AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಅತ್ಯಾಚಾರಿಯನ್ನು ಮರಕ್ಕೆ ಕಟ್ಟಿ, ಹೊಡೆದು ಕೊಂದ ಮಹಿಳೆಯರು!

ಮಂಗಳವಾರ ರಾತ್ರಿ ತನ್ನ ತಾಯಿಯೊಂದಿಗೆ ಧಾರ್ಮಿಕ ಕಾರ್ಯಕ್ರಮಕ್ಕೆ ಬಂದಿದ್ದ 5 ವರ್ಷದ ಬಾಲಕಿಯನ್ನು ಸಮೀಪದ ಕಾಡಿಗೆ ಕರೆದುಕೊಂಡು ಹೋಗಿದ್ದ ಆತ ಆ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ.

Crime News: ಅತ್ಯಾಚಾರಿಯನ್ನು ಮರಕ್ಕೆ ಕಟ್ಟಿ, ಹೊಡೆದು ಕೊಂದ ಮಹಿಳೆಯರು!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 16, 2022 | 7:22 PM

Share

ಅಗರ್ತಲಾ: ಭಾರತದಲ್ಲಿ ಅತ್ಯಾಚಾರಿಗಳ (Rapists) ಸಂಖ್ಯೆ ಹೆಚ್ಚುತ್ತಲೇ ಇದೆ. ದಿನದಿಂದ ದಿನಕ್ಕೆ ಅತ್ಯಾಚಾರ ಪ್ರಕರಣಗಳು ಏರಿಕೆಯಾಗುತ್ತಿದೆ. ಕಾನೂನಿನ ಯಾವುದೇ ಅಂಜಿಕೆಯಿಲ್ಲದೆ ಸಣ್ಣ ಮಕ್ಕಳನ್ನೂ ತಮ್ಮ ಕಾಮತೃಷೆಗೆ ಬಳಸಿಕೊಳ್ಳುವ ಅತ್ಯಾಚಾರಿಗಳಿಗೆ ಎಷ್ಟೋ ಕಡೆಗಳಲ್ಲಿ ಊರಿನ ಜನರೇ ಸೇರಿಕೊಂಡು ಶಿಕ್ಷೆ ನೀಡಿದ್ದಾರೆ. ಅದೇ ರೀತಿ, ಮಹಿಳೆಯರ ಗುಂಪೊಂದು 46 ವರ್ಷದ ಅತ್ಯಾಚಾರಿಯನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿ, ಕೊಂದಿರುವ ಘಟನೆ ತ್ರಿಪುರಾದ ಧಲೈ ಜಿಲ್ಲೆಯಲ್ಲಿ ಇಂದು ನಡೆದಿದೆ. ಈ ಘಟನೆ ಇದೀಗ ದೇಶಾದ್ಯಂತ ಸುದ್ದಿಯಾಗಿದೆ.

ತ್ರಿಪುರಾದ ಗಂಡಚೆರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಈ ಹಿಂದೆ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿ 8 ವರ್ಷಗಳ ಕಠಿಣ ಜೈಲು ಶಿಕ್ಷೆಯನ್ನು ಪೂರ್ಣಗೊಳಿಸಿ ಊರಿಗೆ ವಾಪಾಸ್ ಬಂದಿದ್ದ. ಮಂಗಳವಾರ ರಾತ್ರಿ ತನ್ನ ತಾಯಿಯೊಂದಿಗೆ ಧಾರ್ಮಿಕ ಕಾರ್ಯಕ್ರಮಕ್ಕೆ ಬಂದಿದ್ದ 5 ವರ್ಷದ ಬಾಲಕಿಯನ್ನು ಸಮೀಪದ ಕಾಡಿಗೆ ಕರೆದುಕೊಂಡು ಹೋಗಿದ್ದ ಆತ ಆ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ.

ಅಮ್ಮನೊಂದಿಗೆ ಕಾರ್ಯಕ್ರಮಕ್ಕೆ ಬಂದಿದ್ದ ಆ 5 ವರ್ಷದ ಬಾಲಕಿ ಜೋರಾಗಿ ಕಿರುಚಾಡಿದ ಶಬ್ದ ಕೇಳಿ ಅಲ್ಲಿ ಸೇರಿದ್ದವರು ಕಾಡಿನೊಳಗೆ ಹೋಗಿ ನೋಡಿದಾಗ ಆಕೆಯ ಬಟ್ಟೆಯೆಲ್ಲ ಹರಿದುಹೋಗಿತ್ತು. ನೋವಿನಿಂದ ನರಳುತ್ತಾ ಬಿದ್ದಿದ್ದ ಆಕೆಯನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಕೊಲೆ ಮಾಡಿ ಜೈಲು ಸೇರಿ ಬಿಡುಗಡೆಯಾಗಿದ್ದ ಆ ವ್ಯಕ್ತಿಯೊಂದಿಗೆ ಆ ಬಾಲಕಿ ಹೋಗುತ್ತಿರುವುದನ್ನು ಅಲ್ಲಿದ್ದ ಕೆಲವರು ನೋಡಿದ್ದರು. ಹೀಗಾಗಿ, ಆತನೇ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾನೆಂಬ ಆರೋಪದಲ್ಲಿ ಆತನನ್ನು ಬಂಧಿಸುವಂತೆ ಒತ್ತಾಯಿಸಿ ಗಂಡಚೆರಾ-ಅಮರ್‌ಪುರ ಹೆದ್ದಾರಿ ತಡೆ ನಡೆಸಲಾಯಿತು.

ಅದರ ಮರುದಿನವೇ ಅಂದರೆ ಇಂದು ಬೆಳಗ್ಗೆ ಆ ಗ್ರಾಮದ ಮಹಿಳೆಯರ ಗುಂಪೊಂದು ಆತನನ್ನು ಹಿಡಿದು, ಮರಕ್ಕೆ ಕಟ್ಟಿ, ಮನಸಿಗೆ ಬಂದಂತೆ ಥಳಿಸಿದ್ದಾರೆ. ಆ ಹೊಡೆತವನ್ನು ತಾಳಲಾರದೆ ಆತ ಸಾವನ್ನಪ್ಪಿದ್ದಾನೆ. ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ಆರೋಪಿಯನ್ನು ಮಹಿಳೆಯರು ನಿರ್ದಯವಾಗಿ ಥಳಿಸುತ್ತಿರುವುದನ್ನು ನೋಡಬಹುದು. ಬಳಿಕ ಪ್ರಜ್ಞೆ ಕಳೆದುಕೊಂಡು ಬಿದ್ದಿದ್ದ ಆತನನ್ನು ಆಸ್ಪತ್ರೆಗೆ ಸೇರಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆತ ಮೃತಪಟ್ಟಿದ್ದಾನೆ.

ಬಾಲಕಿಯ ಮೇಲಿನ ಅತ್ಯಾಚಾರ ಮತ್ತು ಆರೋಪಿಯ ಕೊಲೆ ಎರಡೂ ಘಟನೆಗಳ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Crime News: ಕಣ್ಣಿಗೆ ಹಾರ್ಪಿಕ್, ಝಂಡು ಬಾಮ್ ಹಚ್ಚಿ ವೃದ್ಧೆಯನ್ನು ಕುರುಡಿಯಾಗಿಸಿ ಮನೆ ದೋಚಿದ ಮಹಿಳೆ!

Murder: ಮಗಳನ್ನೇ ಕೊಂದು ಆಕೆಯ ಶವದ ಮೇಲೆ ಅತ್ಯಾಚಾರ ನಡೆಸಿದ ಅಪ್ಪ!

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?