AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಆಮ್ಲೆಟ್​ ಸೀದು ಹೋಗಿದೆ ಎಂದ ಗ್ರಾಹಕನಿಗೆ ಬಿಸಿ ಬಾಣಲೆಯಿಂದ ಹೊಡೆದ ಹೋಟೆಲ್ ಮಾಲೀಕ

Crime News Today: ಆಮ್ಲೆಟ್ ಮಾರಾಟಗಾರನೊಬ್ಬ ನೀಡಿದ ಆಮ್ಲೆಟ್ ಸೀದು ಹೋಗಿದೆ ಎಂದು ದೂರಿದ್ದರಿಂದ ಗ್ರಾಹಕನ ತಲೆಗೆ ಬಿಸಿ ಬಾಣಲೆಯಿಂದ ಹೊಡೆದ ಆರೋಪದ ಮೇಲೆ ಆ ಅಂಗಡಿಯ ಮಾಲೀಕನನ್ನು ಬಂಧಿಸಲಾಗಿದೆ

Shocking News: ಆಮ್ಲೆಟ್​ ಸೀದು ಹೋಗಿದೆ ಎಂದ ಗ್ರಾಹಕನಿಗೆ ಬಿಸಿ ಬಾಣಲೆಯಿಂದ ಹೊಡೆದ ಹೋಟೆಲ್ ಮಾಲೀಕ
ಆಮ್ಲೆಟ್
TV9 Web
| Edited By: |

Updated on: Dec 13, 2021 | 8:30 PM

Share

ಮುಂಬೈ: ರಸ್ತೆ ಬದಿಯ ಸಣ್ಣ ಹೋಟೆಲ್​ಗೆ ಹೋದ ಗ್ರಾಹಕನೊಬ್ಬ ಆಮ್ಲೆಟ್ ಆರ್ಡರ್ ಮಾಡಿದ. ತನಗೆ ನೀಡಿದ ಆಮ್ಲೆಟ್ ಸೀದು ಹೋಗಿದೆ ಎಂದು ಆತ ರೇಗಾಡಿದ್ದರಿಂದ ಕೋಪಗೊಂಡ ಆ ಅಂಗಡಿಯ ಮಾಲೀಕ ಆ ಗ್ರಾಹಕನ ತಲೆಗೆ ಬಿಸಿಯಾದ ಬಾಣಲೆಯಿಂದ ಹೊಡೆದಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಆಮ್ಲೆಟ್ ಮಾರಾಟಗಾರನೊಬ್ಬ ನೀಡಿದ ಆಮ್ಲೆಟ್ ಸೀದು ಹೋಗಿದೆ ಎಂದು ದೂರಿದ್ದರಿಂದ ಗ್ರಾಹಕನ ತಲೆಗೆ ಬಿಸಿ ಬಾಣಲೆಯಿಂದ ಹೊಡೆದ ಆರೋಪದ ಮೇಲೆ ಆ ಅಂಗಡಿಯ ಮಾಲೀಕನನ್ನು ಬಂಧಿಸಲಾಗಿದೆ ಎಂದು ನಾಗ್ಪುರದ ಸಿತಾಬುಲ್ಡಿ ಪ್ರದೇಶದ ಪೊಲೀಸರು ತಿಳಿಸಿದ್ದಾರೆ.

ತನ್ನ ಗ್ರಾಹಕನಿಗೆ ಬಾಣಲಿಯಿಂದ ಹೊಡೆದ ಆರೋಪಿಯನ್ನು ವಿನೋದ್ ರಾಥೋಡ್ (48) ಎಂದು ಗುರುತಿಸಲಾಗಿದ್ದು, ಹಲ್ಲೆಗೊಳಗಾದ ವ್ಯಕ್ತಿ ಅಮರಾವತಿ ನಿವಾಸಿ ಸಂದೀಪ್ ಸಾಯರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಸಯಾರೆ ಸಮೀಪದ ರೈಲ್ವೇ ನಿಲ್ದಾಣದಲ್ಲಿ ಇಳಿದು ಸಂದೀಪ್ ಸಾಯರೆ 40 ರೂ. ಬೆಲೆಯ ಆಮ್ಲೆಟ್‌ ಆರ್ಡರ್ ಮಾಡಿದ್ದರು. ಆದರೆ, ಆ ಅಂಗಡಿಯವನು ಕೊಟ್ಟ ಆಮ್ಲೆಟ್ ಸುಟ್ಟು ಹೋಗಿದ್ದರಿಂದ ಅದರ ಬದಲಾಗಿ ಬೇರೆ ಆಮ್ಲೆಟ್ ನೀಡುವಂತೆ ಆತ ಒತ್ತಾಯಿಸಿದ್ದ. ಇದೇ ವಿಷಯಕ್ಕೆ ಇಬ್ಬರ ಮಧ್ಯೆ ಸಣ್ಣ ವಾಗ್ವಾದವೂ ನಡೆದಿತ್ತು. ನಂತರ ಆ ಅಂಗಡಿಯ ಮಾಲೀಕ ಸಂದೀಪ್ ತಲೆಗೆ ಬಿಸಿ ಬಾಣಲೆಯಿಂದ ಹೊಡೆದಿದ್ದಾನೆ.

ಸಂದೀಪ್ ರಾಥೋಡ್ ಸಾಯರೆಗೆ ಹೊಡೆದಿದ್ದಕ್ಕಾಗಿ ಐಪಿಸಿ ಸೆಕ್ಷನ್ 324 ಮತ್ತು 504ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಂದೀಪ್​ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: Shocking News: ತಣ್ಣಗಾದ ಐಸ್​ ಕ್ರೀಂ ಕೊಟ್ಟಿದ್ದಕ್ಕೆ ರೆಸ್ಟೋರೆಂಟ್​ನಿಂದ ಹಣ ವಾಪಾಸ್ ಕೇಳಿದ ಗ್ರಾಹಕ!

Viral Photo: ಕುಕ್ಕರ್ ಜೊತೆ ಮದುವೆಯಾಗಿ ಎರಡೇ ದಿನಕ್ಕೆ ಡೈವೋರ್ಸ್ ನೀಡಿದ ಯುವಕ; ಕಾರಣವೇನು ಗೊತ್ತಾ?

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ