Sign In

By signing in or creating an account, you agree with Associated Broadcasting Company's Terms & Conditions and Privacy Policy.

Supari Killing | 100 ಕೋಟಿ ಮೌಲ್ಯದ ಆಸ್ತಿಗಾಗಿ ತಂದೆಯನ್ನೇ ಕೊಲೆ ಮಾಡಿಸಿದ ಮಗ, ಸಹೋದರ ಅರೆಸ್ಟ್

100 ಕೋಟಿ ಮೌಲ್ಯದ ಆಸ್ತಿಗಾಗಿ ಮಗನೇ ಅಪ್ಪನ ಹತ್ಯೆಗೆ ಸುಪಾರಿ ನೀಡಿ ಅಪ್ಪನನ್ನ ಕೊಲೆ ಮಾಡಿಸಿ ತಲೆಮರೆಸಿಕೊಂಡಿದ್ದ ಘಟನೆ ನಡೆದಿದ್ದು ಪಾಪಿ ಪುತ್ರನನ್ನು ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ.

Supari Killing | 100 ಕೋಟಿ ಮೌಲ್ಯದ ಆಸ್ತಿಗಾಗಿ ತಂದೆಯನ್ನೇ ಕೊಲೆ ಮಾಡಿಸಿದ ಮಗ, ಸಹೋದರ ಅರೆಸ್ಟ್
ಆರೋಪಿ ಹರಿಕೃಷ್ಣ, ಆರೋಪಿ ಶಿವರಾಮ್ ಪ್ರಸಾದ್ ಹಾಗೂ ಕೊಲೆಯಾದ ಮಾಧವ್
Follow us
ಆಯೇಷಾ ಬಾನು
| Updated By: Digi Tech Desk

Updated on:Feb 16, 2021 | 9:03 AM

ಬೆಂಗಳೂರು: 100 ಕೋಟಿ ಮೌಲ್ಯದ ಆಸ್ತಿಗಾಗಿ ಮಗನೇ ಅಪ್ಪನ ಹತ್ಯೆಗೆ ಸುಪಾರಿ ನೀಡಿ ಅಪ್ಪನನ್ನ ಕೊಲೆ ಮಾಡಿಸಿ ತಲೆಮರೆಸಿಕೊಂಡಿದ್ದ ಘಟನೆ ನಡೆದಿದ್ದು ಪಾಪಿ ಪುತ್ರನನ್ನು ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣ ಸಂಬಂಧ ವರ್ಷದ ಬಳಿಕ ಇಬ್ಬರು ಮಾಸ್ಟರ್‌ಮೈಂಡ್‌ಗಳ ಬಂಧನವಾಗಿದೆ. ಬಳ್ಳಾರಿ ಮೂಲದ ಹರಿಕೃಷ್ಣ ಹಾಗೂ ಶಿವರಾಮ್ ಪ್ರಸಾದ್ ಬಂಧಿತರು. ಈ ಘಟನೆ ನಡೆದಿದ್ದು 2020ರ ಫೆಬ್ರವರಿ 14ರಂದು. ಬರೊಬ್ಬರಿ ವರ್ಷದ ಬಳಿಕ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.

ತಂದೆ ಮಾಧವ್ ಹತ್ಯೆಗೆ ಪುತ್ರ ಹರಿಕೃಷ್ಣ ಸುಪಾರಿ ನೀಡಿದ್ದ. ಅದರಂತೆ 2020ರ ಫೆಬ್ರವರಿ 14ರಂದು ಬೆಂಗಳೂರಿನ ಗುಬ್ಬಲಾಳ ರಸ್ತೆಯಲ್ಲಿ ಮಾಧವ್ ಎಂಬುವವರ ಕೊಲೆಯಾಗಿತ್ತು. ಹಂತಕರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಆಸ್ತಿಗಾಗಿ ತಂದೆಯ ಹತ್ಯೆಗೆ ಮಗ ಹರಿಕೃಷ್ಣ 25 ಲಕ್ಷ ಸುಪಾರಿ ನೀಡಿದ್ದ. ಇನ್ನು ಹರಿಕೃಷ್ಣನ ಈ ಕೃತ್ಯಕ್ಕೆ ಆತನ ಚಿಕ್ಕಪ್ಪ ಶಿವರಾಮ್ ಪ್ರಸಾದ್ ಕೂಡ ಸಾಥ್ ನೀಡಿದ್ದ. ಇವರಿಬ್ಬರು ಸೇರಿಕೊಂಡು ಮಾಧವ್ ಕೊಲೆ ಮಾಡಿಸಿದ್ದರು. ಹತ್ಯೆ ಬಳಿಕ ಐವರು ಆರೋಪಿಗಳನ್ನ ತಲಘಟ್ಟಪುರ ಪೊಲೀಸರು ಕಳೆದ ವರ್ಷವೇ ಬಂಧಿಸಿದ್ದರು. ರಿಯಾಜ್ ಅಹಮದ್, ಶಾರುಖ್ ಖಾನ್, ಸೈಯ್ಯದ್ ಸಲ್ಮಾನ್, ಆದಿಲ್‌ ಖಾನ್, ಷಹಬಾಜ್ ನಜೀರ್ ಬಂಧಿತ ಆರೋಪಿಗಳು. ಆದ್ರೆ ಕೊಲೆ ಹಿಂದಿದ್ದ ಮಾಸ್ಟರ್‌ಮೈಂಡ್‌ಗಳು ಒಂದು ವರ್ಷದ ಬಳಿಕ ಸಿಕ್ಕಿಬಿದ್ದಿದ್ದಾರೆ. ಮಾಧವ್ ಸಹೋದರ ಶಿವರಾಮ್ ಪ್ರಸಾದ್ ಮತ್ತು ಪುತ್ರ ಹರಿಕೃಷ್ಣನನ್ನು ಬಂಧಿಸಲಾಗಿದೆ.

ಕೊಲೆಯಾದ ಮಾಧವ್ ಗಣಿಗಾರಿಕಾ ಉದ್ಯಮಿಯಾಗಿದ್ದ. 100 ಕೋಟಿ ಬೆಲೆ ಬಾಳುವ ಬಳ್ಳಾರಿ ಸ್ಟೀಲ್ & ಅಲಾಯ್ ಲಿಮಿಟೆಡ್ ಕಂಪನಿಗಳಿಗೆ ಮಾಲೀಕನಾಗಿದ್ದ. ಮೈನಿಂಗ್ ಸ್ಥಗಿತವಾಗಿದ್ದರಿಂದ ನಷ್ಟ ಅನುಭವಿಸಿದ್ದ. ಆಸ್ತಿ ಮಾರಾಟ ಮಾಡುವಂತೆ ಮಾಧವ್​ಗೆ ಮಗ ಹಾಗೂ ಸಹೋದರ ಸೂಚಿಸಿದ್ದರಂತೆ. ಸಲಹೆಯನ್ನ ತಳ್ಳಿ ಹಾಕಿದಾಗ ಮಾಧವ್ ಹತ್ಯೆಗೆ ಆರೋಪಿಗಳು ನಿರಂತರ ಪ್ರಯತ್ನ ನಡೆಸಿದ್ದು ಸುಪಾರಿ ಹಂತಕರ ನೆರವಿನಿಂದ ಮಾಧವ್ ಕೊಲೆ ಮಾಡಿಸಿದ್ದರು.

ಇದನ್ನೂ ಓದಿ: ಆಸ್ತಿಗಾಗಿ.. ಅಪ್ಪನ ಸಾವಿಗೆ ಕಾರಣನಾದ ಅಣ್ಣನನ್ನು ಕತ್ತು ಹಿಸುಕಿ ಕೊಲೆ ಮಾಡಿದ ತಮ್ಮ

Published On - 7:58 am, Tue, 16 February 21

ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು