆದುಕೊಂಡು ಹೋಗಿ ಶರಣಾಗಿದ್ದಾನೆ.

ಉತ್ತರ ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿದ್ದ ಫುಟ್‌ಬಾಲ್ ಪಂದ್ಯ ಮುಗಿದ ಬೆನ್ನಲ್ಲೇ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಕೊಲೆಗಾರ ತುನಿರಾಮ್ ಮದ್ರಿ ಎಂಬಾತ ಬೆಟ್ಟಿಂಗ್ ಕಟ್ಟಿ ಸೋತಿದ್ದ. ಆದರೆ ಆತನಿಗೆ ಬೆಟ್ಟಿಂಗ್​​ನಲ್ಲಿ ಸೋತ 500 ರೂ. ಪಾವತಿಸಲು ತುನಿರಾಮ್ ನಿರಾಕರಿಸಿದ್ದ. ಇದೇ ವಿಚಾರಕ್ಕೆ ಕೊಲೆ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಊಟದ ವಿಚಾರವಾಗಿ ಗಂಡ-ಹೆಂಡತಿ ಜಗಳ: ಚಾಕುವಿನಿಂದ ಇರಿದು ಯೋಧನ ಬರ್ಬರ ಹತ್ಯೆ

ಪಂದ್ಯದ ನಂತರ, ತುನಿರಾಮ್ ಮದ್ರಿ ತನ್ನ ಗೆಳೆಯನಾದ ಬೋಯಿಲಾ ಹೆಮ್ರಮ್​ನನ್ನು ಊಟಕ್ಕೆ ಮನೆಗೆ ಕರೆದೊಯ್ದು, ಅಡುಗೆಗೆಂದು ಮೇಕೆಯನ್ನು ಕಡಿಯುತ್ತಿದ್ದಾಗ ಇಬ್ಬರ ನಡುವೆ ಬೆಟ್ಟಿಂಗ್ ಹಣದ ವಿಚಾರದಲ್ಲಿ ಜಗಳವಾಗಿತ್ತು. ಆಗ ಹೆಮ್ರಾಮ್ ತನ್ನ ಬೆಟ್ಟಿಂಗ್ ಹಣ ನೀಡಲು ಒತ್ತಾಯಿಸಿದಾಗ, ಕೋಪಗೊಂಡ ಮದ್ರಿ ಆತನನ್ನು ಮಚ್ಚಿನಿಂದ ಕತ್ತರಿಸಿ ಕೊಂದಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Shocking News: ಹೆಂಡತಿಯನ್ನು ಕೊಂದು, ಆಕೆಯ ರುಂಡ ಹಿಡಿದು ರಸ್ತೆ ತುಂಬ ಓಡಾಡಿದ ಗಂಡ!

ಕತ್ತರಿಸಿದ ತಲೆಯನ್ನು ತುನಿರಾಮ್ ಮದ್ರಿ ತಾನೇ ಇಟ್ಟುಕೊಂಡಿದ್ದ. ತನ್ನ ತಮ್ಮ ಕೊಲೆ ಮಾಡಿದ್ದನ್ನು ನೋಡಿ ಗಾಬರಿಯಾದ ಆತನ ಅಣ್ಣ ಆತನನ್ನು ಹಿಡಿಯಲು ಯತ್ನಿಸಿದನಾದರೂ ತುನಿರಾಮ್ ಆತನಿಂದ ತಪ್ಪಿಸಿಕೊಂಡು ಓಡಿಹೋಗಿದ್ದ. ನಂತರ ತುನಿರಾಮ್ ಮದ್ರಿ 25 ಕಿ.ಮೀ ನಡೆದುಕೊಂಡು ಪೊಲೀಸ್ ಠಾಣೆಗೆ ಬಂದು ತುಂಡರಿಸಿದ ತನ್ನ ಗೆಳೆಯನ ತಲೆಯನ್ನು ಟೇಬಲ್ ಮೇಲಿಟ್ಟು ಶರಣಾಗಿದ್ದಾನೆ. ಆತನನ್ನು ಕತ್ತರಿಸಿದ ಮಚ್ಚನ್ನೂ ಪೊಲೀಸರಿಗೆ ನೀಡಿದ್ದಾನೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್