AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shocking Video: ಪುಣೆ- ಅಹಮದಾಬಾದ್ ಹೆದ್ದಾರಿಯಲ್ಲಿ ಕಾರು- ಬಸ್​ ನಡುವೆ ಭೀಕರ ಅಪಘಾತ; ಓರ್ವ ಸಾವು, 25 ಜನರ ಸ್ಥಿತಿ ಗಂಭೀರ

Accident: ಪುಣೆಯತ್ತ ವೇಗವಾಗಿ ಚಲಿಸುತ್ತಿದ್ದ ಕಾರು ಬಸ್‌ಗೆ ಡಿಕ್ಕಿ ಹೊಡೆದ ಕಾರಣ ಐಷಾರಾಮಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರೆಸ್ಟೋರೆಂಟ್ ಕಡೆ ಹೋಗಿ ಉರುಳಿ, ಹೆದ್ದಾರಿಯ ಬದಿಯಲ್ಲಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.

Shocking Video: ಪುಣೆ- ಅಹಮದಾಬಾದ್ ಹೆದ್ದಾರಿಯಲ್ಲಿ ಕಾರು- ಬಸ್​ ನಡುವೆ ಭೀಕರ ಅಪಘಾತ; ಓರ್ವ ಸಾವು, 25 ಜನರ ಸ್ಥಿತಿ ಗಂಭೀರ
ಅಪಘಾತದ ದೃಶ್ಯ
TV9 Web
| Edited By: |

Updated on: Apr 13, 2022 | 1:36 PM

Share

ಪುಣೆ: ಪುಣೆ-ಅಹಮದ್‌ನಗರ ಹೆದ್ದಾರಿಯಲ್ಲಿ ಎದುರಿನಿಂದ ಬರುತ್ತಿದ್ದ ಬಸ್‌ಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಕನಿಷ್ಠ 25 ಮಂದಿ ಗಾಯಗೊಂಡಿದ್ದಾರೆ. ಈ ಆಘಾತಕಾರಿ ಅಪಘಾತದ (Road Accident) ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ. ಅಪಘಾತವು ಎಷ್ಟು ತೀವ್ರವಾಗಿತ್ತು ಎಂದರೆ ಬಸ್ ರಸ್ತೆಯಿಂದ ಸ್ಕಿಡ್ ಆಗಿ ಹೋಟೆಲ್ ಪಾರ್ಕಿಂಗ್ ಸ್ಥಳದಲ್ಲಿ ನಿಂತಿದ್ದ ಮೂರು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಹೋಟೆಲ್‌ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಈ ಅಪಘಾತದ ದೃಶ್ಯ ರೆಕಾರ್ಡ್​ ಆಗಿದೆ.

ವರದಿಗಳ ಪ್ರಕಾರ, ಪುಣೆ ನಗರದಿಂದ ಸುಮಾರು 50 ಕಿಮೀ ದೂರದಲ್ಲಿರುವ ಬಜರಂಗವಾಡಿ ಗ್ರಾಮದಲ್ಲಿ ನಿನ್ನೆ ರಾತ್ರಿ 11.25ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಪುಣೆಯತ್ತ ವೇಗವಾಗಿ ಚಲಿಸುತ್ತಿದ್ದ ಕಾರು ಬಸ್‌ಗೆ ಡಿಕ್ಕಿ ಹೊಡೆದ ಕಾರಣ ಐಷಾರಾಮಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರೆಸ್ಟೋರೆಂಟ್ ಕಡೆ ಹೋಗಿ ಉರುಳಿ, ಹೆದ್ದಾರಿಯ ಬದಿಯಲ್ಲಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ.

ಮೃತರನ್ನು ಸ್ವಿಫ್ಟ್ ಕಾರು ಚಲಾಯಿಸುತ್ತಿದ್ದ 34 ವರ್ಷದ ವಿಶಾಲ್ ಬಬನ್ ಸಾಸ್ವಾಡೆ ಎಂದು ಗುರುತಿಸಲಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಪೈಕಿ ಮೂವರಿಗೆ ತೀವ್ರ ಗಾಯಗಳಾಗಿವೆ. ಗಾಯಾಳುಗಳನ್ನು ಶಿಕ್ರಾಪುರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಲಾಗಿದ್ದು, ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಕೆಲವು ಪ್ರಯಾಣಿಕರನ್ನು ಮಾಣಿಕಚಂದ್ ಚಿಮನ್‌ಲಾಲ್ ಜೈನ್ (67), ಹರೀಶ್‌ಕುಮಾರ್ ವಿಯನಾನಾದ್ ದುಬೆ (33), ದೀಪಕ್ ನರೇಂದ್ರ ಅಗರ್ವಾಲ್ (28), ಪ್ರಕಾಶ್ ಅಪ್ಪಾಸಾಹೇಬ್ ತುರತ್ಮಾಕ್ (64), ಪೂಜಾ ಕಿಸಾನ್ ಖೈರ್ನಾರ್ (29), ಮುಖೇಶ್ ವೇದಪ್ರಕಾಶ್ ಸುರವಾಸೆ (29), ದೀಪಲ್ ಚೌಘುಲೆ (33), ಶರಯೌ ಮನೀಶ್ ಜಾಖ್ತೆ (22), ಕುಶಾಗ್ರಾ ದೀಪಕ್ ಚೌಗುಲೆ (8) ಮತ್ತು ನಾಗೇಶ ಹರಿಭಾವು ಶಿಂಗಾಡೆ (48) ಎಂದು ಗುರುತಿಸಲಾಗಿದೆ.

ಕಾರು ಚಾಲಕನ ವಿರುದ್ಧ ಸಮೀಪದ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 279, 304 (ಎ), 337, 338, 427 ಮತ್ತು ಎಂವಿಎ ಆಕ್ಟ್ 184 ರ ಅಡಿಯಲ್ಲಿ ದೂರು ದಾಖಲಿಸಲಾಗಿದೆ. ಅಪಘಾತದ ನಂತರ ಮೂರು ಗಂಟೆಗಳ ಕಾಲ ಸಂಚಾರ ಸ್ಥಗಿತಗೊಂಡಿತ್ತು. ಈ ಭಯಾನಕ ಸಿಸಿಟಿವಿ ದೃಶ್ಯಾವಳಿಗಳು ಅಂತರ್ಜಾಲದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: Crime News: ಅತ್ಯಾಚಾರ ಕೊಲೆಗಿಂತಲೂ ಘೋರವಾದುದು; ಪೋಕ್ಸೋ ನ್ಯಾಯಾಲಯದಿಂದ ಅತ್ಯಾಚಾರಿಗೆ 10 ವರ್ಷ ಜೈಲು ಶಿಕ್ಷೆ

ಜಾರ್ಖಂಡ್ ಕೇಬಲ್ ಕಾರ್ ಅಪಘಾತದಲ್ಲಿ ಇಬ್ಬರು ದುರ್ಮರಣ; ಜನರ ರಕ್ಷಣೆಗೆ ಧಾವಿಸಿದ ವಾಯುಪಡೆ

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​