AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಬೆಳ್ಳಿ ಗೆಜ್ಜೆಗಾಗಿ 108 ವರ್ಷದ ವೃದ್ಧೆಯ ಕಾಲುಗಳನ್ನೇ ಕತ್ತರಿಸಿದ ಕಳ್ಳರು!

108 ವರ್ಷದ ಮಹಿಳೆಯನ್ನು ಮನೆಯಿಂದ ಹೊರಕ್ಕೆ ಎಳೆದೊಯ್ದ ದರೋಡೆಕೋರರು, ಮನೆಯ ಹೊರಗಿದ್ದ ಬಾತ್​ರೂಂನಲ್ಲಿ ಕೂಡಿಹಾಕಿ, ಹರಿತವಾದ ಆಯುಧದಿಂದ ಆಕೆಯ ಪಾದಗಳನ್ನು ಕತ್ತರಿಸಿ, ಆಕೆ ಧರಿಸಿದ್ದ ಬೆಳ್ಳಿಯ ಗೆಜ್ಜೆಗಳನ್ನು ಕದ್ದಿದ್ದಾರೆ.

Shocking News: ಬೆಳ್ಳಿ ಗೆಜ್ಜೆಗಾಗಿ 108 ವರ್ಷದ ವೃದ್ಧೆಯ ಕಾಲುಗಳನ್ನೇ ಕತ್ತರಿಸಿದ ಕಳ್ಳರು!
ಆಸ್ಪತ್ರೆಗೆ ದಾಖಲಾಗಿರುವ ವೃದ್ಧೆ
TV9 Web
| Edited By: |

Updated on: Oct 10, 2022 | 11:55 AM

Share

ಜೈಪುರ: ಬೆಳ್ಳಿ ಗೆಜ್ಜೆಯ (Silver Anklet) ಆಸೆಗೆ ದರೋಡೆಕೋರರು 108 ವರ್ಷದ ಮಹಿಳೆಯ ಕಾಲುಗಳನ್ನೇ ಕತ್ತರಿಸಿಕೊಂಡು ಹೋಗಿರುವ ಆಘಾತಕಾರಿ ಘಟನೆಯೊಂದು ರಾಜಸ್ಥಾನದಲ್ಲಿ (Rajasthan) ನಡೆದಿದೆ. ಭಾನುವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ವೃದ್ಧೆಯ ಮನೆಗೆ ನುಗ್ಗಿದ ದರೋಡೆಕೋರರು ಮಲಗಿದ್ದ ಆಕೆಯನ್ನು ಮನೆಯ ಹೊರಗೆ ಎಳೆದುಕೊಂಡು ಹೋಗಿ ಕಾಲುಗಳನ್ನು ಕತ್ತರಿಸಿಕೊಂಡು ಹೋಗಿದ್ದಾರೆ. ಆಕೆ ಧರಿಸಿದ್ದ ಬೆಳ್ಳಿ ಗೆಜ್ಜೆಯನ್ನು ಕದಿಯಲು ಬಂದವರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಆರೋಪಿಗಳ ಸುಳಿವು ಇನ್ನೂ ಸಿಕ್ಕಿಲ್ಲ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ದರೋಡೆಕೋರರು ತನ್ನ ಮೇಲೆ ದಾಳಿ ನಡೆಸಿ, ಕಾಲನ್ನು ಕತ್ತರಿಸಿರುವುದರಿಂದ ಆ ವೃದ್ಧೆ ತೀವ್ರ ರಕ್ತಸ್ರಾವ ಮತ್ತು ನೋವಿನಿಂದ ನರಳುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆ ವೃದ್ಧೆ ಜೋರಾಗಿ ಕೂಗಿಕೊಂಡರೂ ಮನೆಯೊಳಗಿನ ಯಾರಿಗೂ ಆಕೆಯ ಧ್ವನಿ ಕೇಳಿಲ್ಲ. ಈ ಘಟನೆ ನಡೆದು ಸುಮಾರು 1 ಗಂಟೆಯ ನಂತರ ಮನೆಯಲ್ಲಿ ಮಲಗಿದ್ದ ಆಕೆಯ ಮಗಳು, ಮೊಮ್ಮಗಳು ಎದ್ದುಬಂದು ಆಕೆಯನ್ನು ಸವಾಯಿ ಮಾನ್ ಸಿಂಗ್ (ಎಸ್‌ಎಂಎಸ್) ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಇದನ್ನೂ ಓದಿ: Shocking News: ಬೆಳ್ಳಿ ಗೆಜ್ಜೆ ಆಸೆಗೆ 4 ವರ್ಷದ ಬಾಲಕಿಯನ್ನು ಕೊಂದು, ಮನೆ ಹಿಂದೆ ಹೂತಿಟ್ಟ ಮಹಿಳೆ!

ಹಲ್ಲೆಗೊಳಗಾದ ವೃದ್ಧೆ ಮೀನಾ ಕಾಲೋನಿ ನಿವಾಸಿ ಜಮುನಾ ದೇವಿ ತಮ್ಮ ಮಗಳು ಮತ್ತು ಮೊಮ್ಮಗಳೊಂದಿಗೆ ವಾಸಿಸುತ್ತಿದ್ದರು. ಅವರ ಕುಟುಂಬದ ಸದಸ್ಯರ ಪ್ರಕಾರ, 108 ವರ್ಷದ ಆ ಮಹಿಳೆಯನ್ನು ಮನೆಯಿಂದ ಹೊರಕ್ಕೆ ಎಳೆದೊಯ್ದ ದರೋಡೆಕೋರರು, ಮನೆಯ ಹೊರಗಿದ್ದ ಬಾತ್​ರೂಂನಲ್ಲಿ ಕೂಡಿಹಾಕಿ, ಹರಿತವಾದ ಆಯುಧದಿಂದ ಆಕೆಯ ಪಾದಗಳನ್ನು ಕತ್ತರಿಸಿ, ಆಕೆ ಧರಿಸಿದ್ದ ಬೆಳ್ಳಿಯ ಗೆಜ್ಜೆಗಳನ್ನು ಕದ್ದಿದ್ದಾರೆ. ನಂತರ ಆ ಸ್ಥಳದಿಂದ ಪರಾರಿಯಾಗಿದ್ದಾರೆ.

ಈ ಘಟನೆಯ ಬಗ್ಗೆ ವಿವರಿಸಿರುವ ವೃದ್ಧೆಯ ಮಗಳು ಗೋವಿಂದಿ ದೇವಿ, “ನನ್ನ ತಾಯಿಯ ಕಾಲುಗಳನ್ನು ಕತ್ತರಿಸಲಾಗಿತ್ತು. ಆಕೆ ಬಚ್ಚಲುಮನೆಯಲ್ಲಿ ಬಿದ್ದಿದ್ದಾಳೆ ಎಂದು ನನ್ನ ಮಗಳು ನನಗೆ ಬೆಳಗ್ಗೆ ತಿಳಿಸಿದಳು. ನಾವು ತಕ್ಷಣ ಅವಳನ್ನು ಆಸ್ಪತ್ರೆಗೆ ಸೇರಿಸಿದೆವು. ಅವರ ಸ್ಥಿತಿ ಗಂಭೀರವಾಗಿದೆ” ಎಂದು ಹೇಳಿದ್ದಾರೆ. ದರೋಡೆಕೋರರು ವೃದ್ಧೆಯ ಮೇಲೆ ದಾಳಿ ನಡೆಸಿದಾಗ ಮನೆಯಲ್ಲಿ ಎಲ್ಲರೂ ಮಲಗಿದ್ದರು ಎಂದು ಸಂತ್ರಸ್ತೆಯ ಸೋದರಳಿಯ ಗೋಪಾಲ್ ಮೀನಾ ಹೇಳಿದ್ದಾರೆ.

ಈ ಘಟನೆಗೆ ಸಂಬಂಧಿಸಿದಂತೆ ಫೋರೆನ್ಸಿಕ್ ತಜ್ಞರ ಸಹಾಯದಿಂದ ಪುರಾವೆಗಳನ್ನು ಸಂಗ್ರಹಿಸಲಾಗಿದೆ ಮತ್ತು ಆ ಪ್ರದೇಶದಿಂದ ಪಡೆದ ಸಿಸಿಟಿವಿ ದೃಶ್ಯಗಳ ಮೂಲಕ ಕಳ್ಳರನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ. ಸ್ಥಳದಿಂದ ಹರಿತವಾದ ಆಯುಧವನ್ನು ವಶಪಡಿಸಿಕೊಳ್ಳಲಾಗಿದೆ. ಅಪರಿಚಿತರ ವಿರುದ್ಧ ಪ್ರಕರಣ ದಾಖಲಾಗಿದೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!