ದಂಪತಿ ಜಗಳ ಬಿಡಿಸಲು ಬಂದ ಮಾವನನ್ನೇ ಹತ್ಯೆ ಮಾಡಿದ ಅಳಿಯ!

ಮೈಸೂರು: ದಂಪತಿ ಮಧ್ಯೆ ಜಗಳ ತಾರಕಕ್ಕೇರಿ ಪತ್ನಿಯನ್ನು ಹತ್ಯೆ ಮಾಡಲು ಮುಂದಾದ ವೇಳೆ ಅಡ್ಡಬಂದ ಮಾವನನ್ನೇ ಅಳಿಯ ಕೊಲೆ ಮಾಡಿರುವ ಘಟನೆ ಗೌಸಿಯಾನಗರದಲ್ಲಿ ನಡೆದಿದೆ. ಸಲೀಂ(50) ಮೃತ ದುರ್ದೈವಿ. ಪತ್ನಿ ಹಸೀನಾ ಮೇಲೆ ಪತಿ ನದೀಂ ಅಹ್ಮದ್ ಖಾನ್ ಅನುಮಾನ ಪಡುತ್ತಿದ್ದ. ಆಗಾಗ ದಂಪತಿ ನಡುವೆ ಜಗಳವಾಗುತ್ತಿತ್ತು. ನಿನ್ನೆ ದಂಪತಿ ನಡುವೆ ಜಗಳ ತಾರಕಕ್ಕೇರಿ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಲು ನದೀಂ ಮುಂದಾಗಿದ್ದಾನೆ. ಈ ವೇಳೆ ಜಗಳ ಬಿಡಿಸಲು ಬಂದ ಮಾವ ಸಲೀಂಗೆ ಅಳಿಯ ಚಾಕುವಿನಿಂದ […]

ದಂಪತಿ ಜಗಳ ಬಿಡಿಸಲು ಬಂದ ಮಾವನನ್ನೇ ಹತ್ಯೆ ಮಾಡಿದ ಅಳಿಯ!
ಸಾಧು ಶ್ರೀನಾಥ್​

Updated on: Feb 12, 2020 | 7:17 AM

ಮೈಸೂರು: ದಂಪತಿ ಮಧ್ಯೆ ಜಗಳ ತಾರಕಕ್ಕೇರಿ ಪತ್ನಿಯನ್ನು ಹತ್ಯೆ ಮಾಡಲು ಮುಂದಾದ ವೇಳೆ ಅಡ್ಡಬಂದ ಮಾವನನ್ನೇ ಅಳಿಯ ಕೊಲೆ ಮಾಡಿರುವ ಘಟನೆ ಗೌಸಿಯಾನಗರದಲ್ಲಿ ನಡೆದಿದೆ. ಸಲೀಂ(50) ಮೃತ ದುರ್ದೈವಿ.

ಪತ್ನಿ ಹಸೀನಾ ಮೇಲೆ ಪತಿ ನದೀಂ ಅಹ್ಮದ್ ಖಾನ್ ಅನುಮಾನ ಪಡುತ್ತಿದ್ದ. ಆಗಾಗ ದಂಪತಿ ನಡುವೆ ಜಗಳವಾಗುತ್ತಿತ್ತು. ನಿನ್ನೆ ದಂಪತಿ ನಡುವೆ ಜಗಳ ತಾರಕಕ್ಕೇರಿ ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಲು ನದೀಂ ಮುಂದಾಗಿದ್ದಾನೆ. ಈ ವೇಳೆ ಜಗಳ ಬಿಡಿಸಲು ಬಂದ ಮಾವ ಸಲೀಂಗೆ ಅಳಿಯ ಚಾಕುವಿನಿಂದ ಇರಿದಿದ್ದಾನೆ.

ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಸಲೀಂನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಲೀಂ ಮೃತಪಟ್ಟಿದ್ದಾರೆ. ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆರೋಪಿ ನದೀಂಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

Published On - 7:15 am, Wed, 12 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us