Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಜ್ಜಾ ವಿಚಾರಕ್ಕೆ ಮಹಿಳೆ ಮೇಲೆ ಅತ್ತಿಗೆಯ ಅಣ್ಣನಿಂದ ಗುಂಡಿನ ದಾಳಿ

ದೆಹಲಿಯ ಸೀಲಂಪುರದಲ್ಲಿ ಪಿಜ್ಜಾ ತಿನ್ನುವ ಕುರಿತು ಗಲಾಟೆ ಉಂಟಾಗಿ ಮಹಿಳೆಯ ಅತ್ತಿಗೆಯ ಅಣ್ಣ ಗುಂಡು ಹಾರಿಸಿದ್ದಾನೆ. ಆ ಗುಂಡಿನಿಂದ ಮಹಿಳೆಗೆ ಗಂಭೀರವಾಗಿ ಗಾಯಗಳಾಗಿವೆ. ಮನೆಗೆ ತಂದಿದ್ದ ಪಿಜ್ಜಾ ವಿತರಣೆ ವಿಚಾರವಾಗಿ ನಡೆದ ಜಗಳದಲ್ಲಿ ಮಹಿಳೆಯೊಬ್ಬರ ಹೊಟ್ಟೆಗೆ ಗುಂಡು ತಗುಲಿದೆ. ಅತ್ತಿಗೆ- ನಾದಿನಿಯರ ನಡುವಿನ ಜಗಳ, ಗುಂಡಿನ ದಾಳಿಗೆ ಕಾರಣವಾಯಿತು.

ಪಿಜ್ಜಾ ವಿಚಾರಕ್ಕೆ ಮಹಿಳೆ ಮೇಲೆ ಅತ್ತಿಗೆಯ ಅಣ್ಣನಿಂದ ಗುಂಡಿನ ದಾಳಿ
ಪಿಜ್ಜಾ
Follow us
ಸುಷ್ಮಾ ಚಕ್ರೆ
|

Updated on: Oct 17, 2024 | 9:46 PM

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಸೀಲಂಪುರ್ ಪ್ರದೇಶದಲ್ಲಿ ಪಿಜ್ಜಾ ವಿಚಾರಕ್ಕೆ ಒಂದೇ ಕುಟುಂಬದ ಇಬ್ಬರು ಮಹಿಳೆಯರ ನಡುವೆ ಮಾರಾಮಾರಿ ನಡೆದಿದೆ. ಈ ಆಘಾತಕಾರಿ ಘಟನೆಯಲ್ಲಿ ಮಹಿಳೆಯ ಮೇಲೆ ಗುಂಡು ಹಾರಿಸಲಾಗಿದೆ. ಪಿಜ್ಜಾ ವಿತರಣೆ ವಿಚಾರವಾಗಿ ನಡೆದ ಜಗಳದಲ್ಲಿ ಓರ್ವ ಮಹಿಳೆಯ ಹೊಟ್ಟೆಗೆ ಗುಂಡು ತಗುಲಿದೆ.

ಬುಧವಾರ (ಅಕ್ಟೋಬರ್ 16) ರಾತ್ರಿ ಸೀಲಾಂಪುರ ಪ್ರದೇಶದಲ್ಲಿ ಪಿಜ್ಜಾ ತಿನ್ನುವ ವಿಚಾರಕ್ಕೆ ಜಗಳ ಸಂಭವಿಸಿದೆ ಮತ್ತು ಗುಂಡುಗಳನ್ನು ಹಾರಿಸಲಾಗಿದೆ. ಅತ್ತಿಗೆ ಮತ್ತು ನಾದಿನಿಯ ನಡುವೆ ಅವರ ಅತ್ತೆಯ ಮನೆಯಲ್ಲಿ ಜಗಳ ನಡೆದ ನಂತರ ಅತ್ತಿಗೆ ತನ್ನ ಅಣ್ಣನನ್ನು ಕರೆದರು. ಆಗ ಅವರೆಲ್ಲರ ನಡುವೆ ವಾಗ್ವಾದ ನಡೆದಿದೆ. ಜೀಶಾನ್ ಎಂಬ ಅಣ್ಣ ತನ್ನ ಮನೆಯಲ್ಲಿ ಪಿಜ್ಜಾ ತಂದು ತಮ್ಮ ಮತ್ತು ಅವನ ಕುಟುಂಬಕ್ಕೆ ವಿತರಿಸಲು ಪ್ರಾರಂಭಿಸಿದನು.

ಇದನ್ನೂ ಓದಿ: ಓವರ್‌ಟೇಕ್ ಮಾಡಿದ್ದಕ್ಕೆ ಯುವಕನಿಗೆ ಹೊಡೆದು ಕೊಲೆ; ಮಗನ ಮೇಲೆ ಮಲಗಿ ಬೇಡಿಕೊಂಡ ಅಮ್ಮ!

ಜೀಶಾನ್ ಪಿಜ್ಜಾ ಹಂಚಿದ್ದಕ್ಕೆ ಆತನ ಪತ್ನಿ ಕೋಪಗೊಂಡರು. ಇದೇ ವಿಚಾರಕ್ಕೆ ಜಗಳ ಉಂಟಾಯಿತು. ಕೊನೆಗೆ ಆಕೆಯ ಅತ್ತಿಗೆ ತನ್ನ ಅಣ್ಣನನ್ನು ಮನೆಗೆ ಕರೆದರು. ಆಗ ಆತನೂ ಬಂದು ಜಗಳವಾಡಿ, ಕೋಪದಿಂದ ಜೀಶಾನ್​ನ ಹೆಂಡತಿಯ ಮೇಲೆ ಗುಂಡು ಹಾರಿಸಿದ್ದಾನೆ. ಆಕೆಗೆ ಗಂಭೀರ ಗಾಯಗಳಾಗಿವೆ. ಮಹಿಳೆಯ ಹೊಟ್ಟೆಗೆ ಗುಂಡು ಹಾರಿಸಲಾಗಿದೆ. ಚಿಂತಾಜನಕ ಸ್ಥಿತಿಯಲ್ಲಿದ್ದ ಆಕೆಯನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತು. ಗಾಯಗೊಂಡಿರುವ ಆಕೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ವರದಿಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗೃಹಲಕ್ಷ್ಮೀಯರಿಗೆ ಗುಡ್​ನ್ಯೂಸ್​: 2 ತಿಂಗಳ ಹಣ ಒಂದೇ ಸಲಕ್ಕೆ ಜಮಾ...!
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
ಗಂಡನನ್ನು ರೂಂನಲ್ಲಿ ಕೂಡಿ ಕತ್ತು ಹಿಸುಕಿ ಥಳಿಸಿದ ಹೆಂಡತಿ; ವಿಡಿಯೋ ವೈರಲ್
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
4ನೇ ಅತಿವೇಗದ ಅರ್ಧಶತಕ ಸಿಡಿಸಿದ ಮಾರ್ಷ್​
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ಲಾಂಗ್ ಹಿಡಿದ ಪ್ರಕರಣ: ಪೊಲೀಸ್ ಠಾಣೆಯಲ್ಲಿ ರಜತ್, ವಿನಯ್ ವಿಚಾರಣೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ