AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಬುರ್ಖಾ ಧರಿಸಲಿಲ್ಲ ಎಂದು ಹಿಂದೂ ಹೆಂಡತಿಯ ಕತ್ತು ಸೀಳಿ ಕೊಂದ ಗಂಡ!

ಮದುವೆಯ ನಂತರ ರೂಪಾಲಿ ಇಸ್ಲಾಮಿಕ್ ಸಂಪ್ರದಾಯವನ್ನು ಅನುಸರಿಸಬೇಕೆಂದು ಮತ್ತು ಬುರ್ಖಾವನ್ನು ಧರಿಸಬೇಕೆಂದು ಇಕ್ಬಾಲ್ ಮೊಹಮ್ಮದ್ ಶೇಖ್ ಅವರ ಕುಟುಂಬ ಒತ್ತಡ ಹೇರಿತ್ತು. ಆದರೆ, ಆಕೆ ಇಸ್ಲಾಂ ಧರ್ಮವನ್ನು ಅನುಸರಿಸಲು ಸಿದ್ಧಳಿರಲಿಲ್ಲ.

Shocking News: ಬುರ್ಖಾ ಧರಿಸಲಿಲ್ಲ ಎಂದು ಹಿಂದೂ ಹೆಂಡತಿಯ ಕತ್ತು ಸೀಳಿ ಕೊಂದ ಗಂಡ!
TV9 Web
| Edited By: |

Updated on: Sep 28, 2022 | 2:20 PM

Share

ಮುಂಬೈ: ಮಹಾರಾಷ್ಟ್ರದ ಮುಂಬೈ (Mumbai Crime News) ನಿವಾಸಿ ಇಕ್ಬಾಲ್ ಮೊಹಮ್ಮದ್ ಶೇಖ್ ಎಂಬಾತನ ಹಿಂದೂ ಪತ್ನಿ ಬುರ್ಖಾ ಧರಿಸಲು ನಿರಾಕರಿಸಿದ್ದರಿಂದ ಆತ ಆಕೆಯನ್ನು ಕೊಲೆ (Murder) ಮಾಡಿರುವ ಘಟನೆ ತಿಲಕ್ ನಗರ ಪ್ರದೇಶದಲ್ಲಿ ನಡೆದಿದೆ. ಬುರ್ಖಾ ಧರಿಸಲು ನಿರಾಕರಿಸಿದ್ದಕ್ಕೆ ಮತ್ತು ಇಸ್ಲಾಮಿಕ್ ಆಚರಣೆಗಳನ್ನು ಅನುಸರಿಸಲು ಒಪ್ಪದ ಹಿನ್ನೆಲೆಯಲ್ಲಿ ತನ್ನ ಹಿಂದೂ ಪತ್ನಿಯನ್ನು ಹತ್ಯೆಗೈದ ಆರೋಪದಲ್ಲಿ ಇಕ್ಬಾಲ್ ಮೊಹಮ್ಮದ್ ಶೇಖ್​ನನ್ನು ಬಂಧಿಸಲಾಗಿದೆ. ಮೃತ ಮಹಿಳೆಯ ಕುಟುಂಬದವರು ನೀಡಿದ ಮಾಹಿತಿಯ ಮೇರೆಗೆ ಈ ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮೃತ ಮಹಿಳೆ ರೂಪಾಲಿ ಮತ್ತು ಆರೋಪಿ ಇಕ್ಬಾಲ್ ಮೊಹಮ್ಮದ್ ಶೇಖ್ ಮದುವೆಯಾಗಿ 3 ವರ್ಷವಾಗಿತ್ತು. ಅವರ ಮದುವೆಯ ನಂತರ ರೂಪಾಲಿ ಇಸ್ಲಾಮಿಕ್ ಸಂಪ್ರದಾಯವನ್ನು ಅನುಸರಿಸಬೇಕೆಂದು ಮತ್ತು ಬುರ್ಖಾವನ್ನು ಧರಿಸಬೇಕೆಂದು ಇಕ್ಬಾಲ್ ಮೊಹಮ್ಮದ್ ಶೇಖ್ ಅವರ ಕುಟುಂಬ ಒತ್ತಡ ಹೇರಿತ್ತು. ಆದರೆ, ಆಕೆ ಇಸ್ಲಾಂ ಧರ್ಮವನ್ನು ಅನುಸರಿಸಲು ಸಿದ್ಧಳಿರಲಿಲ್ಲ. ಹಿಂದೂ ಧರ್ಮದ ಆಚರಣೆಗಳನ್ನೇ ಮುಂದುವರಿಸಲು ಆಕೆ ನಿರ್ಧರಿಸಿದ್ದಳು. ಇದಕ್ಕೆ ಅವಳ ಗಂಡನ ಮನೆಯಲ್ಲಿ ಸದಾ ಜಗಳವಾಗುತ್ತಿತ್ತು.

ಇದನ್ನೂ ಓದಿ: Big News: ಮುಸ್ಲಿಂ ದಂಪತಿಯಿಂದ ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ 1 ಕೋಟಿ ರೂ. ದೇಣಿಗೆ

22 ವರ್ಷದ ಯುವಕ ಇಕ್ಬಾಲ್ ಮೊಹಮ್ಮದ್ ಶೇಖ್ ಇದರಿಂದ ಹೆಂಡತಿಯಿಂದ ಪ್ರತ್ಯೇಕವಾಗಿ ವಾಸಿಸಲು ನಿರ್ಧರಿಸಿದನು. ಸೆಪ್ಟೆಂಬರ್ 26ರ ಸೋಮವಾರ ಸಂಜೆ ಆತ ತನ್ನ ಹೆಂಡತಿಯನ್ನು ಭೇಟಿಯಾದಾಗ ಕೋಪದಿಂದ ತನ್ನ ಹೆಂಡತಿಯನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಸೋಮವಾರ ಇಕ್ಬಾಲ್ ಶೇಖ್​ನನ್ನು ಭೇಟಿಯಾಗಿದ್ದ ರೂಪಾಲಿ ತನಗೆ ವಿಚ್ಛೇದನ ನೀಡಲು ಒತ್ತಾಯಿಸಿದ್ದಳು. ಆದರೆ ಅವರಿಗೆ ಮಗು ಇದ್ದುದರಿಂದ ಅವನು ವಿಚ್ಛೇದನಕ್ಕೆ ಒಪ್ಪಿರಲಿಲ್ಲ.

ತನ್ನ ಮಗನನ್ನು ತನ್ನ ಜೊತೆಯೇ ಕಳುಹಿಸಬೇಕೆಂದು ಆತ ಹೆಂಡತಿಯ ಹತ್ತಿರ ಜಗಳವಾಡಿದ್ದ. ಅದಕ್ಕೆ ರೂಪಾಲಿ ಒಪ್ಪಿರಲಿಲ್ಲ. ಇದರಿಂದ ಕೋಪಗೊಂಡಇಕ್ಬಾಲ್ ಶೇಖ್ ಚಾಕುವಿನಿಂದ ಆಕೆಯ ಕತ್ತು ಸೀಳಿ ಸ್ಥಳದಿಂದ ಪರಾರಿಯಾಗಿದ್ದಾನೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸೆಪ್ಟೆಂಬರ್ 26ರಂದು ರಾತ್ರಿ 10 ಗಂಟೆಗೆ ಇಕ್ಬಾಲ್ ಮೊಹಮ್ಮದ್ ಶೇಖ್ ಎಂಬ ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಕತ್ತು ಸೀಳಿ, ಚಾಕುವಿನಿಂದ ಕೈಗಳಿಗೆ ಚುಚ್ಚಿ ಕೊಂದಿದ್ದಾನೆ. ದೂರುದಾರರ ಪ್ರಕಾರ, ಆರೋಪಿ ಮತ್ತು ಆತನ ಕುಟುಂಬ ಸದಸ್ಯರು ಇಸ್ಲಾಮಿಕ್ ಸಂಪ್ರದಾಯಗಳನ್ನು ಅನುಸರಿಸುವಂತೆ ಮತ್ತು ಮುಸ್ಲಿಂ ಮಹಿಳೆಯರು ಧರಿಸುವ ಬಟ್ಟೆಗಳನ್ನು ಧರಿಸುವಂತೆ ಆಕೆಯ ಮೇಲೆ ಒತ್ತಡ ಹೇರುತ್ತಿದ್ದರು. ಆದರೆ, ಆ ಮಹಿಳೆ ಇದಕ್ಕೆ ನಿರಾಕರಿಸಿದ ಹಿನ್ನೆಲೆಯಲ್ಲಿ ಕೌಟುಂಬಿಕ ಕಲಹ ಶುರುವಾಗಿತ್ತು. ಅದೇ ಕಾರಣಕ್ಕೆ ಕೊಲೆಯಾಗಿದೆ ಎಂದು ತಿಲಕ್ ನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವಿಲಾಸ್ ರಾಥೋಡ್ ತಿಳಿಸಿದ್ದಾರೆ.

ಇದನ್ನೂ ಓದಿ: ಕಾಶಿಯಲ್ಲಿ ಹಿಂದೂ ಸಂಪ್ರದಾಯದಂತೆ ವಿವಾಹವಾದ ಅಮೆರಿಕದ ಮುಸ್ಲಿಂ ದಂಪತಿ

ಇಕ್ಬಾಲ್ ಶೇಖ್ ಮತ್ತು ಆತನ ಕುಟುಂಬದವರು ಮದುವೆಯಾದ ಮೊದಲ ದಿನದಿಂದಲೂ ತಮ್ಮ ಮಗಳಿಗೆ ಇಸ್ಲಾಂ ಸಂಪ್ರದಾಯಗಳನ್ನು ಅನುಸರಿಸುವಂತೆ ಮತ್ತು ಬುರ್ಖಾ ಧರಿಸುವಂತೆ ಒತ್ತಡ ಹೇರುತ್ತಿದ್ದರು ಎಂದು ರೂಪಾಲಿಯ ಕುಟುಂಬಸ್ಥರು ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ. ರೂಪಾಲಿ ಅದಕ್ಕೆ ಒಪ್ಪಿರದ ಕಾರಣ ಇಬ್ಬರ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಕಳೆದ ಕೆಲ ತಿಂಗಳಿಂದ ರೂಪಾಲಿ ಕೂಡ ಮನೆ ಬಿಟ್ಟು ಬೇರೆ ಕಡೆ ವಾಸವಾಗಿದ್ದಳು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ