AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ದರೋಡೆಕೋರರು ಅರೆಸ್ಟ್

[lazy-load-videos-and-sticky-control id=”2-ATdNH9wgw”]ಬೆಂಗಳೂರು: ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮೀಕಾಂತ್(20), ಆನಂದ್(20), ರಾಕೇಶ್(21) ಬಂಧಿತ ಆರೋಪಿಗಳು. ಮತ್ತಿಬ್ಬರು ಆರೋಪಿಗಳಾದ ಚಂದ್ರಕಾಂತ್, ಸತೀಶ್ ಪರಾರಿಯಾಗಿದ್ದಾರೆ. ಮಂಗಳವಾರ ಬೆಳಗ್ಗೆ 7 ಗಂಟೆ ಸಮಯಕ್ಕೆ ಹೆಸರಘಟ್ಟ ಕೆರೆ ಸಮೀಪ ಈ ಗ್ಯಾಂಗ್ ಮಾರಕಾಸ್ತ್ರಗಳನ್ನು ಹಿಡಿದು ದರೋಡೆಗೆ ನಿಂತಿದ್ದರು. ಈ ವೇಳೆ ಗಸ್ತಿನಲ್ಲಿದ್ದ ಸೋಲದೇವನಹಳ್ಳಿ ಠಾಣೆಯ PSI, ಕಾನ್ಸ್‌ಟೇಬಲ್ ಸ್ಥಳಕ್ಕೆ ತೆರಳಿದ್ರು. ಇವರನ್ನು ಬಂಧಿಸಲು ಮುಂದಾದ್ರು. ಆಗ ಸ್ಥಳಕ್ಕೆ ತೆರಳಿದ್ದ ಪೊಲೀಸರ ಮೇಲೆಯೇ ಲಾಂಗ್, ಡ್ಯಾಗರ್, ಚಾಕು ಹಾಗೂ ದೊಣ್ಣೆಗಳನ್ನು […]

ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ದರೋಡೆಕೋರರು ಅರೆಸ್ಟ್
ಆಯೇಷಾ ಬಾನು
| Edited By: |

Updated on:Jul 09, 2020 | 12:50 PM

Share

[lazy-load-videos-and-sticky-control id=”2-ATdNH9wgw”]ಬೆಂಗಳೂರು: ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ದರೋಡೆಕೋರರನ್ನು ಪೊಲೀಸರು ಬಂಧಿಸಿದ್ದಾರೆ. ಲಕ್ಷ್ಮೀಕಾಂತ್(20), ಆನಂದ್(20), ರಾಕೇಶ್(21) ಬಂಧಿತ ಆರೋಪಿಗಳು. ಮತ್ತಿಬ್ಬರು ಆರೋಪಿಗಳಾದ ಚಂದ್ರಕಾಂತ್, ಸತೀಶ್ ಪರಾರಿಯಾಗಿದ್ದಾರೆ.

ಮಂಗಳವಾರ ಬೆಳಗ್ಗೆ 7 ಗಂಟೆ ಸಮಯಕ್ಕೆ ಹೆಸರಘಟ್ಟ ಕೆರೆ ಸಮೀಪ ಈ ಗ್ಯಾಂಗ್ ಮಾರಕಾಸ್ತ್ರಗಳನ್ನು ಹಿಡಿದು ದರೋಡೆಗೆ ನಿಂತಿದ್ದರು. ಈ ವೇಳೆ ಗಸ್ತಿನಲ್ಲಿದ್ದ ಸೋಲದೇವನಹಳ್ಳಿ ಠಾಣೆಯ PSI, ಕಾನ್ಸ್‌ಟೇಬಲ್ ಸ್ಥಳಕ್ಕೆ ತೆರಳಿದ್ರು. ಇವರನ್ನು ಬಂಧಿಸಲು ಮುಂದಾದ್ರು. ಆಗ ಸ್ಥಳಕ್ಕೆ ತೆರಳಿದ್ದ ಪೊಲೀಸರ ಮೇಲೆಯೇ ಲಾಂಗ್, ಡ್ಯಾಗರ್, ಚಾಕು ಹಾಗೂ ದೊಣ್ಣೆಗಳನ್ನು ಹಿಡಿದಿದ್ದ ಈ ಗ್ಯಾಂಗ್ ಹಲ್ಲೆಗೆ ಯತ್ನಿಸಿದೆ.

PSI ವಸಂತ್ ಕುಮಾರ್ ಮತ್ತು ಪೇದೆ ಇಮಾಮ್ ಸಾಬ್ ಮೇಲೆ ಹಲ್ಲೆಗೆ ಮುಂದಾಗಿದೆ. ಆರೋಪಿ ಆನಂದ್ ಎಂಬಾತ ಕಾನ್ಸ್‌ಟೇಬಲ್ ಇಮಾಮ್ ಸಾಬ್ ಮೇಲೆ ಲಾಂಗ್ ಬೀಸಿದ್ದ. ಅದೃಷ್ಟವಶಾತ್ ಕಾನ್ಸ್‌ಟೇಬಲ್ ಬಚಾವ್ ಆಗಿದ್ದಾರೆ. ನಂತರ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 7:35 am, Thu, 9 July 20

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ