ಲೈಂಗಿಕ ಕ್ರಿಯೆಗೆ ಸಹಕರಿಸದ ಚಿಕ್ಕಮ್ಮನನ್ನೇ ಕೊಲೆ ಮಾಡಿದ ಕುಡುಕ!

ಆನೇಕಲ್: ಲೈಂಗಿಕ ಕ್ರಿಯೆಗೆ ಸಹಕರಿಸದ ಕಾರಣ ಚಿಕ್ಕಮ್ಮನನ್ನೇ ಕೊಲೆ ಮಾಡಿರುವ ಘಟನೆ ಆನೇಕಲ್ ತಾಲೂಕಿನ ಬನ್ಮೇರುಘಟ್ಟ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 43 ವರ್ಷದ ಯಶೋಧಾ ಅವರನ್ನು ಆರೋಪಿ ವಿಜಯ್ ಹತ್ಯೆ ಮಾಡಿದ್ದಾನೆ. ಫೆ.3ರಂದು ರಾತ್ರಿ ಚಿಕ್ಕಮ್ಮನ ಮನೆಗೆ ಆರೋಪಿ ವಿಜಯ್ ಕುಡಿದು ಬಂದಿದ್ದ. ಊಟ ಮಾಡಿದ ಬಳಿಕ ಯಶೋಧಾ ನಿದ್ರೆಗೆ ಜಾರಿದ್ದರು. ಈ ವೇಳೆ, ತನ್ನೊಟ್ಟಿಗೆ ಲೈಂಗಿಕ ಕ್ರಿಯೆಗೆ ಸಹಕರಿಸಲು ಚಿಕ್ಕಮ್ಮನನ್ನು ಆರೋಪಿ ವಿಜಯ್ ಬಲವಂತ ಮಾಡಿದ್ದಾನೆ. ಲೈಂಗಿಕ ಕ್ರಿಯೆಗೆ ಒಪ್ಪದಿದ್ದ ಹಿನ್ನೆಲೆಯಲ್ಲಿ ಕುತ್ತಿಗೆ ಮೇಲೆ […]

ಲೈಂಗಿಕ ಕ್ರಿಯೆಗೆ ಸಹಕರಿಸದ ಚಿಕ್ಕಮ್ಮನನ್ನೇ ಕೊಲೆ ಮಾಡಿದ ಕುಡುಕ!

Updated on: Feb 05, 2020 | 1:03 PM

ಆನೇಕಲ್: ಲೈಂಗಿಕ ಕ್ರಿಯೆಗೆ ಸಹಕರಿಸದ ಕಾರಣ ಚಿಕ್ಕಮ್ಮನನ್ನೇ ಕೊಲೆ ಮಾಡಿರುವ ಘಟನೆ ಆನೇಕಲ್ ತಾಲೂಕಿನ ಬನ್ಮೇರುಘಟ್ಟ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 43 ವರ್ಷದ ಯಶೋಧಾ ಅವರನ್ನು ಆರೋಪಿ ವಿಜಯ್ ಹತ್ಯೆ ಮಾಡಿದ್ದಾನೆ.

ಫೆ.3ರಂದು ರಾತ್ರಿ ಚಿಕ್ಕಮ್ಮನ ಮನೆಗೆ ಆರೋಪಿ ವಿಜಯ್ ಕುಡಿದು ಬಂದಿದ್ದ. ಊಟ ಮಾಡಿದ ಬಳಿಕ ಯಶೋಧಾ ನಿದ್ರೆಗೆ ಜಾರಿದ್ದರು. ಈ ವೇಳೆ, ತನ್ನೊಟ್ಟಿಗೆ ಲೈಂಗಿಕ ಕ್ರಿಯೆಗೆ ಸಹಕರಿಸಲು ಚಿಕ್ಕಮ್ಮನನ್ನು ಆರೋಪಿ ವಿಜಯ್ ಬಲವಂತ ಮಾಡಿದ್ದಾನೆ. ಲೈಂಗಿಕ ಕ್ರಿಯೆಗೆ ಒಪ್ಪದಿದ್ದ ಹಿನ್ನೆಲೆಯಲ್ಲಿ ಕುತ್ತಿಗೆ ಮೇಲೆ ಕಾಲಿಟ್ಟು ಉಸಿರುಗಟ್ಟಿಸಿ ಚಿಕ್ಕಮ್ಮನನ್ನು ಹತ್ಯೆ ಮಾಡಿದ್ದಾನೆ.

ಯಶೋಧಾ ಹತ್ಯೆ ಸಂಬಂಧ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ವಿಜಯ್​ನನ್ನು ಪೊಲೀಸರು ಬಂಧಿಸಿ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

Published On - 12:54 pm, Wed, 5 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us