AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಹೊಸ ವರ್ಷದ ರಾತ್ರಿ ಸ್ವಿಗ್ಗಿ ಡೆಲಿವರಿ ಬಾಯ್​​ಗೆ ಕಾರು ಡಿಕ್ಕಿ; 500 ಮೀಟರ್ ಎಳೆದೊಯ್ದ ಬಳಿಕ ಯುವಕ ಸಾವು!

Crime News: ಸ್ವಿಗ್ಗಿಯಲ್ಲಿ ಕೆಲಸ ಮಾಡುತ್ತಿದ್ದ ಕೌಶಲ್ ಎಂಬ ಯುವಕ ಹೊಸ ವರ್ಷದ ರಾತ್ರಿ ಫುಡ್ ಡೆಲಿವರಿ ನೀಡಲು ಹೊರಟಿದ್ದಾಗ ನೋಯ್ಡಾ ಸೆಕ್ಟರ್ 14ರ ಫ್ಲೈಓವರ್ ಬಳಿ ಕಾರೊಂದು ಅವರ ಬೈಕ್​ಗೆ ಡಿಕ್ಕಿ ಹೊಡೆದಿದೆ.

Shocking News: ಹೊಸ ವರ್ಷದ ರಾತ್ರಿ ಸ್ವಿಗ್ಗಿ ಡೆಲಿವರಿ ಬಾಯ್​​ಗೆ ಕಾರು ಡಿಕ್ಕಿ; 500 ಮೀಟರ್ ಎಳೆದೊಯ್ದ ಬಳಿಕ ಯುವಕ ಸಾವು!
ಕೌಶಲ್Image Credit source: NDTV
TV9 Web
| Edited By: |

Updated on: Jan 05, 2023 | 8:18 AM

Share

ನೊಯ್ಡಾ: ಹೊಸ ವರ್ಷದ (New Year Celebration) ದಿನ ರಾತ್ರಿ ದೆಹಲಿಯಲ್ಲಿ ಯುವತಿಯನ್ನು ಕಾರು ಕಿಲೋಮೀಟರ್​ಗಟ್ಟಲೆ ಎಳೆದುಕೊಂಡು ಹೋದ ಭಯಾನಕ ಘಟನೆಯಂತೆಯೇ (Shocking News) ಅದೇ ದಿನ ಇನ್ನೊಂದು ಆಘಾತಕಾರಿ ಘಟನೆ ನಡೆದಿದೆ. ಫುಡ್ ಡೆಲಿವರಿ (Swiggy Delivery Agent) ಏಜೆಂಟ್​ನ ಬೈಕ್​ಗೆ ಕಾರು ಡಿಕ್ಕಿ ಹೊಡೆದು ಸುಮಾರು 500 ಮೀಟರ್​ವರೆಗೆ ಎಳೆದೊಯ್ದ ಪರಿಣಾಮ ಡೆಲಿವರಿ ಏಜೆಂಟ್ ಸಾವನ್ನಪ್ಪಿರುವ ಘಟನೆ ನೊಯ್ಡಾದಲ್ಲಿ (Noida) ನಡೆದಿದೆ.

ಭಾನುವಾರ ನಡೆದಿರುವ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಸ್ವಿಗ್ಗಿಯಲ್ಲಿ ಕೆಲಸ ಮಾಡುತ್ತಿದ್ದ ಕೌಶಲ್ ಎಂಬ ಯುವಕ ಹೊಸ ವರ್ಷದ ರಾತ್ರಿ ಫುಡ್ ಡೆಲಿವರಿ ನೀಡಲು ಹೊರಟಿದ್ದಾಗ ನೋಯ್ಡಾ ಸೆಕ್ಟರ್ 14ರ ಫ್ಲೈಓವರ್ ಬಳಿ ಕಾರೊಂದು ಅವರ ಬೈಕ್​ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಕುಡಿದು ಸ್ಕೂಟಿ ಓಡಿಸುತ್ತಿದ್ದ ಆಕೆ ಕಾರಿನಡಿ ಸಿಲುಕಿದ್ದು ಗೊತ್ತಾದರೂ ಕಾರು ನಿಲ್ಲಿಸಲಿಲ್ಲ; ಕರಾಳ ರಾತ್ರಿಯ ಘಟನೆ ಬಿಚ್ಚಿಟ್ಟ ದೆಹಲಿ ಯುವತಿಯ ಗೆಳತಿ

ಅಪಘಾತ ನಡೆದ ಸ್ಥಳದಿಂದ ಸುಮಾರು 500 ಮೀಟರ್ ದೂರದಲ್ಲಿರುವ ದೇವಸ್ಥಾನದ ಬಳಿ ಚಾಲಕ ಕಾರನ್ನು ನಿಲ್ಲಿಸಿ ಕೌಶಲ್​ನ ಶವ ಕಾರಿನಿಂದ ಹೊರಬಿದ್ದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಭಾನುವಾರ ಮಧ್ಯರಾತ್ರಿ 1 ಗಂಟೆಗೆ ಕೌಶಲ್​ಗೆ ಅವರ ಸಹೋದರ ಅಮಿತ್ ಫೋನ್ ಮಾಡಿದಾಗ ದಾರಿಹೋಕರೊಬ್ಬರು ಆ ಕರೆ ಸ್ವೀಕರಿಸಿ ಅಪಘಾತದ ಬಗ್ಗೆ ತಿಳಿಸಿದ್ದರು. ಬಳಿಕ, ಅಮಿತ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳ ಪತ್ತೆಗಾಗಿ ಆ ಪ್ರದೇಶದಲ್ಲಿ ಅಳವಡಿಸಲಾಗಿರುವ ಸಿಸಿಟಿವಿಗಳನ್ನು ಪರಿಶೀಲನೆ ಮಾಡುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: Crime News: ತಮಿಳುನಾಡಿನ ಕಡಲೂರಿನಲ್ಲಿ ಭೀಕರ ಅಪಘಾತ; 5 ವಾಹನಗಳ ನಡುವೆ ಡಿಕ್ಕಿಯಾಗಿ ಐವರು ಸಾವು

ದೆಹಲಿಯಲ್ಲಿ 20 ವರ್ಷದ ಯುವತಿಯೊಬ್ಬರಿಗೆ ಕಾರು ಡಿಕ್ಕಿ ಹೊಡೆದು ಸುಮಾರು 13 ಕಿಮೀ ದೂರಕ್ಕೆ ಎಳೆದೊಯ್ದಿತ್ತು. ಈ ಘಟನೆಯಲ್ಲಿ ಆಕೆಯ ಬಟ್ಟೆಯೆಲ್ಲ ಹರಿದುಹೋಗಿ, ಮೈತುಂಬ ಗಾಯಗಳಾಗಿ ಮೃತಪಟ್ಟಿದ್ದಳು. ಅದಾದ ಕೆಲವೇ ಗಂಟೆಗಳಲ್ಲಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಹೊಸ ವರ್ಷದ ರಾತ್ರಿ ನಡೆದ ಈ ಎರಡೂ ಹಿಟ್ ಆ್ಯಂಡ್ ರನ್ ಪ್ರಕರಣಗಳು ಆತಂಕ ಹೆಚ್ಚಿಸಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್