AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Supari Killing | 100 ಕೋಟಿ ಮೌಲ್ಯದ ಆಸ್ತಿಗಾಗಿ ತಂದೆಯನ್ನೇ ಕೊಲೆ ಮಾಡಿಸಿದ ಮಗ, ಸಹೋದರ ಅರೆಸ್ಟ್

100 ಕೋಟಿ ಮೌಲ್ಯದ ಆಸ್ತಿಗಾಗಿ ಮಗನೇ ಅಪ್ಪನ ಹತ್ಯೆಗೆ ಸುಪಾರಿ ನೀಡಿ ಅಪ್ಪನನ್ನ ಕೊಲೆ ಮಾಡಿಸಿ ತಲೆಮರೆಸಿಕೊಂಡಿದ್ದ ಘಟನೆ ನಡೆದಿದ್ದು ಪಾಪಿ ಪುತ್ರನನ್ನು ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ.

Supari Killing | 100 ಕೋಟಿ ಮೌಲ್ಯದ ಆಸ್ತಿಗಾಗಿ ತಂದೆಯನ್ನೇ ಕೊಲೆ ಮಾಡಿಸಿದ ಮಗ, ಸಹೋದರ ಅರೆಸ್ಟ್
ಆರೋಪಿ ಹರಿಕೃಷ್ಣ, ಆರೋಪಿ ಶಿವರಾಮ್ ಪ್ರಸಾದ್ ಹಾಗೂ ಕೊಲೆಯಾದ ಮಾಧವ್
ಆಯೇಷಾ ಬಾನು
| Edited By: |

Updated on:Feb 16, 2021 | 9:03 AM

Share

ಬೆಂಗಳೂರು: 100 ಕೋಟಿ ಮೌಲ್ಯದ ಆಸ್ತಿಗಾಗಿ ಮಗನೇ ಅಪ್ಪನ ಹತ್ಯೆಗೆ ಸುಪಾರಿ ನೀಡಿ ಅಪ್ಪನನ್ನ ಕೊಲೆ ಮಾಡಿಸಿ ತಲೆಮರೆಸಿಕೊಂಡಿದ್ದ ಘಟನೆ ನಡೆದಿದ್ದು ಪಾಪಿ ಪುತ್ರನನ್ನು ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣ ಸಂಬಂಧ ವರ್ಷದ ಬಳಿಕ ಇಬ್ಬರು ಮಾಸ್ಟರ್‌ಮೈಂಡ್‌ಗಳ ಬಂಧನವಾಗಿದೆ. ಬಳ್ಳಾರಿ ಮೂಲದ ಹರಿಕೃಷ್ಣ ಹಾಗೂ ಶಿವರಾಮ್ ಪ್ರಸಾದ್ ಬಂಧಿತರು. ಈ ಘಟನೆ ನಡೆದಿದ್ದು 2020ರ ಫೆಬ್ರವರಿ 14ರಂದು. ಬರೊಬ್ಬರಿ ವರ್ಷದ ಬಳಿಕ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.

ತಂದೆ ಮಾಧವ್ ಹತ್ಯೆಗೆ ಪುತ್ರ ಹರಿಕೃಷ್ಣ ಸುಪಾರಿ ನೀಡಿದ್ದ. ಅದರಂತೆ 2020ರ ಫೆಬ್ರವರಿ 14ರಂದು ಬೆಂಗಳೂರಿನ ಗುಬ್ಬಲಾಳ ರಸ್ತೆಯಲ್ಲಿ ಮಾಧವ್ ಎಂಬುವವರ ಕೊಲೆಯಾಗಿತ್ತು. ಹಂತಕರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಆಸ್ತಿಗಾಗಿ ತಂದೆಯ ಹತ್ಯೆಗೆ ಮಗ ಹರಿಕೃಷ್ಣ 25 ಲಕ್ಷ ಸುಪಾರಿ ನೀಡಿದ್ದ. ಇನ್ನು ಹರಿಕೃಷ್ಣನ ಈ ಕೃತ್ಯಕ್ಕೆ ಆತನ ಚಿಕ್ಕಪ್ಪ ಶಿವರಾಮ್ ಪ್ರಸಾದ್ ಕೂಡ ಸಾಥ್ ನೀಡಿದ್ದ. ಇವರಿಬ್ಬರು ಸೇರಿಕೊಂಡು ಮಾಧವ್ ಕೊಲೆ ಮಾಡಿಸಿದ್ದರು. ಹತ್ಯೆ ಬಳಿಕ ಐವರು ಆರೋಪಿಗಳನ್ನ ತಲಘಟ್ಟಪುರ ಪೊಲೀಸರು ಕಳೆದ ವರ್ಷವೇ ಬಂಧಿಸಿದ್ದರು. ರಿಯಾಜ್ ಅಹಮದ್, ಶಾರುಖ್ ಖಾನ್, ಸೈಯ್ಯದ್ ಸಲ್ಮಾನ್, ಆದಿಲ್‌ ಖಾನ್, ಷಹಬಾಜ್ ನಜೀರ್ ಬಂಧಿತ ಆರೋಪಿಗಳು. ಆದ್ರೆ ಕೊಲೆ ಹಿಂದಿದ್ದ ಮಾಸ್ಟರ್‌ಮೈಂಡ್‌ಗಳು ಒಂದು ವರ್ಷದ ಬಳಿಕ ಸಿಕ್ಕಿಬಿದ್ದಿದ್ದಾರೆ. ಮಾಧವ್ ಸಹೋದರ ಶಿವರಾಮ್ ಪ್ರಸಾದ್ ಮತ್ತು ಪುತ್ರ ಹರಿಕೃಷ್ಣನನ್ನು ಬಂಧಿಸಲಾಗಿದೆ.

ಕೊಲೆಯಾದ ಮಾಧವ್ ಗಣಿಗಾರಿಕಾ ಉದ್ಯಮಿಯಾಗಿದ್ದ. 100 ಕೋಟಿ ಬೆಲೆ ಬಾಳುವ ಬಳ್ಳಾರಿ ಸ್ಟೀಲ್ & ಅಲಾಯ್ ಲಿಮಿಟೆಡ್ ಕಂಪನಿಗಳಿಗೆ ಮಾಲೀಕನಾಗಿದ್ದ. ಮೈನಿಂಗ್ ಸ್ಥಗಿತವಾಗಿದ್ದರಿಂದ ನಷ್ಟ ಅನುಭವಿಸಿದ್ದ. ಆಸ್ತಿ ಮಾರಾಟ ಮಾಡುವಂತೆ ಮಾಧವ್​ಗೆ ಮಗ ಹಾಗೂ ಸಹೋದರ ಸೂಚಿಸಿದ್ದರಂತೆ. ಸಲಹೆಯನ್ನ ತಳ್ಳಿ ಹಾಕಿದಾಗ ಮಾಧವ್ ಹತ್ಯೆಗೆ ಆರೋಪಿಗಳು ನಿರಂತರ ಪ್ರಯತ್ನ ನಡೆಸಿದ್ದು ಸುಪಾರಿ ಹಂತಕರ ನೆರವಿನಿಂದ ಮಾಧವ್ ಕೊಲೆ ಮಾಡಿಸಿದ್ದರು.

ಇದನ್ನೂ ಓದಿ: ಆಸ್ತಿಗಾಗಿ.. ಅಪ್ಪನ ಸಾವಿಗೆ ಕಾರಣನಾದ ಅಣ್ಣನನ್ನು ಕತ್ತು ಹಿಸುಕಿ ಕೊಲೆ ಮಾಡಿದ ತಮ್ಮ

Published On - 7:58 am, Tue, 16 February 21

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!