AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಹೊಸ ವರ್ಷದ ರಾತ್ರಿ ಸ್ವಿಗ್ಗಿ ಡೆಲಿವರಿ ಬಾಯ್​​ಗೆ ಕಾರು ಡಿಕ್ಕಿ; 500 ಮೀಟರ್ ಎಳೆದೊಯ್ದ ಬಳಿಕ ಯುವಕ ಸಾವು!

Crime News: ಸ್ವಿಗ್ಗಿಯಲ್ಲಿ ಕೆಲಸ ಮಾಡುತ್ತಿದ್ದ ಕೌಶಲ್ ಎಂಬ ಯುವಕ ಹೊಸ ವರ್ಷದ ರಾತ್ರಿ ಫುಡ್ ಡೆಲಿವರಿ ನೀಡಲು ಹೊರಟಿದ್ದಾಗ ನೋಯ್ಡಾ ಸೆಕ್ಟರ್ 14ರ ಫ್ಲೈಓವರ್ ಬಳಿ ಕಾರೊಂದು ಅವರ ಬೈಕ್​ಗೆ ಡಿಕ್ಕಿ ಹೊಡೆದಿದೆ.

Shocking News: ಹೊಸ ವರ್ಷದ ರಾತ್ರಿ ಸ್ವಿಗ್ಗಿ ಡೆಲಿವರಿ ಬಾಯ್​​ಗೆ ಕಾರು ಡಿಕ್ಕಿ; 500 ಮೀಟರ್ ಎಳೆದೊಯ್ದ ಬಳಿಕ ಯುವಕ ಸಾವು!
ಕೌಶಲ್Image Credit source: NDTV
TV9 Web
| Edited By: |

Updated on: Jan 05, 2023 | 8:18 AM

Share

ನೊಯ್ಡಾ: ಹೊಸ ವರ್ಷದ (New Year Celebration) ದಿನ ರಾತ್ರಿ ದೆಹಲಿಯಲ್ಲಿ ಯುವತಿಯನ್ನು ಕಾರು ಕಿಲೋಮೀಟರ್​ಗಟ್ಟಲೆ ಎಳೆದುಕೊಂಡು ಹೋದ ಭಯಾನಕ ಘಟನೆಯಂತೆಯೇ (Shocking News) ಅದೇ ದಿನ ಇನ್ನೊಂದು ಆಘಾತಕಾರಿ ಘಟನೆ ನಡೆದಿದೆ. ಫುಡ್ ಡೆಲಿವರಿ (Swiggy Delivery Agent) ಏಜೆಂಟ್​ನ ಬೈಕ್​ಗೆ ಕಾರು ಡಿಕ್ಕಿ ಹೊಡೆದು ಸುಮಾರು 500 ಮೀಟರ್​ವರೆಗೆ ಎಳೆದೊಯ್ದ ಪರಿಣಾಮ ಡೆಲಿವರಿ ಏಜೆಂಟ್ ಸಾವನ್ನಪ್ಪಿರುವ ಘಟನೆ ನೊಯ್ಡಾದಲ್ಲಿ (Noida) ನಡೆದಿದೆ.

ಭಾನುವಾರ ನಡೆದಿರುವ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಸ್ವಿಗ್ಗಿಯಲ್ಲಿ ಕೆಲಸ ಮಾಡುತ್ತಿದ್ದ ಕೌಶಲ್ ಎಂಬ ಯುವಕ ಹೊಸ ವರ್ಷದ ರಾತ್ರಿ ಫುಡ್ ಡೆಲಿವರಿ ನೀಡಲು ಹೊರಟಿದ್ದಾಗ ನೋಯ್ಡಾ ಸೆಕ್ಟರ್ 14ರ ಫ್ಲೈಓವರ್ ಬಳಿ ಕಾರೊಂದು ಅವರ ಬೈಕ್​ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಕುಡಿದು ಸ್ಕೂಟಿ ಓಡಿಸುತ್ತಿದ್ದ ಆಕೆ ಕಾರಿನಡಿ ಸಿಲುಕಿದ್ದು ಗೊತ್ತಾದರೂ ಕಾರು ನಿಲ್ಲಿಸಲಿಲ್ಲ; ಕರಾಳ ರಾತ್ರಿಯ ಘಟನೆ ಬಿಚ್ಚಿಟ್ಟ ದೆಹಲಿ ಯುವತಿಯ ಗೆಳತಿ

ಅಪಘಾತ ನಡೆದ ಸ್ಥಳದಿಂದ ಸುಮಾರು 500 ಮೀಟರ್ ದೂರದಲ್ಲಿರುವ ದೇವಸ್ಥಾನದ ಬಳಿ ಚಾಲಕ ಕಾರನ್ನು ನಿಲ್ಲಿಸಿ ಕೌಶಲ್​ನ ಶವ ಕಾರಿನಿಂದ ಹೊರಬಿದ್ದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಭಾನುವಾರ ಮಧ್ಯರಾತ್ರಿ 1 ಗಂಟೆಗೆ ಕೌಶಲ್​ಗೆ ಅವರ ಸಹೋದರ ಅಮಿತ್ ಫೋನ್ ಮಾಡಿದಾಗ ದಾರಿಹೋಕರೊಬ್ಬರು ಆ ಕರೆ ಸ್ವೀಕರಿಸಿ ಅಪಘಾತದ ಬಗ್ಗೆ ತಿಳಿಸಿದ್ದರು. ಬಳಿಕ, ಅಮಿತ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳ ಪತ್ತೆಗಾಗಿ ಆ ಪ್ರದೇಶದಲ್ಲಿ ಅಳವಡಿಸಲಾಗಿರುವ ಸಿಸಿಟಿವಿಗಳನ್ನು ಪರಿಶೀಲನೆ ಮಾಡುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: Crime News: ತಮಿಳುನಾಡಿನ ಕಡಲೂರಿನಲ್ಲಿ ಭೀಕರ ಅಪಘಾತ; 5 ವಾಹನಗಳ ನಡುವೆ ಡಿಕ್ಕಿಯಾಗಿ ಐವರು ಸಾವು

ದೆಹಲಿಯಲ್ಲಿ 20 ವರ್ಷದ ಯುವತಿಯೊಬ್ಬರಿಗೆ ಕಾರು ಡಿಕ್ಕಿ ಹೊಡೆದು ಸುಮಾರು 13 ಕಿಮೀ ದೂರಕ್ಕೆ ಎಳೆದೊಯ್ದಿತ್ತು. ಈ ಘಟನೆಯಲ್ಲಿ ಆಕೆಯ ಬಟ್ಟೆಯೆಲ್ಲ ಹರಿದುಹೋಗಿ, ಮೈತುಂಬ ಗಾಯಗಳಾಗಿ ಮೃತಪಟ್ಟಿದ್ದಳು. ಅದಾದ ಕೆಲವೇ ಗಂಟೆಗಳಲ್ಲಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಹೊಸ ವರ್ಷದ ರಾತ್ರಿ ನಡೆದ ಈ ಎರಡೂ ಹಿಟ್ ಆ್ಯಂಡ್ ರನ್ ಪ್ರಕರಣಗಳು ಆತಂಕ ಹೆಚ್ಚಿಸಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?