AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲ್ಕೋಹಾಲ್ ಕುಡಿಸಿ ವಾರಾಣಸಿಯ ಪಿಯುಸಿ ವಿದ್ಯಾರ್ಥಿನಿ ಮೇಲೆ 23 ಯುವಕರಿಂದ ಅತ್ಯಾಚಾರ

ಮದ್ಯ ಕುಡಿಸಿ, 7 ದಿನಗಳ ಕಾಲ ಮನೆಯಲ್ಲೇ ಬಂಧಿಸಿಟ್ಟು, ಉತ್ತರ ಪ್ರದೇಶದ ವಿದ್ಯಾರ್ಥಿನಿಯ ಮೇಲೆ 23 ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಆ ಬಾಲಕಿ ಕಾಣೆಯಾಗಿದ್ದಾಳೆಂಬ ಆಕೆಯ ಕುಟುಂಬದ ದೂರಿನ ನಂತರ, ಪೊಲೀಸರು ಆಕೆಯನ್ನು ಪತ್ತೆಹಚ್ಚಿದರು. ಹುಕ್ಕಾ ಬಾರ್‌ನ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿದರು. ಈ ತನಿಖೆಯ ಭಾಗವಾಗಿ ಸ್ಥಳದಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.

ಆಲ್ಕೋಹಾಲ್ ಕುಡಿಸಿ ವಾರಾಣಸಿಯ ಪಿಯುಸಿ ವಿದ್ಯಾರ್ಥಿನಿ ಮೇಲೆ 23 ಯುವಕರಿಂದ ಅತ್ಯಾಚಾರ
Rape
ಸುಷ್ಮಾ ಚಕ್ರೆ
|

Updated on: Apr 07, 2025 | 6:45 PM

Share

ವಾರಾಣಸಿ, ಏಪ್ರಿಲ್ 7: ಮಾರ್ಚ್ 29 ಮತ್ತು ಏಪ್ರಿಲ್ 4ರ ನಡುವೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ 12 ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ 23 ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಉತ್ತರ ಪ್ರದೇಶದ ಪೊಲೀಸರು 23 ಪುರುಷರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಅವರಲ್ಲಿ 11 ಮಂದಿಯನ್ನು ಇನ್ನೂ ಪತ್ತೆಹಚ್ಚಿಲ್ಲ. ಇಲ್ಲಿಯವರೆಗೆ 6 ಪುರುಷರನ್ನು ಪೊಲೀಸರು ಬಂಧಿಸಿದ್ದಾರೆ.

ಮಾರ್ಚ್ 29ರಂದು ಸ್ನೇಹಿತನೊಬ್ಬ ವಾರಾಣಸಿಯ ಪಿಶಾಚ್‌ಮೋಚನ್ ಪ್ರದೇಶದಲ್ಲಿ ಹುಕ್ಕಾ ಬಾರ್‌ಗೆ ಮಹಿಳೆಯನ್ನು ಕರೆದೊಯ್ದಿದ್ದ. ನಂತರ ಆಕೆ ನಾಪತ್ತೆಯಾಗಿದ್ದಳು. ಪೊಲೀಸರ ಪ್ರಕಾರ, ಆಕೆ ಕ್ರೀಡಾ ಕೋರ್ಸ್‌ಗೆ ಪ್ರವೇಶಕ್ಕಾಗಿ ತಯಾರಿ ನಡೆಸುತ್ತಿದ್ದಳು ಮತ್ತು ನಿಯಮಿತವಾಗಿ ಕಾಲೇಜಿಗೆ ಓಟದ ಅಭ್ಯಾಸಕ್ಕಾಗಿ ಹೋಗುತ್ತಿದ್ದಳು.

ಇದನ್ನೂ ಓದಿ: ಕ್ಯಾನ್ಸರ್​​ನಿಂದ ಬಳಲುತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ; ಚಿಕಿತ್ಸೆ ವೇಳೆ ಗೊತ್ತಾಯ್ತು ಗರ್ಭಿಣಿಯಾದ ಸತ್ಯ!

ಇದನ್ನೂ ಓದಿ
Image
ಬ್ಯಾಡ್ಮಿಂಟನ್ ಕೋಚ್​ನಿಂದ ಬಾಲಕಿ ಮೇಲೆ ಅತ್ಯಾಚಾರ: ವಿಡಿಯೋಗಳು ಪತ್ತೆ!
Image
ಕೌಟುಂಬಿಕ ಕಲಹದ ವೇಳೆ ಮನೆಯ ಛಾವಣಿ ಕುಸಿದು 10 ಜನರ ಸ್ಥಿತಿ ಗಂಭೀರ
Image
ಮದುವೆ ಬೇಡವೆಂದು ವರನನ್ನು ಕೊಲ್ಲಲು ಸುಪಾರಿಕೊಟ್ಟ ವಧು
Image
ಬೆಂಗಳೂರು: ಬಿಹಾರದ ಯುವತಿಯ ಅಪಹರಿಸಿ ಅತ್ಯಾಚಾರ, ಇಬ್ಬರ ಬಂಧನ

“ಆ ಬಾಲಕಿಯ ಹೇಳಿಕೆಯ ಪ್ರಕಾರ, ಮಾರ್ಚ್ 29ರಂದು ಸ್ನೇಹಿತನೊಬ್ಬ ಪಿಶಾಚ್‌ಮೋಚನ್ ಪ್ರದೇಶದ ಹುಕ್ಕಾ ಬಾರ್‌ಗೆ ಅವಳನ್ನು ಕರೆದುಕೊಂಡು ಹೋಗಿದ್ದ. ಅಲ್ಲಿ ಇತರ ಪುರುಷರು ಸಹ ಬಂದಿದ್ದರು. ಆ ಹುಡುಗಿ ಕುಡಿಯುವ ಕೋಲ್ಡ್ ಡ್ರಿಂಕ್‌ನಲ್ಲಿ ಮಾದಕ ದ್ರವ್ಯ ಮಿಕ್ಸ್ ಮಾಡಿ ಸಿಗ್ರಾ ಪ್ರದೇಶದ ವಿವಿಧ ಹೋಟೆಲ್‌ಗಳಿಗೆ ಕರೆದೊಯ್ಯಲಾಯಿತು. ಅಲ್ಲಿ ಅವಳ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಲಾಗಿದೆ ಎಂದು ಆರೋಪಿಸಲಾಗಿದೆ” ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಆರೋಪಿಗಳಲ್ಲಿ ಕೆಲವರು ಅವಳಿಗೆ ಪರಿಚಿತರು, ಇನ್‌ಸ್ಟಾಗ್ರಾಮ್‌ನ ಪರಿಚಯಸ್ಥರು ಮತ್ತು ಮಾಜಿ ಸಹಪಾಠಿಗಳು. ಆ ಹುಡುಗಿಯ ಕುಟುಂಬದವರ ದೂರಿನ ನಂತರ, ಪೊಲೀಸರು ಅವಳನ್ನು ಪತ್ತೆಹಚ್ಚಿದರು. ಬಳಿಕ ಹುಕ್ಕಾ ಬಾರ್‌ನ ಸಿಬ್ಬಂದಿಯನ್ನು ಸಹ ವಿಚಾರಣೆ ಮಾಡಲು ಪ್ರಾರಂಭಿಸಿದರು. ತನಿಖೆಯ ಭಾಗವಾಗಿ ಸ್ಥಳದಿಂದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ.

ಇದನ್ನೂ ಓದಿ: 19 ವರ್ಷದ ಯುವತಿ ಮೇಲೆ ಅತ್ಯಾಚಾರ; ಗುಜರಾತ್​ನ ದಿಗಂಬರ ಜೈನಮುನಿ ಶಾಂತಿಸಾಗರ್ ಮಹಾರಾಜ್‌ಗೆ 10 ವರ್ಷ ಜೈಲು

ಪೊಲೀಸ್ ಅಧಿಕಾರಿಗಳ ಪ್ರಕಾರ, “ಆ ಹುಡುಗಿ ಆರಂಭದಲ್ಲಿ ತನ್ನ ಸ್ನೇಹಿತನೊಂದಿಗೆ ಸ್ವಇಚ್ಛೆಯಿಂದ ಹೊರಟಿದ್ದಳು. ಏಪ್ರಿಲ್ 4ರಂದು ಆಕೆಯ ಕುಟುಂಬದಿಂದ ಆಕೆ ನಾಪತ್ತೆಯಾದ ವ್ಯಕ್ತಿಯ ದೂರು ದಾಖಲಾಗಿತ್ತು. ಅದೇ ದಿನ ಆಕೆ ಪತ್ತೆಯಾಗಿದ್ದಳು. ಆ ಸಮಯದಲ್ಲಿ, ಆಕೆ ಅಥವಾ ಆಕೆಯ ಕುಟುಂಬದಿಂದ ಯಾವುದೇ ಲೈಂಗಿಕ ದೌರ್ಜನ್ಯದ ದೂರು ದಾಖಲಾಗಿರಲಿಲ್ಲ.”

ಮಾರ್ಚ್ 29ರಿಂದ ಏಪ್ರಿಲ್ 4ರ ನಡುವೆ ನಡೆದಿರಬಹುದು ಎನ್ನಲಾದ ಸಾಮೂಹಿಕ ಅತ್ಯಾಚಾರ ಘಟನೆಯ ಕುರಿತು ಏಪ್ರಿಲ್ 6ರಂದು ಲಾಲ್ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆ ದೂರಿನ ಆಧಾರದ ಮೇಲೆ, ಸಂಬಂಧಿತ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ