AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಮೊಬೈಲ್ ಕೊಡಲಿಲ್ಲ ಎಂದು ಗಂಡನ ತುಟಿಯನ್ನೇ ಕತ್ತರಿಸಿದ ಹೆಂಡತಿ!

Viral News: ಮಹಾರಾಷ್ಟ್ರದ ಭಾಂದರದ ಮಸಲ್​ನಲ್ಲಿ ಗಂಡ ತನ್ನ ಮೊಬೈಲ್​ ಅನ್ನು ವಾಪಾಸ್ ಕೊಡಲಿಲ್ಲ ಎಂಬ ಕೋಪಕ್ಕೆ ಹೆಂಡತಿ ಆತನ ತುಟಿಯನ್ನೇ ಕತ್ತರಿಸಿದ್ದಾಳೆ!

Shocking News: ಮೊಬೈಲ್ ಕೊಡಲಿಲ್ಲ ಎಂದು ಗಂಡನ ತುಟಿಯನ್ನೇ ಕತ್ತರಿಸಿದ ಹೆಂಡತಿ!
Instagram
TV9 Web
| Edited By: |

Updated on: Oct 16, 2021 | 8:19 PM

Share

ಗಂಡ-ಹೆಂಡತಿಯ ಜಗಳ ಉಂಡು ಮಲಗುವವರೆಗೆ ಎಂಬ ಮಾತೆಲ್ಲ ಹಳೆಯದಾಯ್ತು. ಈಗಂತೂ ಗೊರಕೆ ಹೊಡೆದಿದ್ದಕ್ಕೆ, ಕೆಮ್ಮಿದ್ದಕ್ಕೆ, ಸೀನಿದ್ದಕ್ಕೂ ಡೈವೋರ್ಸ್ ಕೊಡುವವರಿದ್ದಾರೆ. ಆದರೆ, ಕೆಲವು ಘಟನೆಗಳು ನಮ್ಮನ್ನು ಅಚ್ಚರಿಗೆ ತಳ್ಳುತ್ತವೆ. ಆ ರೀತಿಯ ವಿಚಿತ್ರವಾದ ಮತ್ತು ಶಾಕಿಂಗ್ ಘಟನೆಯೊಂದು ಇಲ್ಲಿದೆ. ಮಹಾರಾಷ್ಟ್ರದ ಭಾಂದರದ ಮಸಲ್​ನಲ್ಲಿ ಗಂಡ ತನ್ನ ಮೊಬೈಲ್​ ಅನ್ನು ವಾಪಾಸ್ ಕೊಡಲಿಲ್ಲ ಎಂಬ ಕೋಪಕ್ಕೆ ಹೆಂಡತಿ ಆತನ ತುಟಿಯನ್ನೇ ಕತ್ತರಿಸಿದ್ದಾಳೆ!

ಅಚ್ಚರಿಯಾದರೂ ಇದು ಸತ್ಯ. ಮಸಲ್​ನಲ್ಲಿ 40 ವರ್ಷದ ಖೇಮ್​ರಾಜ್ ಬಾಬೂರಾವ್ ಮುಲ್ ಎಂಬ ವ್ಯಕ್ತಿ ಭಾಂದರದಲ್ಲಿ ವಾಸವಾಗಿದ್ದರು. ತನ್ನ ಮೊಬೈಲ್ ಹಾಳಾಗಿದ್ದರಿಂದ ಮನೆಯಲ್ಲಿದ್ದಾಗ ಅವರು ಹೆಂಡತಿಯ ಮೊಬೈಲ್ ಅನ್ನು ಬಳಸುತ್ತಿದ್ದರು. ತನ್ನ ಮೊಬೈಲನ್ನು ಯಾವಾಗಲೂ ಗಂಡನೇ ಹಿಡಿದುಕೊಂಡಿರುತ್ತಾನೆ ಎಂದು ಕೋಪಗೊಂಡ ಹೆಂಡತಿ ಆತನೊಂದಿಗೆ ಅದೇ ವಿಷಯಕ್ಕೆ ಜಗಳ ಮಾಡಿದರು.

ಕಳೆದ ಗುರುವಾರ ಮೊಬೈಲ್ ವಿಷಯಕ್ಕೆ ಗಂಡನೊಂದಿಗೆ ಜಗಳವಾಡಿದ ಹೆಂಡತಿ ಮೊಬೈಲ್ ವಾಪಾಸ್ ಕೊಡುವಂತೆ ಕೇಳಿದಳು. ಅದಕ್ಕೆ ಗಂಡ ಒಪ್ಪಲಿಲ್ಲ. ಇದರಿಂದ ಕೋಪಗೊಂಡ ಆಕೆ ಗಂಡನ ತುಟಿಯನ್ನು ಚಾಕುವಿ​ನಿಂದ ಕತ್ತರಿಸಿದ್ದಾಳೆ. ಚಾಕುವನ್ನು ಗಂಡನ ಮುಖದ ಮೇಲೆ ಎಸೆದಾಗ ಆ ಚಾಕು ಆತನ ತುಟಿಗೆ ತಾಗಿ ತುಟಿ ಕತ್ತರಿಸಿಹೋಗಿದೆ.

ಬಳಿಕ ಗಾಯಗೊಂಡ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಡನ ಮೇಲೆ ಹಲ್ಲೆ ಮಾಡಿದ ಹೆಂಡತಿಯ ವಿರುದ್ಧ ಕೇಸ್ ದಾಖಲಿಸಿಕೊಳ್ಳಲಾಗಿದೆ.

ಇದನ್ನೂ ಓದಿ: Viral Video: ಮೊದಲ ಬಾರಿ ವಿಮಾನ ಹತ್ತಿದ ಮಗಳಿಗೆ ಸರ್​ಪ್ರೈಸ್ ಕೊಟ್ಟ ಅಪ್ಪ; ಈ ವಿಡಿಯೋವನ್ನು ಮಿಸ್ ಮಾಡಲೇಬೇಡಿ!

Viral Photo: ಕುಕ್ಕರ್ ಜೊತೆ ಮದುವೆಯಾಗಿ ಎರಡೇ ದಿನಕ್ಕೆ ಡೈವೋರ್ಸ್ ನೀಡಿದ ಯುವಕ; ಕಾರಣವೇನು ಗೊತ್ತಾ?

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ