AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸಾರಾಂ ಬಾಪು ಆಶ್ರಮದೊಳಗೆ ನಿಲ್ಲಿಸಿದ್ದ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಬಾಲಕಿಯ ಶವ ಪತ್ತೆ

ಬಾಲಕಿಯ ಕೊಲೆ ಮಾಡಿದ ಬಳಿಕ ಆಕೆಯ ಶವವನ್ನು ಕಾರಿನಲ್ಲಿ ಬಚ್ಚಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಆ ಕಾರು ನಿಲ್ಲಿಸಿದ್ದ ಜಾಗದಲ್ಲಿ ದುರ್ವಾಸನೆ ಬರುತ್ತಿದ್ದುದರಿಂದ ಸ್ಥಳೀಯರಿಗೆ ಅನುಮಾನ ಉಂಟಾಗಿತ್ತು.

ಅಸಾರಾಂ ಬಾಪು ಆಶ್ರಮದೊಳಗೆ ನಿಲ್ಲಿಸಿದ್ದ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿ ಬಾಲಕಿಯ ಶವ ಪತ್ತೆ
ಅಸಾರಾಂ ಬಾಪು ಆಶ್ರಮ
TV9 Web
| Edited By: |

Updated on: Apr 08, 2022 | 8:04 PM

Share

ನವದೆಹಲಿ: ಉತ್ತರ ಪ್ರದೇಶದ ಗೋಂಡಾದಲ್ಲಿರುವ ಸ್ವಯಂಘೋಷಿತ ದೇವಮಾನವ ಮತ್ತು ಅತ್ಯಾಚಾರ ಆರೋಪಿ ಅಸಾರಾಂ ಬಾಪು (Asaram Bapu) ಅವರ ಆಶ್ರಮದೊಳಗೆ ನಿಲ್ಲಿಸಲಾಗಿದ್ದ ಆಲ್ಟೋ ಕಾರಿನಲ್ಲಿ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಶವ ಪತ್ತೆಯಾಗಿದೆ. ಪೊಲೀಸರು ಬಾಲಕಿಯ ಶವವನ್ನು (Missing Girl Deadbody) ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಹಾಗೇ, ಗೊಂಡಾದ ದೇಹತ್ ಕೊಟ್ವಾಲಿ ಪ್ರದೇಶದ ಅಡಿಯಲ್ಲಿ ಬರುವ ಬಹ್ರೈಚ್ ರಸ್ತೆಯಲ್ಲಿರುವ ಆಶ್ರಮವನ್ನು ಸೀಲ್ ಮಾಡಿದ್ದಾರೆ.

ಕೆಲವು ದಿನಗಳಿಂದ ನಿಂತಿದ್ದ ಕಾರಿನಲ್ಲಿ ಬಾಲಕಿಯ ಮೃತದೇಹ ಇರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ ಬಳಿಕ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಶ್ರಮದ ವ್ಯಕ್ತಿಯೊಬ್ಬನನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಪ್ರಕರಣದ ತನಿಖೆಯಲ್ಲಿ ಫೋರೆನ್ಸಿಕ್ ತಂಡದ ಅಧಿಕಾರಿಗಳು ಪೊಲೀಸ್ ಸಿಬ್ಬಂದಿಗೆ ಸಹಾಯ ಮಾಡುತ್ತಿದ್ದಾರೆ.

ಬಾಲಕಿಯ ಕೊಲೆ ಮಾಡಿದ ಬಳಿಕ ಆಕೆಯ ಶವವನ್ನು ಕಾರಿನಲ್ಲಿ ಬಚ್ಚಿಟ್ಟಿರುವ ಶಂಕೆ ವ್ಯಕ್ತವಾಗಿದೆ. ಆ ಕಾರು ನಿಲ್ಲಿಸಿದ್ದ ಜಾಗದಲ್ಲಿ ದುರ್ವಾಸನೆ ಬರುತ್ತಿದ್ದುದರಿಂದ ಸ್ಥಳೀಯರಿಗೆ ಅನುಮಾನ ಉಂಟಾಗಿತ್ತು. ಆ ಕಾರಿಗೆ ಮುಚ್ಚಲಾಗಿದ್ದ ಕವರ್ ಸರಿಸಿ ನೋಡಿದಾಗ ಕಾರಿನೊಳಗೆ ಶವ ಇರುವುದನ್ನು ಕಾವಲುಗಾರ ನೋಡಿದ್ದ. ಹೀಗಾಗಿ, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಯಿತು.

ಈ ಘಟನೆಯು ಆಶ್ರಮದ ಸುತ್ತಮುತ್ತಲಿನ ಪ್ರದೇಶದಲ್ಲಿ ವಿವಾದವನ್ನು ಹುಟ್ಟುಹಾಕಿದೆ. ಈ ಬಗ್ಗೆ ಜೋಧ್‌ಪುರದ ವಿಶೇಷ ನ್ಯಾಯಾಲಯವು ಅತ್ಯಾಚಾರದ ಆರೋಪದ ನಂತರ 2018ರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಅಸಾರಾಂ ಬಾಪು ಅವರನ್ನು ಮತ್ತೊಮ್ಮೆ ಬೆಳಕಿಗೆ ತಂದಿತು. ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು 2013ರಲ್ಲಿ ಜೋಧ್‌ಪುರದ ತನ್ನ ಆಶ್ರಮದಲ್ಲಿ 16 ವರ್ಷದ ಹುಡುಗಿಯ ಮೇಲೆ ಅತ್ಯಾಚಾರ ಎಸಗಿದ ಅಪರಾಧ ಎದುರಿಸುತ್ತಿದ್ದಾರೆ.

ಮಂಗಳವಾರ ತನ್ನ ಮಗಳು ಕಣ್ಮರೆಯಾಗಿದ್ದಾಳೆ ಎಂದು ಹುಡುಗಿಯ ತಾಯಿ ಹೇಳಿದ್ದಾರೆ. ನಗರದ ಎಲ್ಲಾ ಸ್ಥಳಗಳಲ್ಲಿ ಅವಳನ್ನು ಹುಡುಕಲು ಪ್ರಯತ್ನಿಸಿದರೂ ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಪೊಲೀಸರಿಗೆ ದೂರು ನೀಡಿದ್ದರು. ಬಾಲಕಿಯ ಶವವನ್ನು ಸ್ವಾಧೀನಪಡಿಸಿಕೊಂಡ ನಂತರ ಪೊಲೀಸರು ಈ ವಿಷಯದ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದ್ದಾರೆ.

ಇದನ್ನೂ ಓದಿ: Shocking News: ಮನೆ ಹೊರಗೆ ಆಡುತ್ತಿದ್ದ ಅಣ್ಣ-ತಂಗಿ ಮೇಲೆ 20ಕ್ಕೂ ಹೆಚ್ಚು ಬೀದಿ ನಾಯಿಗಳ ದಾಳಿ; ಬಾಲಕ ಸಾವು

Shocking News: ಗರ್ಭಿಣಿ ಮೇಕೆಯ ಮೇಲೆ ಅತ್ಯಾಚಾರವೆಸಗಿ, ಕೊಲೆ; ಕಾಸರಗೋಡಿನಲ್ಲೊಂದು ಆಘಾತಕಾರಿ ಘಟನೆ

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?