AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿಗಾಗಿ ಸಿರಿವಂತ ಅಪ್ಪನ ಹತ್ಯೆ ಮಾಡಿಸಿದ ಮಗ-ಚಿಕ್ಕಪ್ಪ ಜೋಡಿ ಇನ್ನೂ ನಾಪತ್ತೆ

ಬೆಂಗಳೂರು: ಆಸ್ತಿ ವಿಚಾರಕ್ಕೆ ಸ್ವಂತ ತಮ್ಮ ಹಾಗೂ ಮಗನೇ ತಂದೆಯ ಕೊಲೆ ಮಾಡಿ ತಲೆ ಮರಿಸಿಕೊಂಡಿದ್ದವರನ್ನ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಫೆಬ್ರವರಿ 14 ರಂದು ತಲಘಟ್ಟಪುರ ಠಾಣಾ ವ್ಯಾಪ್ತಿಯ ಗುಬ್ಬಲಾಳ ಬಳಿ ನಡೆದಿತ್ತು. ಬಳ್ಳಾರಿಯಲ್ಲಿ 100 ಕೋಟಿ ಮೌಲ್ಯದ ಗಣಿ ಭೂಮಿ ಹೊಂದಿದ್ದ ಮಾಧವನನ್ನು ಕೊಲೆ ಮಾಡಲು ಸ್ವಂತ ಮಗ ಹಾಗೂ ತಮ್ಮನೇ ಮುಹೂರ್ತ ಫಿಕ್ಸ್ ಮಾಡಿದ್ರು. ನೂರು ಕೋಟಿ ರೂ. ಮೌಲ್ಯದ 2 ಸಾವಿರ ಎಕರೆ ಗಣಿ ಆಸ್ತಿಯನ್ನು ತಮ್ಮದಾಗಿಸಿಕೊಳ್ಳಲು ಚಿಕ್ಕಪ್ಪನ ಜತೆ ಸೇರಿ […]

ಆಸ್ತಿಗಾಗಿ ಸಿರಿವಂತ ಅಪ್ಪನ ಹತ್ಯೆ ಮಾಡಿಸಿದ ಮಗ-ಚಿಕ್ಕಪ್ಪ ಜೋಡಿ ಇನ್ನೂ ನಾಪತ್ತೆ
ಆಯೇಷಾ ಬಾನು
| Edited By: |

Updated on:Jun 20, 2020 | 8:50 AM

Share

ಬೆಂಗಳೂರು: ಆಸ್ತಿ ವಿಚಾರಕ್ಕೆ ಸ್ವಂತ ತಮ್ಮ ಹಾಗೂ ಮಗನೇ ತಂದೆಯ ಕೊಲೆ ಮಾಡಿ ತಲೆ ಮರಿಸಿಕೊಂಡಿದ್ದವರನ್ನ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಫೆಬ್ರವರಿ 14 ರಂದು ತಲಘಟ್ಟಪುರ ಠಾಣಾ ವ್ಯಾಪ್ತಿಯ ಗುಬ್ಬಲಾಳ ಬಳಿ ನಡೆದಿತ್ತು. ಬಳ್ಳಾರಿಯಲ್ಲಿ 100 ಕೋಟಿ ಮೌಲ್ಯದ ಗಣಿ ಭೂಮಿ ಹೊಂದಿದ್ದ ಮಾಧವನನ್ನು ಕೊಲೆ ಮಾಡಲು ಸ್ವಂತ ಮಗ ಹಾಗೂ ತಮ್ಮನೇ ಮುಹೂರ್ತ ಫಿಕ್ಸ್ ಮಾಡಿದ್ರು.

ನೂರು ಕೋಟಿ ರೂ. ಮೌಲ್ಯದ 2 ಸಾವಿರ ಎಕರೆ ಗಣಿ ಆಸ್ತಿಯನ್ನು ತಮ್ಮದಾಗಿಸಿಕೊಳ್ಳಲು ಚಿಕ್ಕಪ್ಪನ ಜತೆ ಸೇರಿ ಹೆತ್ತ ತಂದೆಯ ಕೊಲೆಗೆ ಸುಪಾರಿ ಕೊಟ್ಟಿದ್ದ ಪುತ್ರನ ಕುತಂತ್ರವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಹಾಗೂ ಪ್ರಕರಣ ಸಂಬಂಧಿಸಿ ಐವರು ಸುಪಾರಿ ಹಂತಕರನ್ನು ತಲಘಟ್ಟಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಜೋಡಿ ಸೂತ್ರಧಾರರಿಬ್ಬರೂ ಇನ್ನೂ ಪೊಲೀಸರಿಗೆ ಸಿಕ್ಕಿಲ್ಲ..  ಬಳ್ಳಾರಿಯಲ್ಲಿ 100 ಕೋಟಿ ಮೌಲ್ಯದ ಗಣಿ ಭೂಮಿಯನ್ನು ಮಾರಾಟ ಮಾಡುವಂತೆ ಮಗ ಹರಿಕೃಷ್ಣ ಹಾಗೂ ತಮ್ಮ ಶಿವರಾಂ ಪ್ರಸಾದ್ ಬೆದರಿಕೆ ಹಾಕಿದ್ರು. ಒಪ್ಪದಿದ್ದಾಗ 25 ಲಕ್ಷ ಸುಪಾರಿ ನೀಡಿ 3 ಬಾರಿ ಕೊಲೆ ಯತ್ನ ನಡೆಸಿದ್ರು. ಮೂರು ಬಾರಿ ಸ್ಕೆಚ್ ಮಿಸ್ ಆಗಿ ನಾಲ್ಕನೇ ಬಾರಿ ಕತ್ತು ಸೀಳಿ ಕಿಡಿಗೇಡಿಗಳು ಕೊಲೆ ಮಾಡಿದ್ರು. ಪ್ರಮುಖ ಆರೋಪಿಗಳಾದ ಹರಿಕೃಷ್ಣ ಮತ್ತು ಶಿವರಾಂ ಪ್ರಸಾದ್ ಎಸ್ಕೇಪ್ ಆಗಿದ್ದಾರೆ. ಅವರ ಬಂಧನಕ್ಕೆ ಬೆಂಗಳೂರು ಪೊಲೀಸರು ಬಲೆ ಬೀಸಿದ್ದಾರೆ.

ಸುಪಾರಿ ಪಡೆದು ಕೊಲೆ ಮಾಡಿದ್ದ 5 ಆರೋಪಿಗಳಾದ ರಿಯಾಜ್ ಅಹಮ್ಮದ್, ಶಾರುಕ್ ಖಾನ್, ಸೈಯದ್ ಸಲ್ಮಾನ್, ಆದಿಲ್ ಖಾನ್, ಶಾಬಾಜ್ ನಜೀರ್ ಬಂಧಿತರು. ಇವರಲ್ಲಿ ಇಬ್ಬರು ಆರೋಪಿಗಳು ಗೋವಾದಲ್ಲಿ ತಲೆ ಮರೆಸಿಕೊಂಡಿದ್ದರು. ಇನ್ನುಳಿದ ಆರೋಪಿಗಳು ಬೆಂಗಳೂರಲ್ಲೇ ಬಚ್ಚಿಟ್ಟುಕೊಂಡಿದ್ದರು.

Published On - 7:13 am, Sat, 20 June 20

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ