AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಮೊಬೈಲ್ ಕೊಡಲಿಲ್ಲ ಎಂದು ಗಂಡನ ತುಟಿಯನ್ನೇ ಕತ್ತರಿಸಿದ ಹೆಂಡತಿ!

Viral News: ಮಹಾರಾಷ್ಟ್ರದ ಭಾಂದರದ ಮಸಲ್​ನಲ್ಲಿ ಗಂಡ ತನ್ನ ಮೊಬೈಲ್​ ಅನ್ನು ವಾಪಾಸ್ ಕೊಡಲಿಲ್ಲ ಎಂಬ ಕೋಪಕ್ಕೆ ಹೆಂಡತಿ ಆತನ ತುಟಿಯನ್ನೇ ಕತ್ತರಿಸಿದ್ದಾಳೆ!

Shocking News: ಮೊಬೈಲ್ ಕೊಡಲಿಲ್ಲ ಎಂದು ಗಂಡನ ತುಟಿಯನ್ನೇ ಕತ್ತರಿಸಿದ ಹೆಂಡತಿ!
Instagram
TV9 Web
| Edited By: |

Updated on: Oct 16, 2021 | 8:19 PM

Share

ಗಂಡ-ಹೆಂಡತಿಯ ಜಗಳ ಉಂಡು ಮಲಗುವವರೆಗೆ ಎಂಬ ಮಾತೆಲ್ಲ ಹಳೆಯದಾಯ್ತು. ಈಗಂತೂ ಗೊರಕೆ ಹೊಡೆದಿದ್ದಕ್ಕೆ, ಕೆಮ್ಮಿದ್ದಕ್ಕೆ, ಸೀನಿದ್ದಕ್ಕೂ ಡೈವೋರ್ಸ್ ಕೊಡುವವರಿದ್ದಾರೆ. ಆದರೆ, ಕೆಲವು ಘಟನೆಗಳು ನಮ್ಮನ್ನು ಅಚ್ಚರಿಗೆ ತಳ್ಳುತ್ತವೆ. ಆ ರೀತಿಯ ವಿಚಿತ್ರವಾದ ಮತ್ತು ಶಾಕಿಂಗ್ ಘಟನೆಯೊಂದು ಇಲ್ಲಿದೆ. ಮಹಾರಾಷ್ಟ್ರದ ಭಾಂದರದ ಮಸಲ್​ನಲ್ಲಿ ಗಂಡ ತನ್ನ ಮೊಬೈಲ್​ ಅನ್ನು ವಾಪಾಸ್ ಕೊಡಲಿಲ್ಲ ಎಂಬ ಕೋಪಕ್ಕೆ ಹೆಂಡತಿ ಆತನ ತುಟಿಯನ್ನೇ ಕತ್ತರಿಸಿದ್ದಾಳೆ!

ಅಚ್ಚರಿಯಾದರೂ ಇದು ಸತ್ಯ. ಮಸಲ್​ನಲ್ಲಿ 40 ವರ್ಷದ ಖೇಮ್​ರಾಜ್ ಬಾಬೂರಾವ್ ಮುಲ್ ಎಂಬ ವ್ಯಕ್ತಿ ಭಾಂದರದಲ್ಲಿ ವಾಸವಾಗಿದ್ದರು. ತನ್ನ ಮೊಬೈಲ್ ಹಾಳಾಗಿದ್ದರಿಂದ ಮನೆಯಲ್ಲಿದ್ದಾಗ ಅವರು ಹೆಂಡತಿಯ ಮೊಬೈಲ್ ಅನ್ನು ಬಳಸುತ್ತಿದ್ದರು. ತನ್ನ ಮೊಬೈಲನ್ನು ಯಾವಾಗಲೂ ಗಂಡನೇ ಹಿಡಿದುಕೊಂಡಿರುತ್ತಾನೆ ಎಂದು ಕೋಪಗೊಂಡ ಹೆಂಡತಿ ಆತನೊಂದಿಗೆ ಅದೇ ವಿಷಯಕ್ಕೆ ಜಗಳ ಮಾಡಿದರು.

ಕಳೆದ ಗುರುವಾರ ಮೊಬೈಲ್ ವಿಷಯಕ್ಕೆ ಗಂಡನೊಂದಿಗೆ ಜಗಳವಾಡಿದ ಹೆಂಡತಿ ಮೊಬೈಲ್ ವಾಪಾಸ್ ಕೊಡುವಂತೆ ಕೇಳಿದಳು. ಅದಕ್ಕೆ ಗಂಡ ಒಪ್ಪಲಿಲ್ಲ. ಇದರಿಂದ ಕೋಪಗೊಂಡ ಆಕೆ ಗಂಡನ ತುಟಿಯನ್ನು ಚಾಕುವಿ​ನಿಂದ ಕತ್ತರಿಸಿದ್ದಾಳೆ. ಚಾಕುವನ್ನು ಗಂಡನ ಮುಖದ ಮೇಲೆ ಎಸೆದಾಗ ಆ ಚಾಕು ಆತನ ತುಟಿಗೆ ತಾಗಿ ತುಟಿ ಕತ್ತರಿಸಿಹೋಗಿದೆ.

ಬಳಿಕ ಗಾಯಗೊಂಡ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಡನ ಮೇಲೆ ಹಲ್ಲೆ ಮಾಡಿದ ಹೆಂಡತಿಯ ವಿರುದ್ಧ ಕೇಸ್ ದಾಖಲಿಸಿಕೊಳ್ಳಲಾಗಿದೆ.

ಇದನ್ನೂ ಓದಿ: Viral Video: ಮೊದಲ ಬಾರಿ ವಿಮಾನ ಹತ್ತಿದ ಮಗಳಿಗೆ ಸರ್​ಪ್ರೈಸ್ ಕೊಟ್ಟ ಅಪ್ಪ; ಈ ವಿಡಿಯೋವನ್ನು ಮಿಸ್ ಮಾಡಲೇಬೇಡಿ!

Viral Photo: ಕುಕ್ಕರ್ ಜೊತೆ ಮದುವೆಯಾಗಿ ಎರಡೇ ದಿನಕ್ಕೆ ಡೈವೋರ್ಸ್ ನೀಡಿದ ಯುವಕ; ಕಾರಣವೇನು ಗೊತ್ತಾ?

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ