AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಶ್ರದ್ಧಾ ವಾಕರ್ ರೀತಿಯಲ್ಲೇ ಬೆಂಗಳೂರಿನಲ್ಲಿ ಭಯಾನಕ ಕೊಲೆ: ಯುವತಿಯ ಹತ್ಯೆಗೈದು 30ಕ್ಕೂ ಹೆಚ್ಚು ತುಂಡು ಮಾಡಿ ಫ್ರಿಡ್ಜ್​ನಲ್ಲಿಟ್ಟ ಆರೋಪಿ

ದೆಹಲಿಯ ಶ್ರದ್ಧಾ ವಾಕರ್ ಕೊಲೆಯ ರೀತಿಯಲ್ಲೇ ಬೆಂಗಳೂರು(Bengaluru) ನಗರದ ಪೈಪ್ ಲೈನ್ ರಸ್ತೆಯ ವೀರಣ್ಣ ಭವನ ಬಳಿಯ ಮನೆಯೊಂದರಲ್ಲಿ ಯುವತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಆರೋಪಿಯು ಯುವತಿಯನ್ನು ಕೊಲೆಗೈದು ಪೀಸ್ ಪೀಸ್‌ ಮಾಡಿ ಫ್ರಿಜ್‌ನಲ್ಲಿ ಇಟ್ಟಿದ್ದಾನೆ. ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ವಿವರ ಇಲ್ಲಿದೆ.

ದೆಹಲಿ ಶ್ರದ್ಧಾ ವಾಕರ್ ರೀತಿಯಲ್ಲೇ ಬೆಂಗಳೂರಿನಲ್ಲಿ ಭಯಾನಕ ಕೊಲೆ: ಯುವತಿಯ ಹತ್ಯೆಗೈದು 30ಕ್ಕೂ ಹೆಚ್ಚು ತುಂಡು ಮಾಡಿ ಫ್ರಿಡ್ಜ್​ನಲ್ಲಿಟ್ಟ ಆರೋಪಿ
ಬೆಂಗಳೂರಿನಲ್ಲಿ ಯುವತಿಯ ಭಯಾನಕ ಕೊಲೆ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Sep 21, 2024 | 7:23 PM

Share

ಬೆಂಗಳೂರು, ಸೆ.21: ದೇಶವನ್ನೇ ಬೆಚ್ಚಿಬೀಳಿಸಿದ್ದ ದೆಹಲಿಯ ಶ್ರದ್ಧಾ ವಾಕರ್ ಕೊಲೆಯ ರೀತಿಯಲ್ಲೇ  ಬೆಂಗಳೂರಿನಲ್ಲಿಯೂ (Bengaluru) ಯುವತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಗರದ ವೈಯಾಲಿಕಾವಲ್‌ನ ಪೈಪ್ ಲೈನ್ ರಸ್ತೆಯ ವೀರಣ್ಣ ಭವನ ಬಳಿಯ ಮನೆಯೊಂದರಲ್ಲಿ ಆರೋಪಿಯು ಯುವತಿಯನ್ನು ಕೊಲೆಗೈದು 30 ಕ್ಕೂ ಹೆಚ್ಚು ಪೀಸ್ ಪೀಸ್‌ ಮಾಡಿ ಫ್ರಿಜ್‌ನಲ್ಲಿ ಇಟ್ಟಿದ್ದಾನೆ. ಮೇಲ್ನೋಟಕ್ಕೆ ಹೊರ ರಾಜ್ಯದ ಸುಮಾರು 25 ರಿಂದ 26 ವಯಸ್ಸಿನ ಯುವತಿ ಎಂದು ಗುರುತಿಸಲಾಗಿದ್ದು, ಹತ್ತರಿಂದ ಹದಿನೈದು ದಿನಗಳ ಹಿಂದೆಯೇ ಹತ್ಯೆ ಮಾಡಲಾಗಿದೆ. ಸಧ್ಯ ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಳೆದ ಎರಡು ದಿನಗಳಿಂದ ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನಲೆ ಅದೇ ಬಿಲ್ಡಿಂಗ್​ನ ಅಕ್ಕಪಕ್ಕದವರು ಇವತ್ತು ಸಂಬಂಧಿಕರಿಗೆ ಹೇಳಿದ್ದಾರೆ. ಅದರಂತೆ ಕೊಲೆಯಾದಂತಹ ಯುವತಿಯ ತಾಯಿ ಮತ್ತು ಅಕ್ಕ ಮನೆ ಬಳಿ ಬಂದು ಬೀಗ ಹೊಡೆದು ಒಳಹೋದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ:ಚಿಕ್ಕಮಗಳೂರಲ್ಲೊಂದು ಅಮಾನುಷ ಘಟನೆ: 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಹತ್ಯೆ

ಸಿಂಗಲ್ ಡೋರ್​ನ 165 ಲೀಟರ್ಸ್ ಫ್ರೀಡ್ಜ್​ನಲ್ಲಿ ಮೃತದೇಹದ ತುಂಡು

ಈ ಕುರಿತು ಮಾತನಾಡಿದ ಕೇಂದ್ರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್, ‘ಒರ್ವನೇ ಕೊಲೆ ಮಾಡಿದ್ದು, 30ಕ್ಕೂ ಹೆಚ್ಚು ಪೀಸ್ ಮಾಡಿ ಸಿಂಗಲ್ ಡೋರ್​ನ 165 ಲೀಟರ್ಸ್ ಫ್ರೀಡ್ಜ್​ನಲ್ಲಿ ಮೃತದೇಹದ ತುಂಡುಗಳನ್ನು ಇಡಲಾಗಿತ್ತು. ಮೃತ ಯುವತಿಯನ್ನು ಛತ್ತೀಸ್​ಘಡ್ ಅಥವಾ ಪಶ್ಚಿಮ ಬಂಗಾಳ ಮೂಲದ ಮಹಾಲಕ್ಷ್ಮಿ ಎಂದು ಗುರುತಿಸಲಾಗಿದೆ. ಬೇರೆ ರಾಜ್ಯದವರು ಇಲ್ಲಿಯೇ ಸೆಟಲ್ ಆಗಿದ್ದವರು. ಗಂಡನ ಜೊತೆಗೆ ಬೇರೆಯಾಗಿದ್ದ ಮಹಿಳೆ, ಒಬ್ಬಳೆ ವಾಸವಾಗಿದ್ದಳು ಎಂದಿದ್ದಾರೆ.

8 ತಂಡಗಳನ್ನು ರಚಿಸಿ ಕೊಲೆ ಆರೋಪಿಗಾಗಿ ಹುಡುಕಾಟ

ಇನ್ನು ಮಹಿಳೆ ಕೊಲೆ ಆರೋಪಿಗಾಗಿ ವೈಯಾಲಿಕಾವಲ್‌, ಶೇಷಾದ್ರಿಪುರಂ ಹಾಗೂ ಹೈಗ್ರೌಂಡ್ಸ್ ಪೊಲೀಸರು ತನಿಖೆ ಆರಂಭಿಸಿದ್ದು, ಪೊಲೀಸರು 8 ತಂಡಗಳನ್ನು ರಚಿಸಿಕೊಂಡು ಹುಡುಕಾಟ ಶುರು ಮಾಡಿದ್ದಾರೆ. ಅನುಮಾನಿತ ವ್ಯಕ್ತಿಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿರುವ ಪೊಲೀಸರು, ಕುಟುಂಬಸ್ಥರ ಬಳಿಯೂ ಮಾಹಿತಿ ಕಲೆ ಹಾಕುತ್ತಿದ್ದಾರೆ. ಮಹಾಲಕ್ಷ್ಮೀ ಜೊತೆ ಸಂಪರ್ಕದಲ್ಲಿದ್ದ ಎಲ್ಲಾ ವ್ಯಕ್ತಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:27 pm, Sat, 21 September 24

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ