AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಮದುವೆ ಮಂಟಪದಲ್ಲೇ ವಧುವಿಗೆ ಶೂಟ್ ಮಾಡಿ ಕೊಂದ ಮಾಜಿ ಪ್ರಿಯಕರ!

Murder: ಮಥುರಾದ ನೌಜಿಲ್ ಪ್ರದೇಶದ ಮುಬಾರಿಕ್‌ಪುರ ಗ್ರಾಮದಲ್ಲಿ ಇಂದು ನಡೆದ ವಿವಾಹ ಸಮಾರಂಭದಲ್ಲಿ ವಧುವನ್ನು ಆಕೆಯ ಮಾಜಿ ಪ್ರಿಯಕರನೇ ಗುಂಡಿಕ್ಕಿ ಕೊಂದಿದ್ದಾನೆ.

Shocking News: ಮದುವೆ ಮಂಟಪದಲ್ಲೇ ವಧುವಿಗೆ ಶೂಟ್ ಮಾಡಿ ಕೊಂದ ಮಾಜಿ ಪ್ರಿಯಕರ!
ಮದುವೆಯಾಗಬೇಕಿದ್ದ ಜೋಡಿ
TV9 Web
| Edited By: |

Updated on: Apr 29, 2022 | 7:44 PM

Share

ಮಥುರಾ: ಮದುವೆ ಫಿಕ್ಸ್​ ಆಗಿದೆ ಎಂದ ಮಾತ್ರಕ್ಕೆ ಮದುವೆ (Marriage) ನಡೆದೇ ಬಿಡುತ್ತದೆ ಎಂದು ಹೇಳಲು ಸಾಧ್ಯವಾಗದ ಪರಿಸ್ಥಿತಿಯಲ್ಲಿ ನಾವಿದ್ದೇವೆ. 2 ದಿನಗಳ ಹಿಂದಷ್ಟೇ ವರ ಕಂಠಪೂರ್ತಿ ಕುಡಿದು, ಮದುವೆ ಮಂಟಪಕ್ಕೆ ತಡವಾಗಿ ಬಂದ ಎಂಬ ಕಾರಣಕ್ಕೆ ವಧುವಿನ ತಂದೆ-ತಾಯಿ ತಮ್ಮ ಮಗಳನ್ನು ಬೇರೆ ಯುವಕನಿಗೆ ಕೊಟ್ಟು ಮದುವೆ ಮಾಡಿದ ವಿಷಯ ಭಾರೀ ಚರ್ಚೆಯಾಗಿತ್ತು. ಇಂದು ಮದುವೆ ಮಂಟಪದಲ್ಲೇ ವಧುವಿನ ಮಾಜಿ ಪ್ರಿಯಕರ ತಾನು ಮದುವೆಯಾಗಬೇಕಾಗಿದ್ದ ಯುವತಿಯನ್ನು ಶೂಟ್ ಮಾಡಿ, ಕೊಂದಿರುವ ಘಟನೆ ನಡೆದಿದೆ.

ಮಥುರಾದ ನೌಜಿಲ್ ಪ್ರದೇಶದ ಮುಬಾರಿಕ್‌ಪುರ ಗ್ರಾಮದಲ್ಲಿ ಇಂದು ನಡೆದ ವಿವಾಹ ಸಮಾರಂಭದಲ್ಲಿ ವಧುವನ್ನು ಆಕೆಯ ಮಾಜಿ ಪ್ರಿಯಕರನೇ ಗುಂಡಿಕ್ಕಿ ಕೊಂದಿದ್ದಾನೆ. ವಧು ಕಾಜಲ್ ತಾನು ಮದುವೆಯಾಗಬೇಕಿದ್ದ ವರನಿಗೆ ವರಮಾಲೆ ಹಾಕಿದ ಕೂಡಲೇ ಆಕೆಯ ಮೇಲೆ ಗುಂಡು ಹಾರಿಸಿ, ಕೊಲ್ಲಲಾಗಿದೆ.

ಆರೋಪಿಯು ಆ ವಧುವಿನೊಂದಿಗೆ ಸಂಬಂಧ ಹೊಂದಿದ್ದ. ಆಕೆಯನ್ನೇ ಮದುವೆಯಾಗಬೇಕು ಎಂದುಕೊಂಡಿದ್ದ. ಆದರೆ, ಆಕೆಯು ಬೇರೆ ಪುರುಷನೊಂದಿಗೆ ಮದುವೆಯಾಗುತ್ತಿದ್ದುದರಿಂದ ಕೋಪಗೊಂಡಿದ್ದ ಆತ ಆಕೆಯ ಮದುವೆ ನಡೆಯುವ ಸ್ಥಳಕ್ಕೆ ಹೋಗಿ ಮಂಟಪದಲ್ಲೇ ಆಕೆಗೆ ಶೂಟ್ ಮಾಡಿ ಕೊಲೆ ಮಾಡಿದ್ದಾನೆ ಎಂದು ವರದಿಯಾಗಿದೆ.

ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ…

ಗುಂಡಿನ ಸದ್ದು ಕೇಳಿದ ಕೂಡಲೇ ಕುಟುಂಬಸ್ಥರು ಹಾಗೂ ಸಂಬಂಧಿಕರು ಸ್ಥಳಕ್ಕೆ ಧಾವಿಸಿದ್ದಾರೆ. ಅಷ್ಟರಲ್ಲಾಗಲೇ ವಧು ಸಾವನ್ನಪ್ಪಿದ್ದಳು. ವೇದಿಕೆಯಲ್ಲಿ ವರಮಾಲೆ ಹಾಕಿದ ನಂತರ ನನ್ನ ಮಗಳು ಫ್ರೆಶ್ ಆಗಲು ಕೋಣೆಗೆ ಹೋದಾಗ ಅಪರಿಚಿತ ವ್ಯಕ್ತಿ ಬಂದು ಗುಂಡಿಕ್ಕಿ ಕೊಂದಿದ್ದಾನೆ. ಮದುವೆಯಾಗಬೇಕಿದ್ದ ನನ್ನ ಮಗಳು ಸಾವನ್ನಪ್ಪಿರುವುದನ್ನು ನನಗೆ ಇನ್ನೂ ನಂಬಲು ಸಾಧ್ಯವಾಗುತ್ತಿಲ್ಲ! ಎಂದಿದ್ದಾರೆ.

ಈ ಘಟನೆ ನಡೆದ ಕೂಡಲೇ ಸಂತ್ರಸ್ತೆಯ ತಂದೆ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಪೊಲೀಸರು ಎಲ್ಲ ಆಯಾಮಗಳಿಂದ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​