AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಆಮ್ಲೆಟ್​ ಸೀದು ಹೋಗಿದೆ ಎಂದ ಗ್ರಾಹಕನಿಗೆ ಬಿಸಿ ಬಾಣಲೆಯಿಂದ ಹೊಡೆದ ಹೋಟೆಲ್ ಮಾಲೀಕ

Crime News Today: ಆಮ್ಲೆಟ್ ಮಾರಾಟಗಾರನೊಬ್ಬ ನೀಡಿದ ಆಮ್ಲೆಟ್ ಸೀದು ಹೋಗಿದೆ ಎಂದು ದೂರಿದ್ದರಿಂದ ಗ್ರಾಹಕನ ತಲೆಗೆ ಬಿಸಿ ಬಾಣಲೆಯಿಂದ ಹೊಡೆದ ಆರೋಪದ ಮೇಲೆ ಆ ಅಂಗಡಿಯ ಮಾಲೀಕನನ್ನು ಬಂಧಿಸಲಾಗಿದೆ

Shocking News: ಆಮ್ಲೆಟ್​ ಸೀದು ಹೋಗಿದೆ ಎಂದ ಗ್ರಾಹಕನಿಗೆ ಬಿಸಿ ಬಾಣಲೆಯಿಂದ ಹೊಡೆದ ಹೋಟೆಲ್ ಮಾಲೀಕ
ಆಮ್ಲೆಟ್
TV9 Web
| Edited By: |

Updated on: Dec 13, 2021 | 8:30 PM

Share

ಮುಂಬೈ: ರಸ್ತೆ ಬದಿಯ ಸಣ್ಣ ಹೋಟೆಲ್​ಗೆ ಹೋದ ಗ್ರಾಹಕನೊಬ್ಬ ಆಮ್ಲೆಟ್ ಆರ್ಡರ್ ಮಾಡಿದ. ತನಗೆ ನೀಡಿದ ಆಮ್ಲೆಟ್ ಸೀದು ಹೋಗಿದೆ ಎಂದು ಆತ ರೇಗಾಡಿದ್ದರಿಂದ ಕೋಪಗೊಂಡ ಆ ಅಂಗಡಿಯ ಮಾಲೀಕ ಆ ಗ್ರಾಹಕನ ತಲೆಗೆ ಬಿಸಿಯಾದ ಬಾಣಲೆಯಿಂದ ಹೊಡೆದಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಆಮ್ಲೆಟ್ ಮಾರಾಟಗಾರನೊಬ್ಬ ನೀಡಿದ ಆಮ್ಲೆಟ್ ಸೀದು ಹೋಗಿದೆ ಎಂದು ದೂರಿದ್ದರಿಂದ ಗ್ರಾಹಕನ ತಲೆಗೆ ಬಿಸಿ ಬಾಣಲೆಯಿಂದ ಹೊಡೆದ ಆರೋಪದ ಮೇಲೆ ಆ ಅಂಗಡಿಯ ಮಾಲೀಕನನ್ನು ಬಂಧಿಸಲಾಗಿದೆ ಎಂದು ನಾಗ್ಪುರದ ಸಿತಾಬುಲ್ಡಿ ಪ್ರದೇಶದ ಪೊಲೀಸರು ತಿಳಿಸಿದ್ದಾರೆ.

ತನ್ನ ಗ್ರಾಹಕನಿಗೆ ಬಾಣಲಿಯಿಂದ ಹೊಡೆದ ಆರೋಪಿಯನ್ನು ವಿನೋದ್ ರಾಥೋಡ್ (48) ಎಂದು ಗುರುತಿಸಲಾಗಿದ್ದು, ಹಲ್ಲೆಗೊಳಗಾದ ವ್ಯಕ್ತಿ ಅಮರಾವತಿ ನಿವಾಸಿ ಸಂದೀಪ್ ಸಾಯರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಸಯಾರೆ ಸಮೀಪದ ರೈಲ್ವೇ ನಿಲ್ದಾಣದಲ್ಲಿ ಇಳಿದು ಸಂದೀಪ್ ಸಾಯರೆ 40 ರೂ. ಬೆಲೆಯ ಆಮ್ಲೆಟ್‌ ಆರ್ಡರ್ ಮಾಡಿದ್ದರು. ಆದರೆ, ಆ ಅಂಗಡಿಯವನು ಕೊಟ್ಟ ಆಮ್ಲೆಟ್ ಸುಟ್ಟು ಹೋಗಿದ್ದರಿಂದ ಅದರ ಬದಲಾಗಿ ಬೇರೆ ಆಮ್ಲೆಟ್ ನೀಡುವಂತೆ ಆತ ಒತ್ತಾಯಿಸಿದ್ದ. ಇದೇ ವಿಷಯಕ್ಕೆ ಇಬ್ಬರ ಮಧ್ಯೆ ಸಣ್ಣ ವಾಗ್ವಾದವೂ ನಡೆದಿತ್ತು. ನಂತರ ಆ ಅಂಗಡಿಯ ಮಾಲೀಕ ಸಂದೀಪ್ ತಲೆಗೆ ಬಿಸಿ ಬಾಣಲೆಯಿಂದ ಹೊಡೆದಿದ್ದಾನೆ.

ಸಂದೀಪ್ ರಾಥೋಡ್ ಸಾಯರೆಗೆ ಹೊಡೆದಿದ್ದಕ್ಕಾಗಿ ಐಪಿಸಿ ಸೆಕ್ಷನ್ 324 ಮತ್ತು 504ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಂದೀಪ್​ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: Shocking News: ತಣ್ಣಗಾದ ಐಸ್​ ಕ್ರೀಂ ಕೊಟ್ಟಿದ್ದಕ್ಕೆ ರೆಸ್ಟೋರೆಂಟ್​ನಿಂದ ಹಣ ವಾಪಾಸ್ ಕೇಳಿದ ಗ್ರಾಹಕ!

Viral Photo: ಕುಕ್ಕರ್ ಜೊತೆ ಮದುವೆಯಾಗಿ ಎರಡೇ ದಿನಕ್ಕೆ ಡೈವೋರ್ಸ್ ನೀಡಿದ ಯುವಕ; ಕಾರಣವೇನು ಗೊತ್ತಾ?

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್