AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ತಿಗಾಗಿ ಸಿರಿವಂತ ಅಪ್ಪನ ಹತ್ಯೆ ಮಾಡಿಸಿದ ಮಗ-ಚಿಕ್ಕಪ್ಪ ಜೋಡಿ ಇನ್ನೂ ನಾಪತ್ತೆ

ಬೆಂಗಳೂರು: ಆಸ್ತಿ ವಿಚಾರಕ್ಕೆ ಸ್ವಂತ ತಮ್ಮ ಹಾಗೂ ಮಗನೇ ತಂದೆಯ ಕೊಲೆ ಮಾಡಿ ತಲೆ ಮರಿಸಿಕೊಂಡಿದ್ದವರನ್ನ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಫೆಬ್ರವರಿ 14 ರಂದು ತಲಘಟ್ಟಪುರ ಠಾಣಾ ವ್ಯಾಪ್ತಿಯ ಗುಬ್ಬಲಾಳ ಬಳಿ ನಡೆದಿತ್ತು. ಬಳ್ಳಾರಿಯಲ್ಲಿ 100 ಕೋಟಿ ಮೌಲ್ಯದ ಗಣಿ ಭೂಮಿ ಹೊಂದಿದ್ದ ಮಾಧವನನ್ನು ಕೊಲೆ ಮಾಡಲು ಸ್ವಂತ ಮಗ ಹಾಗೂ ತಮ್ಮನೇ ಮುಹೂರ್ತ ಫಿಕ್ಸ್ ಮಾಡಿದ್ರು. ನೂರು ಕೋಟಿ ರೂ. ಮೌಲ್ಯದ 2 ಸಾವಿರ ಎಕರೆ ಗಣಿ ಆಸ್ತಿಯನ್ನು ತಮ್ಮದಾಗಿಸಿಕೊಳ್ಳಲು ಚಿಕ್ಕಪ್ಪನ ಜತೆ ಸೇರಿ […]

ಆಸ್ತಿಗಾಗಿ ಸಿರಿವಂತ ಅಪ್ಪನ ಹತ್ಯೆ ಮಾಡಿಸಿದ ಮಗ-ಚಿಕ್ಕಪ್ಪ ಜೋಡಿ ಇನ್ನೂ ನಾಪತ್ತೆ
ಆಯೇಷಾ ಬಾನು
| Edited By: |

Updated on:Jun 20, 2020 | 8:50 AM

Share

ಬೆಂಗಳೂರು: ಆಸ್ತಿ ವಿಚಾರಕ್ಕೆ ಸ್ವಂತ ತಮ್ಮ ಹಾಗೂ ಮಗನೇ ತಂದೆಯ ಕೊಲೆ ಮಾಡಿ ತಲೆ ಮರಿಸಿಕೊಂಡಿದ್ದವರನ್ನ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಫೆಬ್ರವರಿ 14 ರಂದು ತಲಘಟ್ಟಪುರ ಠಾಣಾ ವ್ಯಾಪ್ತಿಯ ಗುಬ್ಬಲಾಳ ಬಳಿ ನಡೆದಿತ್ತು. ಬಳ್ಳಾರಿಯಲ್ಲಿ 100 ಕೋಟಿ ಮೌಲ್ಯದ ಗಣಿ ಭೂಮಿ ಹೊಂದಿದ್ದ ಮಾಧವನನ್ನು ಕೊಲೆ ಮಾಡಲು ಸ್ವಂತ ಮಗ ಹಾಗೂ ತಮ್ಮನೇ ಮುಹೂರ್ತ ಫಿಕ್ಸ್ ಮಾಡಿದ್ರು.

ನೂರು ಕೋಟಿ ರೂ. ಮೌಲ್ಯದ 2 ಸಾವಿರ ಎಕರೆ ಗಣಿ ಆಸ್ತಿಯನ್ನು ತಮ್ಮದಾಗಿಸಿಕೊಳ್ಳಲು ಚಿಕ್ಕಪ್ಪನ ಜತೆ ಸೇರಿ ಹೆತ್ತ ತಂದೆಯ ಕೊಲೆಗೆ ಸುಪಾರಿ ಕೊಟ್ಟಿದ್ದ ಪುತ್ರನ ಕುತಂತ್ರವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಹಾಗೂ ಪ್ರಕರಣ ಸಂಬಂಧಿಸಿ ಐವರು ಸುಪಾರಿ ಹಂತಕರನ್ನು ತಲಘಟ್ಟಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಜೋಡಿ ಸೂತ್ರಧಾರರಿಬ್ಬರೂ ಇನ್ನೂ ಪೊಲೀಸರಿಗೆ ಸಿಕ್ಕಿಲ್ಲ..  ಬಳ್ಳಾರಿಯಲ್ಲಿ 100 ಕೋಟಿ ಮೌಲ್ಯದ ಗಣಿ ಭೂಮಿಯನ್ನು ಮಾರಾಟ ಮಾಡುವಂತೆ ಮಗ ಹರಿಕೃಷ್ಣ ಹಾಗೂ ತಮ್ಮ ಶಿವರಾಂ ಪ್ರಸಾದ್ ಬೆದರಿಕೆ ಹಾಕಿದ್ರು. ಒಪ್ಪದಿದ್ದಾಗ 25 ಲಕ್ಷ ಸುಪಾರಿ ನೀಡಿ 3 ಬಾರಿ ಕೊಲೆ ಯತ್ನ ನಡೆಸಿದ್ರು. ಮೂರು ಬಾರಿ ಸ್ಕೆಚ್ ಮಿಸ್ ಆಗಿ ನಾಲ್ಕನೇ ಬಾರಿ ಕತ್ತು ಸೀಳಿ ಕಿಡಿಗೇಡಿಗಳು ಕೊಲೆ ಮಾಡಿದ್ರು. ಪ್ರಮುಖ ಆರೋಪಿಗಳಾದ ಹರಿಕೃಷ್ಣ ಮತ್ತು ಶಿವರಾಂ ಪ್ರಸಾದ್ ಎಸ್ಕೇಪ್ ಆಗಿದ್ದಾರೆ. ಅವರ ಬಂಧನಕ್ಕೆ ಬೆಂಗಳೂರು ಪೊಲೀಸರು ಬಲೆ ಬೀಸಿದ್ದಾರೆ.

ಸುಪಾರಿ ಪಡೆದು ಕೊಲೆ ಮಾಡಿದ್ದ 5 ಆರೋಪಿಗಳಾದ ರಿಯಾಜ್ ಅಹಮ್ಮದ್, ಶಾರುಕ್ ಖಾನ್, ಸೈಯದ್ ಸಲ್ಮಾನ್, ಆದಿಲ್ ಖಾನ್, ಶಾಬಾಜ್ ನಜೀರ್ ಬಂಧಿತರು. ಇವರಲ್ಲಿ ಇಬ್ಬರು ಆರೋಪಿಗಳು ಗೋವಾದಲ್ಲಿ ತಲೆ ಮರೆಸಿಕೊಂಡಿದ್ದರು. ಇನ್ನುಳಿದ ಆರೋಪಿಗಳು ಬೆಂಗಳೂರಲ್ಲೇ ಬಚ್ಚಿಟ್ಟುಕೊಂಡಿದ್ದರು.

Published On - 7:13 am, Sat, 20 June 20

Follow Us
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ