ಮನೆಯಲ್ಲಿದ್ದವರನ್ನ ಕೂಡಿಹಾಕಿ ಉಸಿರುಗಟ್ಟಿಸಿ ವೃದ್ಧನ ಹತ್ಯೆ

ನೆಲಮಂಗಲ: ಮನೆಯಲ್ಲಿದ್ದವರನ್ನ ಕೂಡಿಹಾಕಿ ಉಸಿರುಗಟ್ಟಿಸಿ ವೃದ್ಧನ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪಟ್ಟಣದ ರೇಣುಕಾನಗರದ ಮನೆಯೊಂದರಲ್ಲಿ ನಡೆದಿದೆ. ವೃದ್ಧ ಶಫಿವುಲ್ಲಾ(60) ಹತ್ಯೆಗೈದು ಆರೋಪಿಗಳು ಪರಾರಿಯಾಗಿದ್ದಾರೆ. ಘಟನೆ ವೇಳೆ ಹೆಂಡತಿ ನಸ್ರೀನ್ ತಾಜ್ ಹಾಗೂ ಮಗಳು ಮುಷ್ಕನ್ ಮನೆಯಲ್ಲೇ ಇದ್ದರು. ಆದರೆ ಇವರಿಬ್ಬರನ್ನು ಅಡುಗೆ ಮನೆಯಲ್ಲಿ ಕೂಡಿಹಾಕಿ ವೃದ್ಧನ ಕೈಕಾಲುಗಳನ್ನ ಬಟ್ಟೆಯಿಂದ ಕಟ್ಟಿ ನಂತರ ಮುಖಕ್ಕೆ ಬಟ್ಟೆಯಿಂದ ಉಸಿರು ಗಟ್ಟಿಸಿ ಕೊಲೆ ಮಾಡಲಾಗಿದೆ. ಕೊಲೆ ಬಳಿಕ ಒಂದು ಲಕ್ಷ ನಗದು ಹಾಗೂ ಮನೆಯಲ್ಲಿದ್ದ ಆಸ್ತಿ […]

ಮನೆಯಲ್ಲಿದ್ದವರನ್ನ ಕೂಡಿಹಾಕಿ ಉಸಿರುಗಟ್ಟಿಸಿ ವೃದ್ಧನ ಹತ್ಯೆ
ಸಾಧು ಶ್ರೀನಾಥ್​

Updated on: Nov 28, 2019 | 7:21 AM

ನೆಲಮಂಗಲ: ಮನೆಯಲ್ಲಿದ್ದವರನ್ನ ಕೂಡಿಹಾಕಿ ಉಸಿರುಗಟ್ಟಿಸಿ ವೃದ್ಧನ ಹತ್ಯೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪಟ್ಟಣದ ರೇಣುಕಾನಗರದ ಮನೆಯೊಂದರಲ್ಲಿ ನಡೆದಿದೆ. ವೃದ್ಧ ಶಫಿವುಲ್ಲಾ(60) ಹತ್ಯೆಗೈದು ಆರೋಪಿಗಳು ಪರಾರಿಯಾಗಿದ್ದಾರೆ.

ಘಟನೆ ವೇಳೆ ಹೆಂಡತಿ ನಸ್ರೀನ್ ತಾಜ್ ಹಾಗೂ ಮಗಳು ಮುಷ್ಕನ್ ಮನೆಯಲ್ಲೇ ಇದ್ದರು. ಆದರೆ ಇವರಿಬ್ಬರನ್ನು ಅಡುಗೆ ಮನೆಯಲ್ಲಿ ಕೂಡಿಹಾಕಿ ವೃದ್ಧನ ಕೈಕಾಲುಗಳನ್ನ ಬಟ್ಟೆಯಿಂದ ಕಟ್ಟಿ ನಂತರ ಮುಖಕ್ಕೆ ಬಟ್ಟೆಯಿಂದ ಉಸಿರು ಗಟ್ಟಿಸಿ ಕೊಲೆ ಮಾಡಲಾಗಿದೆ.

ಕೊಲೆ ಬಳಿಕ ಒಂದು ಲಕ್ಷ ನಗದು ಹಾಗೂ ಮನೆಯಲ್ಲಿದ್ದ ಆಸ್ತಿ ಕಾಗದ ಪತ್ರಗಳನ್ನು ಕದ್ದು ಆರೋಪಿಗಳು ಪರಾರಿಯಾಗಿದ್ದಾರೆ. ಆಸ್ತಿ ವಿವಾಧಕ್ಕೆ ಸಂಬಂಧಿಕರಿಂದಲೇ ಕೊಲೆ‌ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ನೆಲಮಂಗಲ ವೃತ್ತ ನಿರೀಕ್ಷಿಕ ಶಿವಣ್ಣ ಹಾಗೂ ಡಿವೈಎಸ್​ಪಿ ಮೋಹನ್ ಕುಮಾರ್ ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ನೆಲಮಂಗಲ ಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us