AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಕಾಳಿ ದೇವಿ ವಿಗ್ರಹದ ಪಾದದ ಮೇಲೆ ಕತ್ತರಿಸಿದ ತಲೆ ಪತ್ತೆ; ಉಳಿದ ದೇಹಕ್ಕಾಗಿ ಪೊಲೀಸರಿಂದ ಹುಡುಕಾಟ

Crime News: ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಕಾಳಿ ದೇವಿಯ ಮೂರ್ತಿಯ ಪಾದದ ಮೇಲೆ ತಲೆ ಇಟ್ಟ ರೀತಿಯನ್ನು ನೋಡಿದರೆ ಇದು ನರಬಲಿ ಇರಬಹುದು ಎಂಬ ಅನುಮಾನ ಕೂಡ ವ್ಯಕ್ತವಾಗಿದೆ.

Shocking News: ಕಾಳಿ ದೇವಿ ವಿಗ್ರಹದ ಪಾದದ ಮೇಲೆ ಕತ್ತರಿಸಿದ ತಲೆ ಪತ್ತೆ; ಉಳಿದ ದೇಹಕ್ಕಾಗಿ ಪೊಲೀಸರಿಂದ ಹುಡುಕಾಟ
ಕಾಳಿ ಮಾತೆಯ ವಿಗ್ರಹದ ಬಳಿ ತಲೆ ಪತ್ತೆ
TV9 Web
| Updated By: ಸುಷ್ಮಾ ಚಕ್ರೆ|

Updated on: Jan 11, 2022 | 1:48 PM

Share

ಹೈದರಾಬಾದ್: ತೆಲಂಗಾಣದ ರಸ್ತೆ ಬದಿಯ ಪೂಜಾ ಸ್ಥಳದಲ್ಲಿ ಕಾಳಿ ಮಾತೆಯ ವಿಗ್ರಹದ ಪಾದದ ಬುಡದಲ್ಲಿ ವ್ಯಕ್ತಿಯ ಕತ್ತರಿಸಿದ ತಲೆ ಪತ್ತೆಯಾಗಿದ್ದು, ಆ ವ್ಯಕ್ತಿಯ ಗುರುತನ್ನು ಪತ್ತೆಹಚ್ಚಲು ಪೊಲೀಸರು ಹುಡುಕಾಟ ನಡೆಸಿದ್ದಾರೆ. ರಸ್ತೆ ಬದಿಯಲ್ಲಿ ಕತ್ತರಿಸಿದ ರುಂಡ ಇಟ್ಟಿರುವ ಆಘಾತಕಾರಿ ಘಟನೆಯಿಂದ ಸುತ್ತಮುತ್ತಲಿನ ಜನರು ಶಾಕ್ ಆಗಿದ್ದು, ಆ ಕೊಲೆಯಾದ ವ್ಯಕ್ತಿ ಯಾರೆಂದು ಪತ್ತೆಹಚ್ಚಲು ಹಾಗೂ ಕೊಲೆಗಾರರನ್ನು ಹುಡುಕಲು ಪೊಲೀಸರು 8 ತಂಡಗಳನ್ನು ರಚಿಸಿದ್ದಾರೆ.

ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಕಾಳಿ ದೇವಿಯ ಮೂರ್ತಿಯ ಪಾದದ ಮೇಲೆ ತಲೆ ಇಟ್ಟ ರೀತಿಯನ್ನು ನೋಡಿದರೆ ಇದು ನರಬಲಿ ಇರಬಹುದು ಎಂಬ ಅನುಮಾನ ಕೂಡ ವ್ಯಕ್ತವಾಗಿದೆ. ಇದು ಕೊಲೆಯೋ ಅಥವಾ ನರಬಲಿಯೋ ಎಂಬುದು ತನಿಖೆಯ ಬಳಿಕ ಖಚಿತವಾಗಲಿದೆ.

ಸುಮಾರು 30ರ ಆಸುಪಾಸಿನ ವ್ಯಕ್ತಿಯನ್ನು ಬೇರೆಡೆ ಹತ್ಯೆಗೈದು ಕಾಳಿ ಮಾತೆಯ ಪಾದದಡಿ ತಂದು ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಬಳಿಕ ಆತನ ದೇಹವನ್ನು ಬೇರೆಡೆ ತೆಗೆದುಕೊಂಡು ಹೋಗಲಾಗಿರುವ ಅನುಮಾನ ವ್ಯಕ್ತವಾಗಿದೆ ಎಂದು ದೇವರಕೊಂಡದ ಉಪ ಪೊಲೀಸ್ ವರಿಷ್ಠಾಧಿಕಾರಿ ಆನಂದರೆಡ್ಡಿ ತಿಳಿಸಿದ್ದಾರೆ. ಎಲ್ಲ ಆಯಾಮಗಳಲ್ಲೂ ಈ ಕುರಿತು ತನಿಖೆ ನಡೆಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಮೃತಪಟ್ಟ ವ್ಯಕ್ತಿಯ ಶವವನ್ನು ಇನ್ನೂ ಪತ್ತೆ ಮಾಡಲಾಗಿಲ್ಲ ಮತ್ತು ದೇಹದ ಉಳಿದ ಅರ್ಧ ಭಾಗವನ್ನು ಪತ್ತೆಹಚ್ಚಲು ಪೊಲೀಸರು ಆ ಪ್ರದೇಶದಲ್ಲಿನ ಸಿಸಿಟಿವಿ ಕ್ಯಾಮೆರಾದ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಳಿ ದೇವಿಯ ಪ್ರತಿಮೆಯ ಪಾದದಲ್ಲಿ ತಲೆ ಕತ್ತರಿಸಿರುವ ಭಯಾನಕ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪೊಲೀಸರು ಕೂಡ ವ್ಯಕ್ತಿಯ ಗುರುತನ್ನು ಖಚಿತಪಡಿಸಲು ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ರಸ್ತೆ ಬದಿಯ ಕಾಳಿ ಮಾತೆಯ ಪೂಜಾ ಸ್ಥಳದಲ್ಲಿನ ಅರ್ಚಕರು ತಾವು ಪೂಜಿಸುವ ದೇವಿಯ ವಿಗ್ರಹದ ಪಾದದಲ್ಲಿ ಕತ್ತರಿಸಿದ ತಲೆಯನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ನಂತರ ಈ ವಿಷಯ ಬೆಳಕಿಗೆ ಬಂದಿದೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: Shocking News: ಅಜ್ಜಿ ಪಕ್ಕ ಮಲಗಿದ್ದ ಮಗುವನ್ನು ಎತ್ತಿಕೊಂಡು ನೀರಿನ ಟ್ಯಾಂಕ್​ನಲ್ಲಿ ಹಾಕಿದ ಕೋತಿಗಳು!

Shocking News: ಧಾರಾವಾಹಿ ತಂದ ಅವಾಂತರ; ಮಹಿಳೆಯರು ಟಿವಿ ನೋಡುತ್ತಿದ್ದಾಗ ಹಣ, ಒಡವೆ ದೋಚಿದ ಕಳ್ಳರು!

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ