AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಶೂಟೌಟ್ ಪ್ರಕರಣ: ಚುರುಕುಗೊಂಡ ತನಿಖೆ, ಮೂವರ ರೌಡಿಗಳ ಬಂಧನ

ಕೆ.ಆರ್ ಪುರಂನಲ್ಲಿ ರೌಡಿ ಶೀಟರ್ ಮೇಲೆ ನಡೆದ ಶೂಟೌಟ್ ದಾಳಿ ಪ್ರಕರಣದ ತನಿಖೆ ಚುರುಕುಗೊಂಡಿದೆ. ಶೂಟರ್ಸ್​ಗಳು ನಾಲ್ಕು ದಿನದ ಹಿಂದೆಯೇ ಶೂಟೌಟ್ ನಡೆದ ಕೆ.ಆರ್ ಪುರಂ ಗೆ ಬಂದಿದ್ದರು ಎಂದು ಹೇಳಲಾಗುತ್ತಿದೆ.

Crime News: ಶೂಟೌಟ್ ಪ್ರಕರಣ: ಚುರುಕುಗೊಂಡ ತನಿಖೆ, ಮೂವರ ರೌಡಿಗಳ ಬಂಧನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 12, 2022 | 11:39 AM

Share

ಬೆಂಗಳೂರು: ಕೆ.ಆರ್ ಪುರಂನಲ್ಲಿ ರೌಡಿ ಶೀಟರ್ ಮೇಲೆ ನಡೆದ ಶೂಟೌಟ್ ದಾಳಿ ಪ್ರಕರಣದ ತನಿಖೆ ಚುರುಕುಗೊಂಡಿದೆ. ಶೂಟರ್ಸ್​ಗಳು ನಾಲ್ಕು ದಿನದ ಹಿಂದೆಯೇ ಶೂಟೌಟ್ ನಡೆದ ಕೆ.ಆರ್ ಪುರಂ ಗೆ ಬಂದಿದ್ದರು ಎಂದು ಹೇಳಲಾಗುತ್ತಿದೆ. ನಾಲ್ಕು ದಿನದಿಂದ ಗಾಯಾಳು ಶಿವಶಂಕರ್ ರೆಡ್ಡಿ ಸೈಟ್ ಸುತ್ತ ಮುತ್ತಲಿನ ಸ್ಥಳದಲ್ಲಿಯೇ ಓಡಾಟ ಮಾಡುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದು ಬಂದಿದೆ. ಕೆ.ಆರ್ ಪುರಂ ಹೊರಹೊಲಯದ ಭಾಗದಲ್ಲಿ ಆರೋಪಿಗಳು ತಂಗಿದ್ದ ಮಾಹಿತಿಯನ್ನು ಪೊಲೀಸ್ ಅಧಿಕಾರಗಳು ಕಳೆಹಾಕಿದ್ದಾರೆ.

ಶಿವಶಂಕರ್ ರೆಡ್ಡಿಗೆ ಮೂರು ದಿನ ಸ್ಕೆಚ್ ಹಾಕಿದ್ರು, ಆತ ಇವರ ಕೈ ಸಿಕ್ಕಿರಲಿಲ್ಲ. ನಾಲ್ಕನೇ ದಿನ ಶಿವಶಂಕರ್ ರೆಡ್ಡಿ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಶೂಟೌಟ್ ಬಳಿಕ ಸ್ಥಳದಲ್ಲೇ ಪೊನಾಲಿ ಶಂಕರ್​ಗೆ ಡೆತ್ ಕನ್ಪರ್ಮ್ ಅಂತ ಮನೋಜ್‌ ಕರೆ ಮಾಡಿದ್ದಾರೆ. ನಂತರ ಬೈಕ್​ಗಳಲ್ಲಿ ಹೊಸಕೋಟೆಗೆ ಹೋಗಿ, ಟೋಲ್ ಬಳಿ ಬೈಕ್​ನ್ನು ಪೊದೆಯಲ್ಲಿ ಬಿಟ್ಟು ಕಾರಲ್ಲಿ ಎಸ್ಕೇಪ್ ಆಗಿದ್ದಾರೆ. ಇವತ್ತು ಮೂವರು ಆರೋಪಿಗಳನ್ನ ಕರೆದೊಯ್ದು ಸ್ಥಳದಲ್ಲಿ ಈ ಬಗ್ಗೆ ಪೊಲೀಸ್ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ.

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮದನಪಲ್ಲಿ ರೌಡಿ ಶೀಟರ್ ಪೊನಾಲಿ ಶಂಕರ್ ಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಪ್ರಮುಖ ಆರೋಪಿ ಪೊನಾಲಿ ಶಂಕರ್ ಸೇರಿ ಐವರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಗನ್ ಖರೀದಿ ಎಲ್ಲಿ ಮಾಡಿದ್ದಾರೆ? ಹಣಕಾಸಿನ ವಹಿವಾಟು ಎಷ್ಟು ? ಎಂಬುದರ ಬಗ್ಗೆ ಈಗಾಗಲೇ ತನಿಖೆ ನಡೆಯುತ್ತಿದೆ.

ಪೊನಾಲಿ ಶಂಕರ್​ಗೆ ಕೊಲೆ ಮಾಡೋದಾಗಿ ಬೆದರಿಕೆ ಹಾಕಿದ್ದ ಗಾಯಾಳು ಶಿವಶಂಕರ್ ರೆಡ್ಡಿ, ಇದೇ ಕಾರಣಕ್ಕೆ ಪೊನಾಲಿ ಶಂಕರ್ ಸುಪಾರಿ ಕೊಟ್ಟು ಕೊಲೆಗೆ ಪ್ಲಾನ್ ರೂಪಿಸಿದ್ದ ಎಂದು ಹೇಳಲಾಗಿದೆ. ಸದ್ಯ ಮೂರು ವಿಶೇಷ ತಂಡಗಳಿಂದ ಆಂಧ್ರಪ್ರದೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಇದನ್ನು ಓದಿ:  ಸಮೀಪ ಲಾರಿ-ಕಾರು ಮುಖಾಮುಖಿಯಲ್ಲಿ ಮೂವರ ಸಾವು, ಬೆಂಗಳೂರು ಕ್ಯಾಸಿನೊ ಮೇಲೆ ಪೊಲೀಸರ ದಾಳಿ

ರಸ್ತೆಯಲ್ಲಿ ಹೋಗುವ ವಾಹನಗಳಿಗೆ ಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದ ಖದೀಮರ ಬಂಧನ

ರಸ್ತೆಯಲ್ಲಿ ಹೋಗುವ ವಾಹನಗಳಿಗೆ ಅಡ್ಡಗಟ್ಟಿ ನಿಲ್ಲಿಸುತ್ತಿದ್ದ ನಾಲ್ವರನ್ನ ಪೊಲೀಸರು ಇಂದು ಬಂಧಿಸಿದ್ದಾರೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಳಿಯ ಎಡ ದಂಡೆ ಕಾಲುವೆ ಬಳಿ ಅರೆಸ್ಟ್ ಮಾಡಲಾಗಿದೆ.

ರಸ್ತೆಗೆ ಅಡ್ಡ ಕಲ್ಲು ಹಾಕಿ ಕೈಯಲ್ಲಿ ಮಾರಾಕಸ್ತ್ರ ಹಿಡಿದು ವಾಹನ ನಿಲ್ಲಿಸುತ್ತಿದ್ದ ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ. ವಾಹನಗಳನ್ನ ನಿಲ್ಲಿಸಿ ದರೋಡೆ ಮಾಡಲು ಯತ್ನಿಸಿರುವ ಶಂಕೆ ವ್ಯಕ್ತವಾಗಿತ್ತು, ಈ ಬಗ್ಗೆ ಪೊಲೀಸರು ತನಿಖೆಯನ್ನು ನಡೆಸಲು ಮುಂದಾದರೂ, ಇದೀಗ ಈ ನಾಲ್ವರು ಖದೀಮರ ಪೊಲೀಸರ ವಾಹನ ನಿಲ್ಲಿಸಲು ಹೋಗಿ ಪೊಲೀಸರ ಕೈಯಲ್ಲಿ ಲಾಕ್ ಆಗಿದ್ದಾರೆ, ಆದರೆ ಇದರಲ್ಲಿ ಇಬ್ಬರು ಪರಾರಿಯಾಗಿದ್ದಾರೆ.

ಬಂಧಿತರಲ್ಲಿ ಇಬ್ಬರು ವಿಜಯಪುರ, ಒಬ್ಬ ಧಾರವಾಡ ಹಾಗೂ ಇನ್ನೊಬ್ಬ ಯಾದಗಿರಿ ಮೂಲದ ಆರೋಪಿಗಳು ಎಂದು ಗುರುತಿಸಲಾಗಿದೆ. ಬಂಧಿಸುವ ವೇಳೆ ಇಬ್ಬರು ಸ್ಥಳದಿಂದ ಪರಾರಿಯಾಗಿದ್ದಾರೆ. ಬಂಧಿತರಿಂದ 25 ಸಾವಿರ ನಗದು, 2 ಬೈಕ್, ಒಂದು ಕಬ್ಬಿಣದ ತಲ್ವಾರ್, ಒಂದು ಮಚ್ಚು ಹಾಗೂ ಕಾರದ ಪುಡಿ ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಡೆಕಲ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:37 am, Mon, 12 December 22

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್