AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಕಾರಿನ ಕಿಟಕಿಯಿಂದ ಎಕೆ-47 ತೋರಿಸಿದ ಯುವತಿ; ಆಮೇಲೆ ಆಗಿದ್ದೇನು?

ಅಮೆರಿಕದಲ್ಲಿ ಗುಂಡಿನ ದಾಳಿಯ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಈ ರೀತಿ ಎಕೆ-47 ಹಿಡಿದು ಕುಳಿತಿರುವ ಯುವತಿಯ ಫೋಟೋವನ್ನು ಪೊಲೀಸರು ಬಿಡುಗಡೆ ಮಾಡಿರುವುದು ಆತಂಕಕ್ಕೂ ಕಾರಣವಾಗಿದೆ.

Viral Photo: ಕಾರಿನ ಕಿಟಕಿಯಿಂದ ಎಕೆ-47 ತೋರಿಸಿದ ಯುವತಿ; ಆಮೇಲೆ ಆಗಿದ್ದೇನು?
ಎಕೆ-47 ಹಿಡಿದು ಕುಳಿತಿರುವ ಯುವತಿ
TV9 Web
| Edited By: |

Updated on: Aug 07, 2021 | 6:10 PM

Share

ಅಮೆರಿಕದ ಸ್ಯಾನ್​ಫ್ರಾನ್ಸಿಸ್ಕೋದ ಪೊಲೀಸರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯನ್ನು ಫೋಟೋವೊಂದನ್ನು ಶೇರ್ ಮಾಡಿದ್ದು, ಆ ಫೋಟೋದಲ್ಲಿ ಚಲಿಸುವ ಕಾರಿನ ಕಿಟಕಿಯಲ್ಲಿ ಯುವತಿಯೊಬ್ಬಳು ಎಕೆ-47 ಹಿಡಿದು ಹೊರಗೆ ಇಣುಕುತ್ತಿರುವ ದೃಶ್ಯ ಸೆರೆಯಾಗಿದೆ. ಎಕೆ-47 ಹಿಡಿದ ಯುವತಿ ಫೋಟೋ ವೈರಲ್ ಆಗಿದ್ದು, ಆ ಕಾರನ್ನು ಪೊಲೀಸರು ಸೀಜ್ ಮಾಡಿದ್ದಾರೆ.

ಈ ಪ್ರಕರಣವನ್ನು ವಿಚಾರಣೆ ನಡೆಸಲಾಗುತ್ತಿದೆ. ಎಸ್​ಎಫ್​ಪಿಡಿ ಸಿಬ್ಬಂದಿ ಆ ಯುವತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಹಾಗೇ, ಆ ಕಾರನ್ನು ಕೂಡ ಸೀಜ್ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಟ್ವಿಟ್ಟರ್​ನಲ್ಲಿ ಮಾಹಿತಿ ನೀಡಿದ್ದಾರೆ.

ಯುವತಿಯೊಬ್ಬಳು ಎಕೆ-47 ಹಿಡಿದು ಕಿಟಕಿಯಿಂದ ಹೊರಗೆ ತೋರಿಸುತ್ತಿರುವ ಫೋಟೋಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆಕೆ ಯಾವ ಉದ್ದೇಶಕ್ಕಾಗಿ ಈ ರೀತಿ ಮಾಡಿದಳು ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಅಮೆರಿಕದಲ್ಲಿ ಗುಂಡಿನ ದಾಳಿಯ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಈ ರೀತಿ ಎಕೆ-47 ಹಿಡಿದು ಕುಳಿತಿರುವ ಯುವತಿಯ ಫೋಟೋವನ್ನು ಪೊಲೀಸರು ಬಿಡುಗಡೆ ಮಾಡಿರುವುದು ಆತಂಕಕ್ಕೂ ಕಾರಣವಾಗಿದೆ.

ಸ್ಯಾನ್​ಫ್ರಾನ್ಸಿಸ್ಕೋ ಒಂದರಲ್ಲೇ 2021ರ ಜನವರಿಯಿಂದ ಜೂನ್​ವರೆಗೆ 119 ಶೂಟೌಟ್ ಪ್ರಕರಣಗಳು ದಾಖಲಾಗಿವೆ. ಕಳೆದ ವರ್ಷ ಈ ಅವಧಿಯಲ್ಲಿ 58 ಶೂಟೌಟ್ ಪ್ರಕರಣಗಳು ದಾಖಲಾಗಿದ್ದವು.

ಇದನ್ನೂ ಓದಿ: Viral Video: ಬೈಕ್ ಸವಾರನ ಜೊತೆ ಬಾಲಿವುಡ್ ಹಾಡಿಗೆ ಸಖತ್ತಾಗಿ ಸ್ಟೆಪ್ ಹಾಕಿದ ಪೊಲೀಸ್; ವೈರಲ್ ವಿಡಿಯೋ ಇಲ್ಲಿದೆ

Shocking News: ಪೊಲೀಸರಂತೆ ಬಸ್ ನಿಲ್ಲಿಸಿ 1.2 ಕೋಟಿ ರೂ. ಕದ್ದೊಯ್ದ ಕಳ್ಳರು; ಸಿನಿಮಾ ಸ್ಟೈಲ್​ನಲ್ಲಿ ದರೋಡೆ!

(Shocking News United States Woman Leans Out of Moving Car Holding AK-47 in Viral Photo)

Follow Us
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
‘ಅಯೋಗ್ಯ 2’ ಸಿನಿಮಾದ ಹೊಸ ಹಾಡಿನಲ್ಲಿ ಸತೀಶ್ ನೀನಾಸಂ ಮಾಸ್ ಅವತಾರ
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ದೆಹಲಿಯಲ್ಲಿ ಭಾರಿ ಮಳೆಯಿಂದ ಕಟ್ಟಡ ಕುಸಿತ; ಓರ್ವ ಸಾವು
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಇಂಡೋನೇಷ್ಯಾ ಪ್ರವಾಸ ಮುಗಿಸಿ ಮೆಲ್ಬೋರ್ನ್‌ಗೆ ಬಂದಿಳಿದ ಪ್ರಧಾನಿ ಮೋದಿ
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್​ನ್ಯೂಸ್​​: ಶೀಘ್ರದಲ್ಲೇ ಇಂದಿರಾ ಕಿಟ್
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
ಕನ್ನಡಿಗರ ಬಗ್ಗೆ ಪ್ರೀತಿಯಿಂದ ಮಾತನಾಡಿ ‘ಟಾಕ್ಸಿಕ್’ ನಟಿ ಹುಮಾ ಖುರೇಷಿ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ