AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನ: ಕೌಟುಂಬಿಕ ಕಲಹ, ಚಾಕುವಿನಿಂದ ಇರಿದು ಸೋದರ ಮಾವನನ್ನೇ ಕೊಲೆಗೈದ ಅಳಿಯ

ಅರಸೀಕೆರೆ ತಾಲೂಕಿನ ಗಂಜಿಗೆರೆ ಗ್ರಾಮದ ಸಾವಿತ್ರಮ್ಮ ಎಂಬುವರು ಏಳು ವರ್ಷದ ಹಿಂದೆ ಪತಿಯನ್ನು ಬಿಟ್ಟು ತವರು ಮನೆ ಸೇರಿದ್ದಾರೆ. ಸಾವಿತ್ರಮ್ಮ ಮತ್ತು ಅಣ್ಣ ಪ್ರಭುಸ್ವಾಮಿ ಅಕ್ಕಪಕ್ಕದ ಮನೆಯಲ್ಲಿ ವಾಸವಾಗಿದ್ದರು. ಪ್ರಭುಸ್ವಾಮಿ ಜಮೀನು ವಿಚಾರವಾಗಿ ಆಗಾಗ್ಗೆ ತಂಗಿ ಜೊತೆ ಜಗಳವಾಡುತ್ತಿದ್ದರು.

ಹಾಸನ: ಕೌಟುಂಬಿಕ ಕಲಹ, ಚಾಕುವಿನಿಂದ ಇರಿದು ಸೋದರ ಮಾವನನ್ನೇ ಕೊಲೆಗೈದ ಅಳಿಯ
ಸಾಂದರ್ಭಿಕ ಚಿತ್ರ
ಮಂಜುನಾಥ ಕೆಬಿ
| Updated By: ವಿವೇಕ ಬಿರಾದಾರ|

Updated on:Nov 02, 2023 | 8:27 AM

Share

ಹಾಸನ ನ.02: ಚಾಕುವಿನಿಂದ ಇರಿದು ಸೋದರ ಮಾವನನ್ನು ಅಳಿಯ ಕೊಲೆ ಮಾಡಿರುವ ಘಟನೆ ಅರಸೀಕೆರೆ (Arasikere) ತಾಲೂಕಿನ ಗಂಜಿಗೆರೆ ಗ್ರಾಮದಲ್ಲಿ ನಡೆದಿದೆ. ಪ್ರಭುಸ್ವಾಮಿ (50) ಕೊಲೆಯಾದ ಮಾವ. ಅಜಯ್ (22) ಕೊಲೆಗೈದ ಅಳಿಯ. ಗಂಜಿಗೆರೆ ಗ್ರಾಮದ ಸಾವಿತ್ರಮ್ಮ ಎಂಬುವರು ಏಳು ವರ್ಷದ ಹಿಂದೆ ಪತಿಯನ್ನು ಬಿಟ್ಟು ತವರು ಮನೆ ಸೇರಿದ್ದಾರೆ. ಸಾವಿತ್ರಮ್ಮ ಮತ್ತು ಅಣ್ಣ ಪ್ರಭುಸ್ವಾಮಿ ಅಕ್ಕಪಕ್ಕದ ಮನೆಯಲ್ಲಿ ವಾಸವಾಗಿದ್ದರು. ಪ್ರಭುಸ್ವಾಮಿ ಜಮೀನು ವಿಚಾರವಾಗಿ ಆಗಾಗ್ಗೆ ತಂಗಿ ಜೊತೆ ಜಗಳವಾಡುತ್ತಿದ್ದರು.

ಪ್ರಭುಸ್ವಾಮಿ ಕುಡಿದು ಬಂದು ತಂಗಿ ಮತ್ತು ಆಕೆಯ ಮಗಳನ್ನು ನಿಂದಿಸುತ್ತಿದ್ದನು. ಗಲಾಟೆ ವಿಚಾರವನ್ನು ಸಾವಿತ್ರಮ್ಮ ಮಗ ಅಜಯ್​ಗೆ​ ಹೇಳಿದ್ದರು. ಮಗ ಅಜಯ್​ ಬೇರೊಂದು ಊರಲ್ಲಿ ವಾಸವಾಗಿದ್ದು, ವಿಷಯ ತಿಳಿದು ಗಂಜಿಗೆರೆ ಗ್ರಾಮಕ್ಕೆ ಆಗಮಿಸಿದ್ದನು. ತನ್ನ ತಾಯಿಯೊಂದಿಗೆ ಜಗಳವಾಡುತ್ತಿರುವುದಕ್ಕೆ ಅಜಯ್​, ಮಾವ ಪ್ರಭುಸ್ವಾಮಿಯ ಜೊತೆ ಜಗಳ ತೆಗೆದಿದ್ದನು. ಜಗಳ ತಾರಕಕ್ಕೇರಿ ಅಜಯ್​, ಮಾವ ಪ್ರಭುಸ್ವಾಮಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದನು. ಬಾಣಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:27 am, Thu, 2 November 23

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?