ಲೈಂಗಿಕ ಕ್ರಿಯೆಗೆ ಸಹಕರಿಸದ ಚಿಕ್ಕಮ್ಮನನ್ನೇ ಕೊಲೆ ಮಾಡಿದ ಕುಡುಕ!

ಆನೇಕಲ್: ಲೈಂಗಿಕ ಕ್ರಿಯೆಗೆ ಸಹಕರಿಸದ ಕಾರಣ ಚಿಕ್ಕಮ್ಮನನ್ನೇ ಕೊಲೆ ಮಾಡಿರುವ ಘಟನೆ ಆನೇಕಲ್ ತಾಲೂಕಿನ ಬನ್ಮೇರುಘಟ್ಟ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 43 ವರ್ಷದ ಯಶೋಧಾ ಅವರನ್ನು ಆರೋಪಿ ವಿಜಯ್ ಹತ್ಯೆ ಮಾಡಿದ್ದಾನೆ. ಫೆ.3ರಂದು ರಾತ್ರಿ ಚಿಕ್ಕಮ್ಮನ ಮನೆಗೆ ಆರೋಪಿ ವಿಜಯ್ ಕುಡಿದು ಬಂದಿದ್ದ. ಊಟ ಮಾಡಿದ ಬಳಿಕ ಯಶೋಧಾ ನಿದ್ರೆಗೆ ಜಾರಿದ್ದರು. ಈ ವೇಳೆ, ತನ್ನೊಟ್ಟಿಗೆ ಲೈಂಗಿಕ ಕ್ರಿಯೆಗೆ ಸಹಕರಿಸಲು ಚಿಕ್ಕಮ್ಮನನ್ನು ಆರೋಪಿ ವಿಜಯ್ ಬಲವಂತ ಮಾಡಿದ್ದಾನೆ. ಲೈಂಗಿಕ ಕ್ರಿಯೆಗೆ ಒಪ್ಪದಿದ್ದ ಹಿನ್ನೆಲೆಯಲ್ಲಿ ಕುತ್ತಿಗೆ ಮೇಲೆ […]

ಲೈಂಗಿಕ ಕ್ರಿಯೆಗೆ ಸಹಕರಿಸದ ಚಿಕ್ಕಮ್ಮನನ್ನೇ ಕೊಲೆ ಮಾಡಿದ ಕುಡುಕ!
ಸಾಧು ಶ್ರೀನಾಥ್​

Updated on: Feb 05, 2020 | 1:03 PM

ಆನೇಕಲ್: ಲೈಂಗಿಕ ಕ್ರಿಯೆಗೆ ಸಹಕರಿಸದ ಕಾರಣ ಚಿಕ್ಕಮ್ಮನನ್ನೇ ಕೊಲೆ ಮಾಡಿರುವ ಘಟನೆ ಆನೇಕಲ್ ತಾಲೂಕಿನ ಬನ್ಮೇರುಘಟ್ಟ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 43 ವರ್ಷದ ಯಶೋಧಾ ಅವರನ್ನು ಆರೋಪಿ ವಿಜಯ್ ಹತ್ಯೆ ಮಾಡಿದ್ದಾನೆ.

ಫೆ.3ರಂದು ರಾತ್ರಿ ಚಿಕ್ಕಮ್ಮನ ಮನೆಗೆ ಆರೋಪಿ ವಿಜಯ್ ಕುಡಿದು ಬಂದಿದ್ದ. ಊಟ ಮಾಡಿದ ಬಳಿಕ ಯಶೋಧಾ ನಿದ್ರೆಗೆ ಜಾರಿದ್ದರು. ಈ ವೇಳೆ, ತನ್ನೊಟ್ಟಿಗೆ ಲೈಂಗಿಕ ಕ್ರಿಯೆಗೆ ಸಹಕರಿಸಲು ಚಿಕ್ಕಮ್ಮನನ್ನು ಆರೋಪಿ ವಿಜಯ್ ಬಲವಂತ ಮಾಡಿದ್ದಾನೆ. ಲೈಂಗಿಕ ಕ್ರಿಯೆಗೆ ಒಪ್ಪದಿದ್ದ ಹಿನ್ನೆಲೆಯಲ್ಲಿ ಕುತ್ತಿಗೆ ಮೇಲೆ ಕಾಲಿಟ್ಟು ಉಸಿರುಗಟ್ಟಿಸಿ ಚಿಕ್ಕಮ್ಮನನ್ನು ಹತ್ಯೆ ಮಾಡಿದ್ದಾನೆ.

ಯಶೋಧಾ ಹತ್ಯೆ ಸಂಬಂಧ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ವಿಜಯ್​ನನ್ನು ಪೊಲೀಸರು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Published On - 12:54 pm, Wed, 5 February 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us