AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಶ್ರದ್ಧಾ ವಾಕರ್ ರೀತಿಯಲ್ಲೇ ಬೆಂಗಳೂರಿನಲ್ಲಿ ಭಯಾನಕ ಕೊಲೆ: ಯುವತಿಯ ಹತ್ಯೆಗೈದು 30ಕ್ಕೂ ಹೆಚ್ಚು ತುಂಡು ಮಾಡಿ ಫ್ರಿಡ್ಜ್​ನಲ್ಲಿಟ್ಟ ಆರೋಪಿ

ದೆಹಲಿಯ ಶ್ರದ್ಧಾ ವಾಕರ್ ಕೊಲೆಯ ರೀತಿಯಲ್ಲೇ ಬೆಂಗಳೂರು(Bengaluru) ನಗರದ ಪೈಪ್ ಲೈನ್ ರಸ್ತೆಯ ವೀರಣ್ಣ ಭವನ ಬಳಿಯ ಮನೆಯೊಂದರಲ್ಲಿ ಯುವತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಆರೋಪಿಯು ಯುವತಿಯನ್ನು ಕೊಲೆಗೈದು ಪೀಸ್ ಪೀಸ್‌ ಮಾಡಿ ಫ್ರಿಜ್‌ನಲ್ಲಿ ಇಟ್ಟಿದ್ದಾನೆ. ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ವಿವರ ಇಲ್ಲಿದೆ.

ದೆಹಲಿ ಶ್ರದ್ಧಾ ವಾಕರ್ ರೀತಿಯಲ್ಲೇ ಬೆಂಗಳೂರಿನಲ್ಲಿ ಭಯಾನಕ ಕೊಲೆ: ಯುವತಿಯ ಹತ್ಯೆಗೈದು 30ಕ್ಕೂ ಹೆಚ್ಚು ತುಂಡು ಮಾಡಿ ಫ್ರಿಡ್ಜ್​ನಲ್ಲಿಟ್ಟ ಆರೋಪಿ
ಬೆಂಗಳೂರಿನಲ್ಲಿ ಯುವತಿಯ ಭಯಾನಕ ಕೊಲೆ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Sep 21, 2024 | 7:23 PM

Share

ಬೆಂಗಳೂರು, ಸೆ.21: ದೇಶವನ್ನೇ ಬೆಚ್ಚಿಬೀಳಿಸಿದ್ದ ದೆಹಲಿಯ ಶ್ರದ್ಧಾ ವಾಕರ್ ಕೊಲೆಯ ರೀತಿಯಲ್ಲೇ  ಬೆಂಗಳೂರಿನಲ್ಲಿಯೂ (Bengaluru) ಯುವತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಗರದ ವೈಯಾಲಿಕಾವಲ್‌ನ ಪೈಪ್ ಲೈನ್ ರಸ್ತೆಯ ವೀರಣ್ಣ ಭವನ ಬಳಿಯ ಮನೆಯೊಂದರಲ್ಲಿ ಆರೋಪಿಯು ಯುವತಿಯನ್ನು ಕೊಲೆಗೈದು 30 ಕ್ಕೂ ಹೆಚ್ಚು ಪೀಸ್ ಪೀಸ್‌ ಮಾಡಿ ಫ್ರಿಜ್‌ನಲ್ಲಿ ಇಟ್ಟಿದ್ದಾನೆ. ಮೇಲ್ನೋಟಕ್ಕೆ ಹೊರ ರಾಜ್ಯದ ಸುಮಾರು 25 ರಿಂದ 26 ವಯಸ್ಸಿನ ಯುವತಿ ಎಂದು ಗುರುತಿಸಲಾಗಿದ್ದು, ಹತ್ತರಿಂದ ಹದಿನೈದು ದಿನಗಳ ಹಿಂದೆಯೇ ಹತ್ಯೆ ಮಾಡಲಾಗಿದೆ. ಸಧ್ಯ ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಳೆದ ಎರಡು ದಿನಗಳಿಂದ ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನಲೆ ಅದೇ ಬಿಲ್ಡಿಂಗ್​ನ ಅಕ್ಕಪಕ್ಕದವರು ಇವತ್ತು ಸಂಬಂಧಿಕರಿಗೆ ಹೇಳಿದ್ದಾರೆ. ಅದರಂತೆ ಕೊಲೆಯಾದಂತಹ ಯುವತಿಯ ತಾಯಿ ಮತ್ತು ಅಕ್ಕ ಮನೆ ಬಳಿ ಬಂದು ಬೀಗ ಹೊಡೆದು ಒಳಹೋದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ:ಚಿಕ್ಕಮಗಳೂರಲ್ಲೊಂದು ಅಮಾನುಷ ಘಟನೆ: 5 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಹತ್ಯೆ

ಸಿಂಗಲ್ ಡೋರ್​ನ 165 ಲೀಟರ್ಸ್ ಫ್ರೀಡ್ಜ್​ನಲ್ಲಿ ಮೃತದೇಹದ ತುಂಡು

ಈ ಕುರಿತು ಮಾತನಾಡಿದ ಕೇಂದ್ರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್, ‘ಒರ್ವನೇ ಕೊಲೆ ಮಾಡಿದ್ದು, 30ಕ್ಕೂ ಹೆಚ್ಚು ಪೀಸ್ ಮಾಡಿ ಸಿಂಗಲ್ ಡೋರ್​ನ 165 ಲೀಟರ್ಸ್ ಫ್ರೀಡ್ಜ್​ನಲ್ಲಿ ಮೃತದೇಹದ ತುಂಡುಗಳನ್ನು ಇಡಲಾಗಿತ್ತು. ಮೃತ ಯುವತಿಯನ್ನು ಛತ್ತೀಸ್​ಘಡ್ ಅಥವಾ ಪಶ್ಚಿಮ ಬಂಗಾಳ ಮೂಲದ ಮಹಾಲಕ್ಷ್ಮಿ ಎಂದು ಗುರುತಿಸಲಾಗಿದೆ. ಬೇರೆ ರಾಜ್ಯದವರು ಇಲ್ಲಿಯೇ ಸೆಟಲ್ ಆಗಿದ್ದವರು. ಗಂಡನ ಜೊತೆಗೆ ಬೇರೆಯಾಗಿದ್ದ ಮಹಿಳೆ, ಒಬ್ಬಳೆ ವಾಸವಾಗಿದ್ದಳು ಎಂದಿದ್ದಾರೆ.

8 ತಂಡಗಳನ್ನು ರಚಿಸಿ ಕೊಲೆ ಆರೋಪಿಗಾಗಿ ಹುಡುಕಾಟ

ಇನ್ನು ಮಹಿಳೆ ಕೊಲೆ ಆರೋಪಿಗಾಗಿ ವೈಯಾಲಿಕಾವಲ್‌, ಶೇಷಾದ್ರಿಪುರಂ ಹಾಗೂ ಹೈಗ್ರೌಂಡ್ಸ್ ಪೊಲೀಸರು ತನಿಖೆ ಆರಂಭಿಸಿದ್ದು, ಪೊಲೀಸರು 8 ತಂಡಗಳನ್ನು ರಚಿಸಿಕೊಂಡು ಹುಡುಕಾಟ ಶುರು ಮಾಡಿದ್ದಾರೆ. ಅನುಮಾನಿತ ವ್ಯಕ್ತಿಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿರುವ ಪೊಲೀಸರು, ಕುಟುಂಬಸ್ಥರ ಬಳಿಯೂ ಮಾಹಿತಿ ಕಲೆ ಹಾಕುತ್ತಿದ್ದಾರೆ. ಮಹಾಲಕ್ಷ್ಮೀ ಜೊತೆ ಸಂಪರ್ಕದಲ್ಲಿದ್ದ ಎಲ್ಲಾ ವ್ಯಕ್ತಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:27 pm, Sat, 21 September 24

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು