AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Murder: ಪ್ರೀತಿಸಲು ಒಪ್ಪದ ವಿವಾಹಿತ ಮಹಿಳೆಯನ್ನು ಕೊಂದು, ಹೆಣವನ್ನು ತಬ್ಬಿ ಮಲಗಿದ ಪಾಗಲ್ ಪ್ರೇಮಿ!

Crime News : ರಾಜಸ್ಥಾನದ ಯುವಕ ತನ್ನನ್ನು ಪ್ರೀತಿಸಲು ಒಪ್ಪದ ವಿವಾಹಿತ ಮಹಿಳೆಯನ್ನು ಕೊಡಲಿಯಿಂದ ಕೊಚ್ಚಿ ಕೊಂದಿದ್ದಾನೆ. ನಂತರ ಆಕೆಯ ಶವವನ್ನು ತಬ್ಬಿ ಮಲಗಿದ್ದಾನೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Murder: ಪ್ರೀತಿಸಲು ಒಪ್ಪದ ವಿವಾಹಿತ ಮಹಿಳೆಯನ್ನು ಕೊಂದು, ಹೆಣವನ್ನು ತಬ್ಬಿ ಮಲಗಿದ ಪಾಗಲ್ ಪ್ರೇಮಿ!
ವಿವಾಹಿತ ಮಹಿಳೆಯನ್ನು ಕೊಂದ ಜಾಗ
TV9 Web
| Edited By: |

Updated on: Oct 26, 2021 | 4:43 PM

Share

ಜೈಪುರ: ವಿವಾಹಿತ ಮಹಿಳೆಯೊಬ್ಬರನ್ನು ಪ್ರೀತಿಸುತ್ತಿದ್ದ ಯುವಕ ಆಕೆಯ ಪ್ರೀತಿಯನ್ನು ಪಡೆಯಲು ಇನ್ನಿಲ್ಲದ ಪ್ರಯತ್ನಗಳನ್ನು ನಡೆಸಿದ್ದ. ಆದರೆ, ಆಕೆ ಆತನ ಕಡೆ ತಿರುಗಿಯೂ ನೋಡುತ್ತಿರಲಿಲ್ಲ. ಇದರಿಂದ ಕೋಪಗೊಂಡ ಆತ ತನಗೆ ಸಿಕ್ಕದ ಆ ಮಹಿಳೆ ಆಕೆಯ ಗಂಡನಿಗೂ ಸಿಗಬಾರದು ಎಂದು ಆಕೆಯನ್ನು ಕೊಂದು ಕತ್ತರಿಸಿದ್ದಾನೆ. ಬಳಿಕ ಆಕೆಯ ಶವವನ್ನು ತಬ್ಬಿ ನೆಲದ ಮೇಲೆ ಮಲಗಿದ್ದಾನೆ. ಈ ದೃಶ್ಯ ನೋಡಿದ ಜನರು ಶಾಕ್ ಆಗಿದ್ದು, ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ರಾಜಸ್ಥಾನದ ಅಹೋರ್ ಪ್ರದೇಶದಲ್ಲಿ ಈ ದುರಂತ ಘಟನೆ ನಡೆದಿದೆ. ಇಲ್ಲಿನ ಶಾಂತಿ ದೇವಿ ಎಂಬ ಮಹಿಳೆಗೆ ಮದುವೆಯಾಗಿ ಇಬ್ಬರು ಗಂಡು ಮಕ್ಕಳಿದ್ದರು. ಆಕೆಯ ಪತಿ ಶಾಂತಿಲಾಲ್ ಮಹಾರಾಷ್ಟ್ರದಲ್ಲಿ ಕೆಲಸ ಮಾಡುತ್ತಿದ್ದರು. ಭಾನುವಾರ ಅವರು ಕೆಲಸಕ್ಕೆ ಜೋಜಾವರ್ ನಾಡಿ ಎಂಬ ಊರಿಗೆ ಹೋಗಿದ್ದರು. ಆಗ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಶಾಂತಿ ದೇವಿಯ ಬಳಿ ಬಂದ ಅದೇ ಗ್ರಾಮದ 21 ವರ್ಷದ ಗಣೇಶ್ ಮೀನಾ ಎಂಬಾತ ತಾನು ಅವಳನ್ನು ಪ್ರೀತಿಸುತ್ತಿರುವುದಾಗಿ ಹೇಳಿದನು.

ಈ ಹಿಂದೆ ಕೂಡ ಹಲವು ಬಾರಿ ಇದೇ ರೀತಿ ಹೇಳಿ ಕಿರುಕುಳ ನೀಡುತ್ತಿದ್ದ ಗಣೇಶ್​ ವಿರುದ್ಧ ಕೋಪಗೊಂಡ ಶಾಂತಿ ದೇವಿ ನಾನು ನಿನ್ನನ್ನು ಪ್ರೀತಿ ಮಾಡಲು ಸಾಧ್ಯವಿಲ್ಲ, ನನಗೆ ಮದುವೆಯಾಗಿ ಮಕ್ಕಳಿದ್ದಾರೆ ಎಂದು ಬುದ್ಧಿ ಹೇಳಿದ್ದಾಳೆ. ಇದರಿಂದ ಕೆರಳಿದ ಗಣೇಶ್ ಕೊಡಲಿಯಿಂದ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಅವಳು ಕೊನೆಯುಸಿರೆಳೆಯುವವರೆಗೂ ಆಕೆಯ ದೇಹದ ಒಂದೊಂದೇ ಭಾಗವನ್ನು ಕತ್ತರಿಸುತ್ತಿದ್ದ ಆತ ತನ್ನನ್ನು ಮದುವೆಯಾಗುವಂತೆ ಗೋಗರೆದಿದ್ದಾನೆ. ಪಾಗಲ್ ಪ್ರೇಮಿಯ ಹುಚ್ಚಾಟದಿಂದ ಆಕೆ ತನ್ನನ್ನು ಕಾಪಾಡುವಂತೆ ಜೋರಾಗಿ ಕೂಗಾಡಿದ್ದಾಳೆ.

ಆಕೆಯ ಕಿರುಚಾಟ ಕೇಳಿ ಸುತ್ತಮುತ್ತಲಿನ ಮನೆಯವರು ಆಕೆಯ ಮನೆಗೆ ಬರುವಷ್ಟರಲ್ಲಿ ಆಕೆ ನರಳಾಡುತ್ತಿದ್ದಳು. ಕೆಲವರು ಆಕೆಯನ್ನು ಉಳಿಸಲು ಮುಂದೆ ಹೋದಾಗ ಅವರನ್ನೂ ಕೊಲ್ಲುವುದಾಗಿ ಗಣೇಶ್ ಬೆದರಿಕೆ ಹಾಕಿದ್ದ. ಇದರಿಂದ ಎಲ್ಲರೂ ಹಿಂದೆ ಸರಿದರು. ಬಳಿಕ, ಆಕೆಯನ್ನು ತುಂಡು ತುಂಡಾಗಿ ಕತ್ತರಿಸಿದ್ದ ಗಣೇಶ್ ಆಕೆಯ ಹೆಣವನ್ನು ತಬ್ಬಿ ಅಲ್ಲೇ ಮಲಗಿದ್ದ. ಇದನ್ನು ನೋಡಿದ ಸುತ್ತಮುತ್ತಲಿನವರಿಗೆ ಆಘಾತವಾಗಿತ್ತು. ವಿಷಯ ತಿಳಿದ ಪೊಲೀಸರು ಸ್ಥಳಕ್ಕಾಗಮಿಸಿದರೂ ಗಣೇಶ್ ತನ್ನ ಪ್ರೇಯಸಿಯ ಶವ ಬಿಡಲು ಒಪ್ಪಲಿಲ್ಲ. ಕೊನೆಗೆ ಆತನನ್ನು ಬಂಧಿಸಿ ವ್ಯಾನ್‌ನಲ್ಲಿ ಕರೆದುಕೊಂಡು ಹೋಗಲಾಯಿತು.

ಗಣೇಶನ ಒನ್​​ ಸೈಡೆಡ್ ಪ್ರೀತಿಯಿಂದ ಶಾಂತಿ ದೇವಿಯ ಪ್ರಾಣ ಹೋಗಿದ್ದು, ಈ ಭೀಕರ ಘಟನೆಯಿಂದ ಸುತ್ತಮುತ್ತಲೂ ಭಯದ ವಾತಾವರಣ ನಿರ್ಮಾಣವಾಗಿದೆ. ಹಲವು ತಿಂಗಳುಗಳಿಂದ ಆಕೆಗೆ ಕಿರುಕುಳ ನೀಡುತ್ತಿದ್ದ ಗಣೇಶ್ ವಿರುದ್ಧ ಶಾಂತಿ ದೇವಿ ತನ್ನ ಪತಿ ಶಾಂತಿಲಾಲ್ ಚೌಧರಿ ಬಳಿ ಹೇಳಿಕೊಂಡಿದ್ದಳು. ಆಕೆಯ ಗಂಡ ಕೂಡ ಹಲವು ಬಾರಿ ಗಣೇಶ್‌ಗೆ ಬುದ್ಧಿವಾದ ಹೇಳಲು ಪ್ರಯತ್ನಿಸಿದರೂ ಪ್ರಯೋಜನವಾಗಿರಲಿಲ್ಲ.

ಇದನ್ನೂ ಓದಿ: Murder: ಹಾಡಹಗಲೇ ಮಹಿಳೆಯ ಬರ್ಬರ ಹತ್ಯೆ; ಬೆಳ್ಳಿ ಗೆಜ್ಜೆಗಾಗಿ ಕಾಲನ್ನೇ ಕತ್ತರಿಸಿದ ಹಂತಕರು

Kerala Snake Bite Murder: ಹೆಂಡತಿಗೆ ಹಾವಿನಿಂದ ಕಚ್ಚಿಸಿ ಕೊಲೆ ಪ್ರಕರಣ; ಅಪರಾಧಿ​ಗೆ ಜೀವಾವಧಿ ಶಿಕ್ಷೆ ಪ್ರಕಟ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ