AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಹೊಸ ವರ್ಷದ ರಾತ್ರಿ ಸ್ವಿಗ್ಗಿ ಡೆಲಿವರಿ ಬಾಯ್​​ಗೆ ಕಾರು ಡಿಕ್ಕಿ; 500 ಮೀಟರ್ ಎಳೆದೊಯ್ದ ಬಳಿಕ ಯುವಕ ಸಾವು!

Crime News: ಸ್ವಿಗ್ಗಿಯಲ್ಲಿ ಕೆಲಸ ಮಾಡುತ್ತಿದ್ದ ಕೌಶಲ್ ಎಂಬ ಯುವಕ ಹೊಸ ವರ್ಷದ ರಾತ್ರಿ ಫುಡ್ ಡೆಲಿವರಿ ನೀಡಲು ಹೊರಟಿದ್ದಾಗ ನೋಯ್ಡಾ ಸೆಕ್ಟರ್ 14ರ ಫ್ಲೈಓವರ್ ಬಳಿ ಕಾರೊಂದು ಅವರ ಬೈಕ್​ಗೆ ಡಿಕ್ಕಿ ಹೊಡೆದಿದೆ.

Shocking News: ಹೊಸ ವರ್ಷದ ರಾತ್ರಿ ಸ್ವಿಗ್ಗಿ ಡೆಲಿವರಿ ಬಾಯ್​​ಗೆ ಕಾರು ಡಿಕ್ಕಿ; 500 ಮೀಟರ್ ಎಳೆದೊಯ್ದ ಬಳಿಕ ಯುವಕ ಸಾವು!
ಕೌಶಲ್Image Credit source: NDTV
TV9 Web
| Edited By: |

Updated on: Jan 05, 2023 | 8:18 AM

Share

ನೊಯ್ಡಾ: ಹೊಸ ವರ್ಷದ (New Year Celebration) ದಿನ ರಾತ್ರಿ ದೆಹಲಿಯಲ್ಲಿ ಯುವತಿಯನ್ನು ಕಾರು ಕಿಲೋಮೀಟರ್​ಗಟ್ಟಲೆ ಎಳೆದುಕೊಂಡು ಹೋದ ಭಯಾನಕ ಘಟನೆಯಂತೆಯೇ (Shocking News) ಅದೇ ದಿನ ಇನ್ನೊಂದು ಆಘಾತಕಾರಿ ಘಟನೆ ನಡೆದಿದೆ. ಫುಡ್ ಡೆಲಿವರಿ (Swiggy Delivery Agent) ಏಜೆಂಟ್​ನ ಬೈಕ್​ಗೆ ಕಾರು ಡಿಕ್ಕಿ ಹೊಡೆದು ಸುಮಾರು 500 ಮೀಟರ್​ವರೆಗೆ ಎಳೆದೊಯ್ದ ಪರಿಣಾಮ ಡೆಲಿವರಿ ಏಜೆಂಟ್ ಸಾವನ್ನಪ್ಪಿರುವ ಘಟನೆ ನೊಯ್ಡಾದಲ್ಲಿ (Noida) ನಡೆದಿದೆ.

ಭಾನುವಾರ ನಡೆದಿರುವ ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಸ್ವಿಗ್ಗಿಯಲ್ಲಿ ಕೆಲಸ ಮಾಡುತ್ತಿದ್ದ ಕೌಶಲ್ ಎಂಬ ಯುವಕ ಹೊಸ ವರ್ಷದ ರಾತ್ರಿ ಫುಡ್ ಡೆಲಿವರಿ ನೀಡಲು ಹೊರಟಿದ್ದಾಗ ನೋಯ್ಡಾ ಸೆಕ್ಟರ್ 14ರ ಫ್ಲೈಓವರ್ ಬಳಿ ಕಾರೊಂದು ಅವರ ಬೈಕ್​ಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಕುಡಿದು ಸ್ಕೂಟಿ ಓಡಿಸುತ್ತಿದ್ದ ಆಕೆ ಕಾರಿನಡಿ ಸಿಲುಕಿದ್ದು ಗೊತ್ತಾದರೂ ಕಾರು ನಿಲ್ಲಿಸಲಿಲ್ಲ; ಕರಾಳ ರಾತ್ರಿಯ ಘಟನೆ ಬಿಚ್ಚಿಟ್ಟ ದೆಹಲಿ ಯುವತಿಯ ಗೆಳತಿ

ಅಪಘಾತ ನಡೆದ ಸ್ಥಳದಿಂದ ಸುಮಾರು 500 ಮೀಟರ್ ದೂರದಲ್ಲಿರುವ ದೇವಸ್ಥಾನದ ಬಳಿ ಚಾಲಕ ಕಾರನ್ನು ನಿಲ್ಲಿಸಿ ಕೌಶಲ್​ನ ಶವ ಕಾರಿನಿಂದ ಹೊರಬಿದ್ದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಭಾನುವಾರ ಮಧ್ಯರಾತ್ರಿ 1 ಗಂಟೆಗೆ ಕೌಶಲ್​ಗೆ ಅವರ ಸಹೋದರ ಅಮಿತ್ ಫೋನ್ ಮಾಡಿದಾಗ ದಾರಿಹೋಕರೊಬ್ಬರು ಆ ಕರೆ ಸ್ವೀಕರಿಸಿ ಅಪಘಾತದ ಬಗ್ಗೆ ತಿಳಿಸಿದ್ದರು. ಬಳಿಕ, ಅಮಿತ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳ ಪತ್ತೆಗಾಗಿ ಆ ಪ್ರದೇಶದಲ್ಲಿ ಅಳವಡಿಸಲಾಗಿರುವ ಸಿಸಿಟಿವಿಗಳನ್ನು ಪರಿಶೀಲನೆ ಮಾಡುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: Crime News: ತಮಿಳುನಾಡಿನ ಕಡಲೂರಿನಲ್ಲಿ ಭೀಕರ ಅಪಘಾತ; 5 ವಾಹನಗಳ ನಡುವೆ ಡಿಕ್ಕಿಯಾಗಿ ಐವರು ಸಾವು

ದೆಹಲಿಯಲ್ಲಿ 20 ವರ್ಷದ ಯುವತಿಯೊಬ್ಬರಿಗೆ ಕಾರು ಡಿಕ್ಕಿ ಹೊಡೆದು ಸುಮಾರು 13 ಕಿಮೀ ದೂರಕ್ಕೆ ಎಳೆದೊಯ್ದಿತ್ತು. ಈ ಘಟನೆಯಲ್ಲಿ ಆಕೆಯ ಬಟ್ಟೆಯೆಲ್ಲ ಹರಿದುಹೋಗಿ, ಮೈತುಂಬ ಗಾಯಗಳಾಗಿ ಮೃತಪಟ್ಟಿದ್ದಳು. ಅದಾದ ಕೆಲವೇ ಗಂಟೆಗಳಲ್ಲಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಹೊಸ ವರ್ಷದ ರಾತ್ರಿ ನಡೆದ ಈ ಎರಡೂ ಹಿಟ್ ಆ್ಯಂಡ್ ರನ್ ಪ್ರಕರಣಗಳು ಆತಂಕ ಹೆಚ್ಚಿಸಿವೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ