AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ವಸಂತ್ ಕುಂಜ್‌ನಲ್ಲಿ ತಡರಾತ್ರಿ ಶೂಟೌಟ್; ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​​ನ ಇಬ್ಬರು ಸದಸ್ಯರ ಬಂಧನ

ದಕ್ಷಿಣ ದೆಹಲಿಯ ಪ್ರಮುಖ ಹೋಟೆಲ್‌ನ ಹೊರಗೆ ಇಬ್ಬರಿಗೆ "ಗುಂಡು ಹಾರಿಸಲು" ನಿಯೋಜಿಸಲಾಗಿದೆ ಎಂದು ದೆಹಲಿ ಪೊಲೀಸರಿಗೆ ಮಾಹಿತಿ ಇತ್ತು. ಅವರ ಉದ್ದೇಶವು ಸುಲಿಗೆಯೆಂದು ತೋರುತ್ತದೆ ಎಂದಿದ್ದಾರೆ ಪೊಲೀಸರು.  ಗ್ಯಾಂಗ್‌ಸ್ಟರ್ ಅನ್ಮೋಲ್ ಬಿಷ್ಣೋಯ್ ನಿರ್ದೇಶನದ ಮೇರೆಗೆ ಪಂಜಾಬ್‌ನ ಜೈಲಿನಲ್ಲಿರುವ ಅಮಿತ್‌ನಿಂದ ಈ ಸದಸ್ಯರು ಸೂಚನೆಗಳನ್ನು ಸ್ವೀಕರಿಸಿದ್ದರು.

ದೆಹಲಿ ವಸಂತ್ ಕುಂಜ್‌ನಲ್ಲಿ ತಡರಾತ್ರಿ ಶೂಟೌಟ್; ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​​ನ ಇಬ್ಬರು ಸದಸ್ಯರ ಬಂಧನ
ದೆಹಲಿ ಪೊಲೀಸ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Dec 09, 2023 | 2:09 PM

Share

ದೆಹಲಿ ಡಿಸೆಂಬರ್ 09: ದಕ್ಷಿಣ ದಿಲ್ಲಿಯ  ವಸಂತ್‌ ಕುಂಜ್‌ (Vasant Kunj) ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯ ನಂತರ ಲಾರೆನ್ಸ್‌ ಬಿಷ್ಣೋಯ್‌ (Lawrance Bishnoi )ಕ್ರಿಮಿನಲ್‌ ಗ್ಯಾಂಗ್‌ನ ಇಬ್ಬರು ಸದಸ್ಯರನ್ನು ದೆಹಲಿ ಪೊಲೀಸ್‌ (Delhi Police) ವಿಶೇಷ ದಳ ಬಂಧಿಸಿದೆ ಎಂದು ಪೊಲೀಸರು ಇಂದು(ಶನಿವಾರ) ತಿಳಿಸಿದ್ದಾರೆ. ಅವರಲ್ಲಿ ಒಬ್ಬ ಕಾನೂನಿನೊಂದಿಗೆ ಸಂಘರ್ಷದಲ್ಲಿರುವ ಹುಡುಗ ಇದ್ದಾನೆ ಎಂದು ಹೇಳಿದ್ದಾರೆ. ಗ್ಯಾಂಗ್ ಸದಸ್ಯರಾದ ಅನೀಶ್(23), ಮತ್ತು 15 ವರ್ಷದ ಹುಡುಗ – ಶುಕ್ರವಾರ ರಾತ್ರಿ ದೆಹಲಿಯ ವಸಂತ್ ಕುಂಜ್‌ನ ಪಾಕೆಟ್ -9 ಬಳಿಯಿಂದ ಸಿಕ್ಕಿಬಿದ್ದಿದ್ದಾರೆ ಎಂದು ಪೊಲೀಸರು ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ.

ದಕ್ಷಿಣ ದೆಹಲಿಯ ಪ್ರಮುಖ ಹೋಟೆಲ್‌ನ ಹೊರಗೆ ಇಬ್ಬರಿಗೆ “ಗುಂಡು ಹಾರಿಸಲು” ನಿಯೋಜಿಸಲಾಗಿದೆ ಎಂದು ದೆಹಲಿ ಪೊಲೀಸರಿಗೆ ಮಾಹಿತಿ ಇತ್ತು. ಅವರ ಉದ್ದೇಶವು ಸುಲಿಗೆಯೆಂದು ತೋರುತ್ತದೆ ಎಂದಿದ್ದಾರೆ ಪೊಲೀಸರು.  ಗ್ಯಾಂಗ್‌ಸ್ಟರ್ ಅನ್ಮೋಲ್ ಬಿಷ್ಣೋಯ್ ನಿರ್ದೇಶನದ ಮೇರೆಗೆ ಪಂಜಾಬ್‌ನ ಜೈಲಿನಲ್ಲಿರುವ ಅಮಿತ್‌ನಿಂದ ಅವರು ಸೂಚನೆಗಳನ್ನು ಸ್ವೀಕರಿಸಿದ್ದರು. ಅನ್ಮೋಲ್ ಬಿಷ್ಣೋಯ್, ಲಾರೆನ್ಸ್ ಬಿಷ್ಣೋಯ್ ಅವರ ಸೋದರ ಸಂಬಂಧಿಯಾಗಿದ್ದು, ಈತ ಕೆನಡಾದಲ್ಲಿ ತಲೆಮರೆಸಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ.

ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ ಗುಜರಾತ್‌ನ ಸಬರಮತಿ ಜೈಲಿನಲ್ಲಿದ್ದಾರೆ. ಆರೋಪಿಗಳು ಐದು ಸುತ್ತು ಗುಂಡು ಹಾರಿಸಿದ್ದು, ಪ್ರತೀಕಾರವಾಗಿ ಆತ್ಮರಕ್ಷಣೆಗಾಗಿ ಪೊಲೀಸರು ಎರಡು ಸುತ್ತು ಗುಂಡು ಹಾರಿಸಿದ್ದಾರೆ. ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ದೆಹಲಿ: ಬಾಲಕಿ ಮೇಲೆ ಆ್ಯಸಿಡ್ ಎರಚಿದ ಅತ್ಯಾಚಾರ ಪ್ರಕರಣ ಆರೋಪಿ; ಕೃತ್ಯವೆಸಗಿದ ನಂತರ ಆತ್ಮಹತ್ಯೆ

ಪೊಲೀಸರು ಎರಡು ಪಿಸ್ತೂಲ್‌ಗಳು ಮತ್ತು ನಾಲ್ಕು ಲೈವ್ ಕಾಟ್ರಿಡ್ಜ್‌ಗಳು ಮತ್ತು ಒಂದು ಮೋಟಾರ್‌ಸೈಕಲ್ ಅನ್ನು ವಶಪಡಿಸಿಕೊಂಡಿದ್ದಾರೆ.  ಅನೀಶ್ ಆರು ಶಸ್ತ್ರಸಜ್ಜಿತ ದರೋಡೆ, ಶಸ್ತ್ರಾಸ್ತ್ರ ಕಾಯ್ದೆ ಮತ್ತು ಹಲ್ಲೆ ಮತ್ತು ಹರ್ಯಾಣದ ರೋಹ್ಟಕ್ ಜಿಲ್ಲೆಯಲ್ಲಿ ಸಶಸ್ತ್ರ ದರೋಡೆ ಪ್ರಕರಣದಲ್ಲಿ ಕಾನೂನಿನೊಂದಿಗೆ ಸಂಘರ್ಷದಲ್ಲಿರುವವ ಎಂದು ಹೆಸರಿಸಲಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು