AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking News: ಗರ್ಲ್​ಫ್ರೆಂಡ್ ಜೊತೆ ಗುಟ್ಟಾಗಿ ಮದುವೆಯಾಗಿದ್ದಕ್ಕೆ ಯುವಕನ ಗುಪ್ತಾಂಗವೇ ಕಟ್!

Crime News: ಯುವಕ ಮತ್ತು ಯುವತಿ ಬಹಳ ದಿನಗಳಿಂದ ಪ್ರೀತಿ ಮಾಡುತ್ತಿದ್ದರು. ಮನೆಯವರು ಅವರ ಪ್ರೀತಿಗೆ ಒಪ್ಪದ ಕಾರಣದಿಂದ ದೆಹಲಿಯ ಹೊರಗೆ ಹೋಗಿ ಗುಟ್ಟಾಗಿ ಮದುವೆಯಾಗಿದ್ದರು. ಇದು ಯುವತಿಯ ಮನೆಯವರನ್ನು ಕೆರಳಿಸಿತ್ತು.

Shocking News: ಗರ್ಲ್​ಫ್ರೆಂಡ್ ಜೊತೆ ಗುಟ್ಟಾಗಿ ಮದುವೆಯಾಗಿದ್ದಕ್ಕೆ ಯುವಕನ ಗುಪ್ತಾಂಗವೇ ಕಟ್!
ಸಾಂದರ್ಭಿಕ ಚಿತ್ರ
TV9 Web
| Updated By: ಸುಷ್ಮಾ ಚಕ್ರೆ|

Updated on: Dec 24, 2021 | 8:01 PM

Share

ನವದೆಹಲಿ: ತಾನು ಪ್ರೀತಿಸಿದ ಯುವತಿಯನ್ನು ಮದುವೆಯಾದ ಎಂಬ ಒಂದೇ ಕಾರಣಕ್ಕೆ ಯುವಕನನ್ನು ಥಳಿಸಿ, ಆತನ ಗುಪ್ತಾಂಗವನ್ನು ಕಟ್ ಮಾಡಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಈ ಘಟನೆ ನಡೆದಿದೆ. ಯುವತಿಯನ್ನು ಮದುವೆಯಾಗಿ, ಓಡಿಹೋದ ಯುವಕನನ್ನು ಅಪಹರಿಸಿದ ಯುವತಿಯ ಕುಟುಂಬಸ್ಥರು ಥಳಿಸಿ, ಆತನ ಗುಪ್ತಾಂಗವನ್ನು ಕತ್ತರಿಸಿದ್ದಾರೆ.

ಡಿಸೆಂಬರ್ 22ರಂದು ದೆಹಲಿಯ ರಜೌರಿ ಗಾರ್ಡನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕೊಲೆ ಯತ್ನ ಮತ್ತು ಅಪಹರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಡಿಸಿಪಿ (ಪಶ್ಚಿಮ) ಪ್ರಶಾಂತ್ ಗೌತಮ್ ತಿಳಿಸಿದ್ದಾರೆ. ಹಲ್ಲೆಗೊಳಗಾದ 22 ವರ್ಷದ ಯುವಕನ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದ್ದು, ಆತನನ್ನು ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆ ಯುವಕ ಮತ್ತು ಯುವತಿ ಬಹಳ ದಿನಗಳಿಂದ ಪ್ರೀತಿ ಮಾಡುತ್ತಿದ್ದರು. ಮನೆಯವರು ಅವರ ಪ್ರೀತಿಗೆ ಒಪ್ಪದ ಕಾರಣದಿಂದ ದೆಹಲಿಯ ಹೊರಗೆ ಹೋಗಿ ಗುಟ್ಟಾಗಿ ಮದುವೆಯಾಗಿದ್ದರು. ಇದು ಯುವತಿಯ ಮನೆಯವರನ್ನು ಕೆರಳಿಸಿತ್ತು. ಅವರಿಬ್ಬರೂ ಮದುವೆಯಾದ ನಂತರ ಡಿಸೆಂಬರ್ 22ರಂದು ದೆಹಲಿಗೆ ಮರಳಿದ್ದರು. ಅವರ ಕುಟುಂಬಗಳಿಂದ ಅಪಾಯವಿರುವುದರಿಂದ ರಕ್ಷಣೆ ಬೇಕೆಂದು ಪೊಲೀಸರನ್ನು ಕೋರಿದ್ದರು.

ದಂಪತಿಯ ರಕ್ಷಣೆಗಾಗಿ ರಾಜೌರಿ ಪೊಲೀಸ್ ಠಾಣೆಗೆ ಭೇಟಿ ನೀಡಿದ ಬಗ್ಗೆ ಯುವತಿಯ ಕುಟುಂಬದ ಸದಸ್ಯರಿಗೆ ಗೊತ್ತಾಯಿತು. ಹೀಗಾಗಿ, ಅವರಿಬ್ಬರೂ ಪೊಲೀಸ್ ಠಾಣೆಯಿಂದ ಹೊರಬಂದ ತಕ್ಷಣ, ಹುಡುಗಿಯ ಕುಟುಂಬ ಸದಸ್ಯರು ಅವರನ್ನು ಅಪಹರಿಸಿ, ಅಮಾನುಷವಾಗಿ ಥಳಿಸಿ, ಆ ಯುವಕನ ಗುಪ್ತಾಂಗವನ್ನು ಕತ್ತರಿಸಿದ್ದಾರೆ. ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಯಾರನ್ನೂ ಬಂಧಿಸಿಲ್ಲ.

ಇದನ್ನೂ ಓದಿ: Shocking News: ಲೈಂಗಿಕ ಕ್ರಿಯೆ ವೇಳೆ ಕಾಂಡೋಮ್ ಬದಲು ಗುಪ್ತಾಂಗಕ್ಕೆ ಗಮ್ ಅಂಟಿಸಿಕೊಂಡ ಯುವಕ ಸಾವು!

Shocking News: ಬಲವಂತವಾಗಿ ಲೈಂಗಿಕ ಕ್ರಿಯೆ ನಡೆಸಿದ ಗಂಡನ ಮರ್ಮಾಂಗ ಕತ್ತರಿಸಿದ ಹೆಂಡತಿ!

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್